ಶಿರ್ವ: ಮಹಿಳೆಯರ 3ನೇ ಸಂಜೀವಿನಿ ಸಂತೆಗೆ ಚಾಲನೆ


Team Udayavani, Mar 8, 2022, 5:15 PM IST

Untitled-1

ಶಿರ್ವ: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಗಳ 3ನೇ ಸಂಜೀವಿನಿ ಸಂತೆಯು ಮಾ. 8 ರಂದು ಶಿರ್ವ ಮಹಿಳಾ ಮಂಡಲದ ಮಹಿಳಾ ಸೌಧದಲ್ಲಿ ನಡೆಯಿತು.

ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕಾಲ ಮೇಲೆ ನಿಂತು ಕುಟುಂಬ ನಿರ್ವಹಣೆಯ ಜತೆಗೆ ದೇಶ ಕಟ್ಟುವ ಕಾಯಕದಲ್ಲಿ ಭಾಗವಹಿಸಬೇಕಾಗಿದೆ. ಸ್ವಾವಲಂಬಿ ಭಾರತವಾಗುವ ನಿಟ್ಟಿನಲ್ಲಿ ಮಹಿಳೆಯರು ತಮ್ಮ ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಸಂಜೀವಿನಿ ಸಂತೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಮಜೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರತಾಪ್‌ ಮಾತನಾಡಿದರು.

ಶಿರ್ವ ಗ್ರಾ.ಪಂ. ಸೇರಿದಂತೆ ಮಜೂರು,ಮುದರಂಗಡಿ ,ಬೆಳ್ಳೆ ,ಇನ್ನಂಜೆ, ಕುತ್ಯಾರು ಗ್ರಾಮ ಪಂಚಾಯತ್‌ಗಳ ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಸದಸ್ಯೆಯರು ಮನೆಯಲ್ಲಿಯೇ ತಯಾರಿಸಿದ,ಉತ್ಪಾದಿಸಿದ ಮತ್ತು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿತ್ತು.

ಮಹಿಳಾ ದಿನಾಚರಣೆಯ ಅಂಗವಾಗಿ ವಿಷಜಂತು ಕಡಿತಕ್ಕೆ ಚಿಕಿತ್ಸೆ ನೀಡುತ್ತಿರುವ ನಾಟಿ ವೈದ್ಯೆ, ಶಿರ್ವ ಗ್ರಾ.ಪಂ. ಸದಸ್ಯೆ ಶಾಲಿನಿ ಡಿ. ಅಮೀನ್‌ ಅವರನ್ನು ಶಿರ್ವ ಗ್ರಾ.ಪಂ. ವತಿಯಿಂದ ಸಮ್ಮಾನಿಸಲಾಯಿತು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಸಾರ್ವಜನಿಕರಿಗೆ ಉಚಿತ ಮಧುಮೇಹ ರಕ್ತದೊತ್ತಡ ಮತ್ತು ಹಲ್ಲಿನ ತಪಾಸಣೆಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಕುತ್ಯಾರು ಗ್ರಾ.ಪಂ. ಅಧ್ಯಕ್ಷೆ ಲತಾ ಎಸ್‌.ಆಚಾರ್ಯ, ಮಜೂರು ಗ್ರಾ.ಪಂ. ಅಧ್ಯಕ್ಷೆ ಶರ್ಮಿಳಾ ಜೆ. ಆಚಾರ್ಯ,ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾಡೋìಜಾ, ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಶಿರ್ವ ಒಕ್ಕೂಟದ ಅಧ್ಯಕ್ಷೆ ಗೀತಾ ವಾಗ್ಲೆ, ಕುತ್ಯಾರು-ಕಳತ್ತೂರು ಒಕ್ಕೂಟದ ಅಧ್ಯಕ್ಷೆ ಶಾರದೇಶ್ವರೀ ಗುರ್ಮೆ, ಬೆಳ್ಳೆ ಒಕ್ಕೂಟದ ಅಧ್ಯಕ್ಷೆ ಹೆಲೆನ್‌ ಡಿಸೋಜಾ,ಎನ್‌ಆರ್‌ಎಲ್‌ಎಂ ನೋಡಲ್‌ ಅಧಿಕಾರಿ ಗೀತಾ ಸುವರ್ಣ,ಶಿರ್ವ ಗ್ರಾ.ಪಂ. ಮಾಜಿ ಅಧ್ಯಕ್ಷ /ಹಾಲಿ ಸದಸ್ಯ ಹಸನಬ್ಬ ಶೇಖ್‌,ಶಿರ್ವಪಂ. ಕಾರ್ಯದರ್ಶಿ ಮಂಗಳಾ ಜೆ.ವಿ., ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಗಾಯತ್ರಿ,ಶಿರ್ವ, ಮುದರಂಗಡಿ ,ಇನ್ನಂಜೆ,ಬೆಳ್ಳೆ ,ಮುದರಂಗಡಿ ಮತ್ತು ಕುತ್ಯಾರು ಗ್ರಾಮ ಪಂಚಾಯತ್‌ಗಳ ಸದಸ್ಯರು, ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿರ್ವ ಗ್ರಾ.ಪಂ. ಪಿಡಿಒ ಅನಂತ ಪದ್ಮನಾಭ ನಾಯಕ್‌ ಸ್ವಾಗತಿಸಿ,ವಂದಿಸಿದರು.

ಜಿ.ಪಂ.ಸಿಇಒ. ಭೇಟಿ :

ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ| ನವೀನ್‌ ಭಟ್‌ ಸಂಜೀವಿನಿ ಸಂತೆಗೆ ಭೇಟಿ ಮಾತನಾಡಿ ಶಿರ್ವಗ್ರಾ.ಪಂ.ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರ ಸಂಜೀವಿನಿ ಸಂತೆಗೆ ಚಾಲನೆ ನೀಡಲಾಗಿದೆ. ಪರಿಸರದ 6 ಪಂಚಾಯತ್‌ಗಳವರು ಒಟ್ಟು ಸೇರಿ ಆಯೋಜಿಸಿದ ಸಂಜೀವಿನಿ ಸಂತೆಯು ಮಹಿಳೆಯರ ಸ್ವಾವಲಂಬಿಗಳಾಗುವುದರೊಂದಿಗೆ ಅವರ ಆರ್ಥಿಕ ಚಟುವಟಿಕೆಗಳಿಗೆ ಭದ್ರ ಬುನಾದಿಯಾಗುತ್ತದೆ ಎಂದು ಹೇಳಿದರು. ಎನ್‌ಆರ್‌ಎಲ್‌ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ಯ, ಅಧಿಕಾರಿ ಪಾಂಡುರಂಗ, ಜಿ.ಪಂ.ಅಧಿಕಾರಿ ವರ್ಗ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.