ಬೇಡಿಕೆ ಈಡೇರಿಸಲು ಆಗ್ರಹ
Team Udayavani, Mar 10, 2022, 5:39 PM IST
ಇಂಡಿ: ರಾಜ್ಯದ ಎಲ್ಲ ಅಂಗವಿಕಲರಿಗೆ ಪ್ರತಿ ತಿಂಗಳು 6000 ಸಾವಿರ ರೂ. ಮಾಸಾಶನ ನೀಡಬೇಕು. ರಾಜ್ಯದ ವಿದ್ಯಾವಂತ ಅಂಗವಿಕಲರಿಗೆ ಉದ್ಯೋಗ ಕಲ್ಪಿಸಿ ಬದುಕು ರೂಪಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ತಾಲೂಕಾಧ್ಯಕ್ಷ ಎಸ್.ಎಂ. ಮಕಾನದಾರ ಹೇಳಿದರು.
ಬುಧವಾರ ಪಟ್ಟಣದ ಆಡಳಿತ ಸೌಧದ ಮುಂದೆ ಅಂಗವಿಕಲರ ಬೇಡಿಕೆಗಳನ್ನು ಈಡೇರಿಸುವಂತೆ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸುಮಾರು 20 ಲಕ್ಷ ಅಂಗವಿಕಲರಿದ್ದರೂ 2022-23ನೇ ಸಾಲಿನ ಬಜೆಟ್ನಲ್ಲಿ ಅಂಗವಿಕಲರಿಗೆ ಯಾವುದೇ ಹೊಸ ಸೌಲಭ್ಯಗಳನ್ನು ಘೋಷಣೆ ಮಾಡಿಲ್ಲ. ಅಂಗವಿಕಲರನ್ನು ರಾಜ್ಯ ಸರ್ಕಾರ ಕಡಗಣಿಸಿದೆ. ಇಂದಿನ ದುಬಾರಿ ಕಾಲದಲ್ಲಿ ಅಂಗವಿಕಲರಿಗೆ ಜೀವನ ಸಾಗಿಸುವುದು ತುಂಬಾ ಕಷ್ಟಕರವಾಗಿದೆ. ರಾಜ್ಯ ಸರ್ಕಾರ ಕೂಡಲೆ ಅಂಗವಿಕಲರಿಗೆ ಮಾಸಾಶನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ಶಿವಲಿಂಗಪ್ಪ ನಾಯ್ಕೊಡಿ ಮಾತನಾಡಿ, ದಿವ್ಯಾಂಗ ಕಲ್ಯಾಣ ಶೀರ್ಷಿಕೆಯಡಿ ಮಾಸಿಕ ಪಿಂಚಣಿ ನೀಡಬೇಕು. ಹರಿಯಾಣ ಸರ್ಕಾರದ ಮಾದರಿಯಲ್ಲಿ ಅಂಗವಿಕಲರಿಗೆ ವಿವಿಧ ಇಲಾಖೆಯಲ್ಲಿರುವ ಹುದ್ದೆಗಳಿಗೆ ನೇಮಕ ಮಾಡಬೇಕು. ಅಂಗವಿಕಲರ ವ್ಯಕ್ತಿಗಳ ಗೃಹ ತೆರಿಗೆ ವಿನಾಯತಿ ನೀಡಬೇಕು. 40 ಯುನಿಟ್ ವಿದ್ಯುತ್ ಉಚಿತವಾಗಿ ನೀಡಬೇಕು. ಪೆಟ್ರೋಲ್, ಡೀಸೆಲ್ ಶೇ 50 ರಿಯಾಯಿತಿ ದರದಲ್ಲಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನಕಾರರನ್ನು ಉದ್ದೇಶಿಸಿ ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ, ಶ್ರೀಶೈಲಗೌಡ ಪಾಟೀಲ ಮಾತನಾಡಿದರು ನಿಂಗರಾಜ ಬಿಸನಾಳ, ಸುಮಯ್ಯ ಮೊಮಿನ್, ಬಾಬು ಸಂಗೋಗಿ, ನೂರಹ್ಮದ ಪಠಾಣ, ಭರಮಣ್ಣ ಪೂಜಾರಿ, ಬಸವರಾಜ ಸೊನ್ನ, ಸಿದ್ದು ಗುಲೆ, ರೇಖಾ ಕ್ಷತ್ರಿ, ಸೀತಾ ಪೂಜಾರಿ, ಪಾಂಡು ರಾಠೊಡ, ಕನ್ನಯಸಿಂಗ್ ಹಜಾರೆ, ಶಿವಾನಂದ ಏಳಗಿ, ಈರಣ್ಣ ಡಂಗಿ, ಬಾಬುಶ್ಯಾ ಹೊಸಮನಿ, ಲಕ್ಷ್ಮಣ ಚವ್ಹಾಣ, ವಿಲಾಸ ಶಿವಶರಣ, ನಿಲಾಬಾಯಿ ಕಟ್ಟಿಮನಿ, ಮಹಿಬೂಬ ಅಶ್ಟೇಕರ, ಸಿದ್ದು ಡಂಗಾ, ಮರೆಪ್ಪ ಗಿರಣಿವಡ್ಡರ, ರಾಜು ಮುಲ್ಲಾ, ಬಾಬು ಮೇತ್ರಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.