ಸಮ್ಮೇಳನಾಧ್ಯಕ್ಷೆ ಡಾ| ಸುಶೀಲಾದೇವಿಗೆ ಕಸಾಪ ಆಮಂತ್ರಣ
Team Udayavani, Mar 9, 2022, 4:53 PM IST
ದಾವಣಗೆರೆ: ತಾಲೂಕಿನ ಎಲೆಬೇತೂರು ಗ್ರಾಮದಲ್ಲಿಮಾ. 26 ಹಾಗೂ 27ರಂದು ಹಮ್ಮಿಕೊಳ್ಳಲಾದ 11ನೇಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿಆಯ್ಕೆಯಾಗಿರುವ ಜಿ.ಎಸ್. ಸುಶೀಲಾದೇವಿ ಆರ್.ರಾವ್ ಅವರ ಮನೆಗೆ ಕಸಾಪ ಜಿಲ್ಲಾ ಘಟಕದಪದಾಧಿಕಾರಿಗಳು ತೆರಳಿ ಸಮ್ಮೇಳನದ ಆಮಂತ್ರಣನೀಡಿದರು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪಮಾತನಾಡಿ, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಬಗ್ಗೆಕಾರ್ಯಕಾರಿ ಸಮಿತಿಯಲ್ಲಿ ಈ ಬಾರಿ ಮಹಿಳೆಯರಿಗೆಸರ್ವಾಧ್ಯಕ್ಷ ಸ್ಥಾನ ವಹಿಸಿಕೊಡಬೇಕೆಂದು ವಿಷಯಪ್ರಸ್ತಾಪಿಸಲಾಯಿತು. ತಕ್ಷಣ ಕಾರ್ಯಕಾರಿಸಮಿತಿಯಲ್ಲಿ ಸದಸ್ಯರೆಲ್ಲರೂ ಅತ್ಯಂತ ಸಂತೋಷದಿಂದಸರ್ವಾನುಮತದಿಂದ ತಮ್ಮ ಹೆಸರನ್ನು ಸೂಚಿಸಿದ್ದಾರೆ.
ಸುಮಾರು 10 ಕಾದಂಬರಿಗಳು, 50 ಬಿಡಿ ಲೇಖನಗಳು,ಕಥೆಗಳು, ನಾಟಕಗಳು ಹೊರಬಂದಿರುವುದುಸುಶೀಲಾದೇವಿಯವರ ಸಾಹಿತ್ಯ ಕೃಷಿಗೆ ಹಿಡಿದ ಕೈಗನ್ನಡಿ.ನಾಟಕಗಳು ಬಾನುಲಿಯಲ್ಲಿ ಬಿತ್ತರಗೊಂಡಿರುವುದುನಿಜಕ್ಕೂ ಸಂತೋಷದ ಸಂಗತಿ ಎಂದರು.ಅದೇ ರೀತಿ ಎಲೆಬೇತೂರು ಗ್ರಾಮದ ಮುಖ್ಯಸ್ಥರು,ಜಿಲ್ಲಾ ಕಸಾಪ ನಿಯೋಗ ಸಿರಿಗೆರೆಗೆ ತೆರಳಿ ತರಳಬಾಳುಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯಮಹಾಸ್ವಾಮೀಜಿಯವರನ್ನು ಸಮ್ಮೇಳನದ ಉದ್ಘಾಟನೆಗೆಆಮಂತ್ರಿಸಿದ್ದೇವೆ. ಪೂಜ್ಯರು ಸಂತೋಷದಿಂದಆಗಮಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಮಾಜಿ ಕಸಾಪ ಜಿಲ್ಲಾಧ್ಯಕ್ಷ ಎ.ಆರ್. ಉಜ್ಜಿನಪ್ಪ,ನಿಕಟಪೂರ್ವ ಅಧ್ಯಕ್ಷ ಡಾ| ಎಚ್.ಎಸ್. ಮಂಜುನಾಥ್ಕುರ್ಕಿ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಬಿ.ದಿಳ್ಳ$Âಪ್ಪ, ರೇವಣಸಿದ್ದಪ್ಪ ಅಂಗಡಿ, ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ದಾವಣಗೆರೆ ತಾಲೂಕುಕಸಾಪ ಅಧ್ಯಕ್ಷೆ ಎ.ಜಿ. ಸುಮತಿ ಜಯಪ್ಪ, ಜಿಲ್ಲಾಪದಾಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.