ಮಾರ್ಚ್ ಅಂತ್ಯಕ್ಕೆ 100 ಕೃಷಿ ಸಂಜೀವಿನಿ ವಾಹನಗಳು ಸೇವೆಗೆ ಲಭ್ಯ: ಕೃಷಿ ಸಚಿವರು
Team Udayavani, Mar 8, 2022, 11:00 PM IST
ವಿಧಾನಪರಿಷತ್ತು: “ಪ್ರಯೋಗಾಲಯದಿಂದ ರೈತರ ನೆಲಗಳಿಗೆ’ ಎಂಬ ಪರಿಕಲ್ಪನೆಯಡಿ ರೈತರ ಹೊಲಗಳಿಗೆ ಹೋಗಿ ಮಣ್ಣಿನ ಫಲವತ್ತತೆ ಮತ್ತು ಕೀಟಬಾಧೆ ಬಗ್ಗೆ ಪರೀಕ್ಷೆ ನಡೆಸಲು ಜಾರಿಗೆ ತಂದಿರುವ “ಕೃಷಿ ಸಂಜೀವಿನಿ’ ಯೋಜನೆಯಡಿ ಈ ತಿಂಗಳ ಅಂತ್ಯಕ್ಕೆ 100 ವಾಹನಗಳು ಸೇವೆಗೆ ಲಭ್ಯವಾಗಲಿವೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಜೆಡಿಎಸ್ ಸದಸ್ಯ ಗೋವಿಂದರಾಜು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಸದ್ಯ 44 ಕೃಷಿ ಸಂಜೀವಿನಿ ವಾಹನಗಳು ಕಾರ್ಯಾಚರಿಸುತ್ತಿವೆ. ಹೆಚ್ಚುವರಿ 164 ವಾಹನಗಳು ಲಭ್ಯವಾಗಿವೆ. ಈ ಪೈಕಿ 100 ವಾಹನಗಳು ಈ ತಿಂಗಳ ಅಂತ್ಯಕ್ಕೆ ಮತ್ತು ಉಳಿದ 64 ವಾಹನಗಳು ಏಪ್ರಿಲ್ ವೇಳೆಗೆ ಸೇವೆಗೆ ಲಭ್ಯವಾಗಲಿವೆ ಎಂದು ತಿಳಿಸಿದರು.
ಅಲ್ಲದೇ ಕೀಟನಾಶಕ ಗುಣಮಟ್ಟ ಪರೀಕ್ಷಿಸಲು ರಾಜ್ಯದ ಬೆಂಗಳೂರು, ಬಳ್ಳಾರಿ, ಶಿವಮೊಗ್ಗ, ಧಾರವಾಡ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 6 ರಾಜ್ಯ ಪೀಡೆನಾಶಕ ಪರೀಕ್ಷಣಾ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಕೇಂದ್ರೀಯ ಕೀಟನಾಶಕ ಮಂಡಳಿಯ ಪ್ರಾದೇಶಿಕ ಕೇಂದ್ರವನ್ನು ಕರ್ನಾಟಕದಲ್ಲಿ ಸ್ಥಾಪಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುಗುದು ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ವಾರ್ಷಿಕವಾಗಿ 6,800 ಮಾದರಿಗಳ ಸಂಗ್ರಹಣೆ ಗುರಿಯನ್ನು ಕೀಟನಾಶಕ ಪರಿವೀಕ್ಷಕರಿಗೆ ನೀಡಲಾಗಿರುತ್ತದೆ. ವಿಶ್ಲೇಷಣೆಯಲ್ಲಿ ಕಳಪೆ ಗುಣಮಟ್ಟವೆಂದು ವರದಿಯಾದ ಮಾದರಿಗಳ ಕೀಟನಾಶಕ ತಯಾರಕರ ಮತ್ತು ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. 2020-21ನೇ ಸಾಲಿನಲ್ಲಿ 5,390 ಪೀಡೆನಾಶಕ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, 66 ಪೀಡೆನಾಶಕ ಕಳಪೆ ಎಂದು ವರದಿ ಯಾಗಿರುತ್ತದೆ. 2022ರ ಜನೆವರಿ ಅಂತ್ಯಕ್ಕೆ 4,401 ಪೀಡೆನಾಶಕ ಮಾದರಿಗಳ ಪೈಕಿ 59 ಕಳಪೆ ಎಂದು ವರದಿಯಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.