10 ನಿಮಿಷಕ್ಕೊಮ್ಮೆ ಬಾಂಬ್ ಸದ್ದು ಕೇಳುತ್ತಿತ್ತು ; ತಾಯ್ನಾಡಿಗೆ ಮರಳಿದ ಬ್ರಾಹ್ಮಿ ಪಾಟೀಲ
ಹದಿನೈದು ಸಾವಿರ ಜನ ವಾಪಸ್ ಬಂದಿದ್ದಾರೆ. ಇನ್ನೂ ಅನೇಕರು ವಾಪಾಸ್ ಬರುವವರಿದ್ದಾರೆ.
Team Udayavani, Mar 7, 2022, 6:25 PM IST
ಬೆಳಗಾವಿ: ಯುದ್ಧ ಪೀಡಿತ ಉಕ್ರೇನ್ನಿಂದ ಬೆಳಗಾವಿಗೆ ಮರಳಿದ ವಿದ್ಯಾರ್ಥಿನಿ ಬ್ರಾಹ್ಮಿ ಪಾಟೀಲ ಅವರನ್ನು ಇಲ್ಲಿಯ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ರವಿವಾರ ಸ್ವಾಗತಿಸಲಾಯಿತು.
ಬೆಂಗಳೂರಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚಿಕ್ಕೋಡಿ ಪಟ್ಟಣದ ಬ್ರಾಹ್ಮಿ ಪಾಟೀಲ ಅವರನ್ನು ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಹಾಗೂ ಜಿಲ್ಲಾ ಧಿಕಾರಿ ಎಂ.ಜಿ. ಹಿರೇಮಠ ಬರಮಾಡಿಕೊಂಡರು. ಬ್ರಾಹ್ಮಿ ಪಾಟೀಲ ಅವರನ್ನು ಕರ್ನಾಟಕದ ನೋಡಲ್ ಅಧಿಕಾರಿಗಳು ವಿಮಾನ ಮೂಲಕ ಬೆಂಗಳೂರು ಮಾರ್ಗವಾಗಿ ಬೆಳಗಾವಿಗೆ ವಾಪಸ್ ಕರೆತಂದಿದ್ದಾರೆ. ವಿಮಾಣ ನಿಲ್ದಾಣದಲ್ಲಿ ಮಗಳನ್ನು ಕಂಡ ಪೋಷಕರು ಸಂತಸಪಟ್ಟರು.ತಾಯಿ-ಮಗಳು ತಬ್ಬಿಕೊಂಡರು.
ಉಕ್ರೇನ್ ದೇಶದ ಚರ್ನಿವೇಸ್ಟ್ನ ಬೊಕೊ ಯುನಿಯನ್ ಸ್ಟೆಟ್ ಮೆಡಿಕಲ್ ವಿವಿಯಲ್ಲಿ ಎಂಬಿಬಿಎಸ್ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಬ್ರಾಹ್ಮಿ ಪಾಟೀಲ ಯುದ್ಧದಿಂದಾಗಿ ಆತಂಕಕ್ಕೀಡಾಗಿದ್ದರು. ಯುದ್ದ ಘೋಷಣೆಯಾದ ದಿನ ಕೀವ್ ವಿಮಾನ ನಿಲ್ದಾಣದಲ್ಲಿ ಬ್ರಾಹ್ಮಿ ಸಿಲುಕಿಕೊಂಡಿದ್ದರು.
ಉಕ್ರೇನ್ನಲ್ಲಿ ಪರಿಸ್ಥಿತಿ ತುಂಬಾ ಕೆಟ್ಟವಿತ್ತು. ಕೀವ್ ವಿಮಾನ ನಿಲ್ದಾಣದಲ್ಲಿ ಇದ್ದಾಗ ಹತ್ತು ನಿಮಿಷಕ್ಕೊಮ್ಮೆ ಬಾಂಬ್ ಸದ್ದು ಕೇಳಿಸುತ್ತಿತ್ತು. ಜೀವಂತವಾಗಿ ಬದುಕಿ ಬರುತ್ತೇವೋ ಇಲ್ಲವೋ ಎಂಬ ಭಯ ಇತ್ತು. ಇನ್ನೂ ಅನೇಕ ಭಾರತೀಯರು ಉಕ್ರೇನ್ನಲ್ಲಿ ಇದ್ದಾರೆ. ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಿ ಎಂದು ಬ್ರಾಹ್ಮಿ ಭಾವುಕರಾದರು.
ಕೀವ್ನಲ್ಲಿ ಭಾರತೀಯ ರಾಯಭಾರಿ ಕಚೇರಿಯಲ್ಲಿ ಆಶ್ರಯ ಪಡೆದಿದ್ದೆವು. ಫೆ. 24ರಂದು ನಾವು ವಾಪಸಾಗಲು ಟಿಕೆಟ್ ಬುಕ್ ಆಗಿತ್ತು. ಆದರೆ ಬಾಂಬ್ ದಾಳಿ ಆರಂಭವಾದ ಹಿನ್ನೆಲೆಯಲ್ಲಿ ವಿಮಾನ ಹಾರಾಟ ರದ್ದುಪಡಿಸಲಾಗಿತ್ತು. ಬಂಕರ್ಗಳಲ್ಲಿ ಕೆಲವು ದಿನಗಳ ಕಾಲ ಇದ್ದು ಅಲ್ಲಿಯೇ ಊಟ, ಉಪಹಾರ. ಕೀವ್ನಿಂದ ರೈಲಿನ ಮೂಲಕ ಗಡಿ ತಲುಪಿದೆವು ಎಂದು ಬ್ರಾಹ್ಮಿ ತಿಳಿಸಿದರು.
