ಬ್ಯಾಂಕ್‌ನ ನೂತನ ಕಾರ್ಯಾಧ್ಯಕ್ಷೆಯಾಗಿ ಹಿಮಾಂಗಿ ನಾಡಕರ್ಣಿ ನೇಮಕ


Team Udayavani, Mar 9, 2022, 11:28 AM IST

ಬ್ಯಾಂಕ್‌ನ ನೂತನ ಕಾರ್ಯಾಧ್ಯಕ್ಷೆಯಾಗಿ ಹಿಮಾಂಗಿ ನಾಡಕರ್ಣಿ ನೇಮಕ

ಮುಂಬಯಿ: ಎನ್‌ಕೆಜಿಎಸ್‌ಬಿ ಕೋ – ಆಪರೇಟಿವ್‌ ಬ್ಯಾಂಕ್‌ನ ನಿರ್ದೇಶಕ ಮಂಡಳಿಯ ಆಯ್ಕೆಗೆ ಫೆ. 27ರಂದು ನಡೆದ ಚುನಾವಣೆಯಲ್ಲಿ ಬ್ಯಾಂಕ್‌ನ ಸದಸ್ಯರು ಬದಲಾವಣೆಯ ಪರವಾಗಿ ಮತ ಚಲಾಯಿಸಿದ್ದಾರೆ.

ಆಯ್ಕೆಯಾದ ಹೊಸ ನಿರ್ದೇಶಕ ಮಂಡಳಿಯಲ್ಲಿ  ಬ್ಯಾಂಕಿಂಗ್‌, ಹಣಕಾಸು, ಮಾನವ ಸಂಪನ್ಮೂಲ, ಕಾನೂನು ಕ್ಷೇತ್ರದ ತಜ್ಞರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ವಿಶೇಷವಾಗಿ ಮಹಿಳಾ ನಿರ್ದೇಶಕರು ಆಯ್ಕೆಯಾಗಿರುವುದು ಉತ್ತಮ ಬೆಳೆವಣಿಗೆಯಾಗಿದೆ. ಹಿಮಾಂಗಿ ನಾಡಕರ್ಣಿ ಅವರು ಎನ್‌ಕೆಜಿ ಎಸ್‌ಬಿ ಕೋ – ಆಪರೇಟಿವ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಬ್ಯಾಂಕ್‌ನ 104 ವರ್ಷಗಳ ಇತಿಹಾಸದಲ್ಲಿ  ಮೊದಲ ಬಾರಿಗೆ ಮಹಿಳೆಯೊಬ್ಬರು ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ  ಭಾರತದ ಅಗ್ರಮಾನ್ಯ ಸಹಕಾರಿ ಬ್ಯಾಂಕ್‌ ಮಹಿಳೆಯರ ಸಾಧನೆಗೆ ಗರಿ ಮೂಡಿಸಿದಂತಾಗಿದೆ. ಚಾರ್ಟರ್ಡ್‌ ಅಕೌಂಟೆಂಟ್‌ ಆಗಿರುವ ಹಿಮಾಂಗಿ ನಾಡಕರ್ಣಿ ಅವರು 30 ವರ್ಷಗಳ ಕಾಲ ಅಗ್ರಮಾನ್ಯ ಸಹಕಾರಿ ಬ್ಯಾಂಕ್‌ಗಳಲ್ಲಿ ಉನ್ನತ ಸಾœನಗಳನ್ನು ಅಲಂಕರಿಸಿ ಅಪಾರ ಅನುಭವ ಪಡೆದಿದ್ದಾರೆ. ಇನ್ನೋರ್ವ ಹೊಸ ಮುಖ ಕಿರಣ್‌ ಅಣ್ಣಪ್ಪ ಕಾಮತ್‌ ಅವರು ಮೊದಲ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮುಂಬಯಿಯಲ್ಲಿ  ಪ್ರಧಾನ ಕಾರ್ಯಾಲಯ ಹೊಂದಿರುವ ಎನ್‌ಕೆಜಿಎಸ್‌ಬಿ ಕೋ-ಆಪರೇಟಿವ್‌ ಬ್ಯಾಂಕ್‌ 104 ವರ್ಷಗಳ ಸುದೀರ್ಘ‌ ಪರಂಪರೆ ಹೊಂದಿರುವುದಷ್ಟೇ ಅಲ್ಲದೆ ಭಾರತದ ಅಗ್ರಮಾನ್ಯ 10 ಸಹಕಾರಿ ಬ್ಯಾಂಕ್‌ಗಳಲ್ಲಿ ಒಂದಾಗಿದೆ. ಬ್ಯಾಂಕ್‌ನ ನೂತನ ನಿರ್ದೇಶಕರಾಗಿ ಶಶಾಂಕ್‌ ಗುಲ್‌ಗ‌ುಲೆ, ಕಿರಣ್‌ ವಿಷ್ಣು ಕಾಮತ್‌, ವಸಂತ್‌ ಕುಲಕರ್ಣಿ, ಸಂದೀಪ್‌ ಪ್ರಭು, ಮಂಗಳಾ ಪ್ರಭು, ಡಾ| ಅನುಯಾ ವಾರ್ತೆ, ಶಾಂತೇಶ್‌ ವಾರ್ತೆ, ರಂಗನಾಥನ್‌ ಐಯ್ಯರ್‌, ನಿಲಂ ವಾರ್ತೆ, ಸಂತೋಷ್‌ ಸೋನಾವನೆ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.