ಕಾಡಿಗೆ ಬೆಂಕಿ ಬೀಳದಂತೆ ಎಚ್ಚರವಹಿಸಬೇಕಾದ್ದು ಎಲ್ಲರ ಜವಾಬ್ದಾರಿ : ಅರಣ್ಯಾಧಿಕಾರಿ
Team Udayavani, Mar 7, 2022, 5:41 PM IST
ಹುಣಸೂರು : ಮೈಸೂರು-ಬಂಟ್ವಾಳ ಹೆದ್ದಾರಿ ಪಕ್ಕದಲ್ಲೇ ಇರುವ ಅರಬ್ಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಜೀವ ವೈವಿದ್ಯತೆ ಇದೆ. ಜೊತೆಗೆ ಸಾಕಷ್ಟು ಪ್ರಾಣಿಗಳು ಆಶ್ರಯ ಪಡೆದಿದ್ದು, ಅರಣ್ಯವನ್ನು ಜತನದಿಂದ ಕಾಪಾಡಬೇಕಾದ್ದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಮೈಸೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಸುರೇಂದ್ರ ತಿಳಿಸಿದರು.
ತಾಲೂಕಿನ ಬಿಳಿಕೆರೆ ಹೋಬಳಿಯ ಅರಬ್ಬಿತಿಟ್ಟು ಸಂರಕ್ಷಿತ ಅರಣ್ಯ ಪ್ರದೇಶದಂಚಿನ ಗಾಗೇನಹಳ್ಳಿಯಲ್ಲಿ ಅರಣ್ಯ ಬೆಂಕಿಯಿಂದ ಕಾಡು ಸಂರಕ್ಷಿಸುವ ಕುರಿತು ಏರ್ಪಡಿಸಿದ್ದ ಬೀದಿ ನಾಟಕ ಉದ್ಘಾಟಿಸಿ ಮಾತನಾಡಿದರು. ಅರಣ್ಯ ಈ ನಾಡಿನ ಸಂಪತ್ತು, ಅಡವಿ ಇಲ್ಲದಿದ್ದಲ್ಲಿ ಮಾನವ-ವನ್ಯಜೀವಿಗಳಿಗೆ ಆಪತ್ತು, ಹೀಗಾಗಿ ಅರಣ್ಯಕ್ಕೆ ಬೆಂಕಿ ಬೀಳದಂತೆ ಮುಂಜಾಗ್ರತೆವಹಿಸುವಲ್ಲಿ ಅರಣ್ಯದಂಚಿನ ಗ್ರಾಮಸ್ಥರ ಹೊಣೆಗಾರಿಕೆ ಹೆಚ್ಚಿದೆ.
ಅರಬ್ಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಜೀವ ವೈವಿದ್ಯತೆ ಇದೆ. ಇಲ್ಲಿ ಸಾಕಷ್ಟು ಪ್ರಾಣಿಗಳು ಆಶ್ರಯ ಪಡೆದಿವೆ. ಕಾಡು ಇರುವುದರಿಂದ ನಾಡಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ ಎಂಬುದನ್ನು ಅರಿಯಬೇಕು. ಕಾಡಿಗೆ ತಂತಾನೆ ಬೆಂಕಿ ಬೀಳುವುದಿಲ್ಲ. ಕಿಡಿಗೇಡಿಗಳು, ದಾರಿ ಹೋಕರು ಬೀಡಿ-ಸಿಗರೇಟು ಸೇದಿ ಬಿಸಾಡುವುದರಿಂದ ಬೆಂಕಿ ಬೀಳಲಿದೆ. ಆದ್ದರಿಂದ ಯಾರೂ ಕೂಡ ಇಂತಹ ಕೆಲಸ ಮಾಡಬಾರದು, ಒಂದೊಮ್ಮೆ ಬೆಂಕಿ ಕಾಣಿಸಿಕೊಂಡಲ್ಲಿ ತಕ್ಷಣವೇ ಇಲಾಖೆಗೆ ಮಾಹಿತಿ ನೀಡುವ ಜೊತೆಗೆ ಬೆಂಕಿ ನಂದಿಸಲು ಗ್ರಾಮಸ್ಥರು ಸಹಕಾರ ನೀಡುವಂತೆ ಮನವಿ ಮಾಡಿದರು.
ಕೆ.ಆರ್.ನಗರದ ಕಲಾ ಜಾಗೃತಿ ತಂಡದವರಿAದ ಬೀದಿ ನಾಟಕ ಆಯೋಜಿಸಲಾಗಿತ್ತು. ಗ್ರಾ.ಪಂ.ಸದಸ್ಯರಾದ ರಾಜೇಶ್, ರಘು, ಪಿಡಿಓ ಮುತ್ತುಲಕ್ಷಿö್ಮ, ಡಿ.ಆರ್.ಎಫ್.ಓ.ರಾಘವೇಂದ್ರ ಹಾಗೂ ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.