ಖಾರ್ಕಿವ್, ಕೀವ್ ಸೇರಿ ವಿವಿಧೆಡೆ ಸಿಲುಕಿರುವ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಬೇಕು. ನಮ್ಮ ವಿಶ್ವವಿದ್ಯಾಲಯದಲ್ಲಿದ್ದ ಕರ್ನಾಟಕದವರು ಸೇರಿದಂತೆ ದೇಶದ ಬಹುತೇಕರು ವಾಪಸ್ ಆಗಿದ್ದಾರೆ. ರೊಮೇನಿಯಾ ಸರ್ಕಾರದವರೂ ಸಹಾಯ ಮಾಡಿದರು. ಕೆಲವರು ಪೋಲೆಂಡ್ ದೇಶಕ್ಕೆ ಹೋಗಿದ್ದಾರೆ. ಕೆಲವರು ಇನ್ನು ಕೆಲವು ದಿನಗಳಲ್ಲಿ ಬರುವವರಿದ್ದಾರೆ ಎಂದು ಹೇಳಿದರು.
ಉಕ್ರೇನ್ದಿಂದ ವಾಪಾಸ್ ಆದ ವಿದ್ಯಾರ್ಥಿನಿಗೆ ಸ್ವಾಗತಿಸಿಕೊಂಡ ಬಳಿಕ ಮಾತನಾಡಿದ ಸಚಿವ ಉಮೇಶ ಕತ್ತಿ, ವೈದ್ಯಕೀಯ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿನಿ ಉಕ್ರೇನ್ಗೆ ಹೋಗಿದ್ದಳು. ಉಕ್ರೇನ್ ರಷ್ಯಾ ನಡುವಿನ ಯುದ್ಧ ಮಧ್ಯೆ ಅವಳು ಮರಳಿ ಭಾರತಕ್ಕೆ ಬಂದಿರುವುದು ಸಂತೋಷವಾಗಿದೆ. ಉಕ್ರೇನ್ನಿಂದ ಸುಮಾರು ಹದಿನೈದು ಸಾವಿರ ಜನ ವಾಪಸ್ ಬಂದಿದ್ದಾರೆ. ಇನ್ನೂ ಅನೇಕರು ವಾಪಾಸ್ ಬರುವವರಿದ್ದಾರೆ. ಆ ಎಲ್ಲರನ್ನೂ ವಾಪಾಸ್ ಕರೆದುಕೊಂಡು ಬರಲು ಪ್ರಧಾನಿ ಮೋದಿಯವರು ನಾಲ್ವರು ಸಚಿವರನ್ನು ನಿಯೋಜಿಸಿದ್ದಾರೆ. 2-3 ದಿನಗಳಲ್ಲಿ ದಿನಗಳಲ್ಲಿ ಎಲ್ಲರೂ ವಾಪಸ್ ಬರಲಿದ್ದಾರೆ ಎಂದರು.
ಆಪರೇಷನ್ ಗಂಗಾ ಬಗ್ಗೆ ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಉಕ್ರೇನ್ನಿಂದ ಬರುವವರನ್ನು ಸ್ವಾಗತಿಸಿಕೊಳ್ಳೋಣ. ನಂತರ ಕಾಂಗ್ರೆಸ್ನವರು ಏನು ಮಾತನಾಡುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸುತ್ತೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ನಮ್ಮ ದೇಶದ ಮಕ್ಕಳನ್ನು ತಂದು ಅವರವರ ಊರಿಗೆ ತಲುಪಿಸುವ ಕೆಲಸದಲ್ಲಿ ತೊಡಗಿದೆ ಎಂದು ಹೇಳಿದರು.
ಹಾವೇರಿಯ ವಿದ್ಯಾರ್ಥಿ ನವೀನ್ ಮೃತದೇಹ ಭಾರತಕ್ಕೆ ಕರೆ ತರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಕತ್ತಿ, ಮೃತದೇಹ ಎಲ್ಲಿಯೂ ಹೋಗಿಲ್ಲ. ಅದನ್ನು ಉಕ್ರೇನ್ನಿಂದ ತಂದೇ ತರುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಹೇಳಿದ್ದಾರೆ ಎಂದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಜಿಲ್ಲೆಯ 20 ಜನ ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿದ್ದಾರೆ. ಈಗಾಗಲೇ 9 ಜನ ವಿದ್ಯಾರ್ಥಿಗಳು ವಾಪಸ್ ಬಂದಿದ್ದಾರೆ. ಇನ್ನೂ ಓರ್ವ ವಿದ್ಯಾರ್ಥಿ ಬೆಂಗಳೂರಿನಲ್ಲಿ ಇದ್ದಾರೆ. ಇನ್ನೂ 7 ಜನ ದೆಹಲಿ ತಲುಪಿದ್ದು, ಬೆಳಗಾವಿಗೆ ವಾಪಸ್ ಬರಲಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರಲು ಮುಖ್ಯಮಂತ್ರಿಗಳ ಸೂಚನೆ ಇದೆ. ಇನ್ನೂ ಮೂರು ಜನರನ್ನು ಕರೆತರಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು
Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಢೀರ್ ರಾಜೀನಾಮೆ
Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ
Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.