ಸಹಪಠ್ಯ ಚಟುವಟಿಕೆಗಳು ಸೃಜನಶೀಲತೆ ಪ್ರತೀಕ

ಚಿತ್ರದುರ್ಗದ ಸಿರಿಗನ್ನಡ ಪ್ರಕಾಶನವು ಕೊಡುವ ಕನ್ನಡ ನಿಧಿ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Team Udayavani, Mar 7, 2022, 6:07 PM IST

ಸಹಪಠ್ಯ ಚಟುವಟಿಕೆಗಳು ಸೃಜನಶೀಲತೆ ಪ್ರತೀಕ

ಧಾರವಾಡ: ಕೋವಿಡ್‌-19 ಕಾರಣದಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಈ ಬದಲಾವಣೆಗಳ ನಡುವೆಯೇ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯಾಗಿದೆ ಎಂದು ಪ್ರಾಚಾರ್ಯರಾದ ಭಾರತಿ ಶಾನಭಾಗ ಹೇಳಿದರು.

ಜೆಎಸ್ಸೆಸ್‌ ಆರ್‌.ಎಸ್‌ ಹುಕ್ಕೇರಿಕರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡ ಪ್ರತಿಭಾ ಪರೀಕ್ಷೆ ಹಾಗೂ ವಿಜ್ಞಾನ ಪ್ರತಿಭಾ ಪರೀಕ್ಷೆಗಳಲ್ಲಿ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಪಠ್ಯದ ಜತೆ ಜತೆಗೆ ಸಹಪಠ್ಯ ಚಟುವಟಿಕೆಗಳ ವಿವಿಧ ಸ್ಪರ್ಧೆ ಹಾಗೂ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಇವು ವಿದ್ಯಾರ್ಥಿಗಳ ಸೃಜನಶೀಲತೆಯ ಪ್ರತೀಕ ಎಂದರು. ಸಂಯೋಜಕ ಡಾ| ಜಿ.ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿ ಹಾಗೂ ಉಪನ್ಯಾಸಕರ ಶ್ರಮ-ಆಸಕ್ತಿಯಿಂದ ಪ್ರತಿವರ್ಷವೂ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಮ್ಮ ಮಹಾವಿದ್ಯಾಲಯದ ಸಾಧನೆ ಏರುಮುಖದಲ್ಲಿ ಸಾಗುತ್ತಿದೆ. ಅದಕ್ಕೆ ಆಡಳಿತ ಮಂಡಳಿ ಸಹಕಾರವೂ ತುಂಬಾ ಶ್ಲಾಘನೀಯವಾದುದು ಎಂದು ಹೇಳಿದರು.

ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ, ಮಾರ್ಗದರ್ಶಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ ಡಾ| ಶಿವಾನಂದ ಟವಳಿ ಅವರಿಗೆ ಚಿತ್ರದುರ್ಗದ ಸಿರಿಗನ್ನಡ ಪ್ರಕಾಶನವು ಕೊಡುವ ಕನ್ನಡ ನಿಧಿ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಹ ಮಾರ್ಗದರ್ಶಿ ಉಪನ್ಯಾಸಕ ವೀರೇಂದ್ರಕುಮಾರ ಎಂ.ಎಸ್‌. ಅವರಿಗೆ ಗೌರವಿಸಲಾಯಿತು. ವಿಜ್ಞಾನ ಪ್ರತಿಭಾ ಪರೀಕ್ಷೆಯನ್ನು ಸಂಘಟಿಸಿ ರಾಜ್ಯ ರ್‍ಯಾಂಕ್‌ ಪಡೆಯುವಂತೆ ಪ್ರೇರೇಪಿಸಿದ ಮಾರ್ಗದರ್ಶಿ ಉಪನ್ಯಾಸಕಿ ಡಾ| ವಿಜಯಲಕ್ಷ್ಮೀ ದಂಡಿನ ಅವರಿಗೆ ರಾಜ್ಯಮಟ್ಟದ ಉತ್ತಮ ಸಂಘಟಕರು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹ ಮಾರ್ಗದರ್ಶಿ ಉಪನ್ಯಾಸಕಿ ವಿಜಯಲಕ್ಷ್ಮೀ ಬೆಟಗೇರಿ ಹಾಗೂ ಸೌಭಾಗ್ಯವತಿ ಮೆಣಶಿ ಅವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಸಾಧನೆಗೆ ಕಾರಣೀಕರ್ತ ಉಪನ್ಯಾಸಕರನ್ನು ಮತ್ತು ರ್‍ಯಾಂಕ್‌ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿ ಡಾ| ನ. ವಜ್ರಕುಮಾರ, ವಿತ್ತಾಧಿಕಾರಿ ಡಾ| ಅಜಿತಪ್ರಸಾದ ಹಾಗೂ ಅಭಿವೃದ್ಧಿ ಅಧಿಕಾರಿ ಡಾ| ಸೂರಜ ಜೈನ ಅಭಿನಂದಿಸಿದ್ದಾರೆ. ಕನ್ನಡ ವಿಭಾಗ ಮುಖ್ಯಸ್ಥ ಡಾ| ಗೋವಿಂದರಾಜ ತಳಕೋಡ ಪ್ರಾಸ್ತಾವಿಕ ಮಾತನಾಡಿದರು. ಡಾ| ಶಿವಾನಂದ ಟವಳಿ ನಿರೂಪಿಸಿದರು. ಡಾ| ಸಂಗಯ್ಯ ಶಿವಪ್ಪಯ್ಯನಮಠ ಸ್ವಾಗತಿಸಿದರು. ಡಾ| ವಿಜಯಲಕ್ಷ್ಮೀ ದಂಡಿನ ವಂದಿಸಿದರು.

ಫಲಿತಾಂಶ ಪ್ರಕಟ
120 ವಿದ್ಯಾರ್ಥಿಗಳು ಕನ್ನಡ ಪ್ರತಿಭಾ ಪರೀಕ್ಷೆಗೆ ಹಾಜರಾಗಿದ್ದು, ರಾಜ್ಯಕ್ಕೆ ಮೂರು ರ್‍ಯಾಂಕ್‌ಗಳು ಬಂದಿವೆ. ವೀಣಾ ಗೌಡಪ್ಪಗೌಡ ದ್ವಿತೀಯ ಹಾಗೂ ಸ್ನೇಹಾ ಬಾಲರೆಡ್ಡಿ, ಸಾಕ್ಷಿ ಹಿರೇಮಠ ತೃತೀಯ ರ್‍ಯಾಂಕ್‌ ಪಡೆದಿದ್ದಾರೆ. ಇದಲ್ಲದೇ 5 ವಿದ್ಯಾರ್ಥಿಗಳು ಜಿಲ್ಲಾ ರ್‍ಯಾಂಕ್‌, 4 ವಿದ್ಯಾರ್ಥಿಗಳು ತಾಲೂಕಾ ರ್‍ಯಾಂಕ್‌ ಪಡೆಯುವುದರೊಂದಿಗೆ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ಒಟ್ಟು 41 ವಿದ್ಯಾರ್ಥಿಗಳು ಭಾಗವಹಿಸಿದ್ದು, ಝಾಖೀಯಾ ಶಿರಹಟ್ಟಿ ರಾಜ್ಯಮಟ್ಟದಲ್ಲಿ 4ನೇ ರ್‍ಯಾಂಕ್‌ ಪಡೆದಿದ್ದಾಳೆ. ಇಬ್ಬರು ಜಿಲ್ಲಾ ರ್‍ಯಾಂಕ್‌, ಒಬ್ಬ ತಾಲೂಕಾ ರ್‍ಯಾಂಕ್‌ ಪಡೆಯುವುದರೊಂದಿಗೆ 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.