![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 11, 2022, 9:27 AM IST
ಹೊಸದಿಲ್ಲಿ: ಕರಾವಳಿ ರಾಜ್ಯ ಗೋವಾದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲು ಬಿಜೆಪಿ ಸಜ್ಜಾಗಿದೆ. ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ತೋರಿದ್ದರೂ, ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಾಗಿಲ್ಲ. ಬಿಜೆಪಿ 20 ಕ್ಷೇತ್ರಗಳು ಗೆದ್ದುಕೊಂಡಿದೆ. ಆದರೆ ಬಹುಮತಕ್ಕೆ 21 ಸೀಟುಗಳ ಅವಶ್ಯಕತೆಯಿದೆ.
ಪ್ರಾದೇಶಿಕ ಪಕ್ಷ ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿ (ಎಂಜಿಪಿ) ಸರ್ಕಾರ ರಚಿಸಲು ಬಿಜೆಪಿಗೆ ಬೆಂಬಲ ನೀಡಿದೆ. ಎಂಜಿಪಿ ಎರಡು ಸ್ಥಾನಗಳಲ್ಲಿ ಜಯ ಸಾಧಿಸಿದೆ. ಆಂಟೋನಿಯೊ ವಾಸ್, ಚಂದ್ರಕಾಂತ್ ಶೆಟ್ಟಿ ಮತ್ತು ಅಲೆಕ್ಸ್ ರೆಜಿನಾಲ್ಡ್ ಎಂಬ ಮೂವರು ಪಕ್ಷೇತರರ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈಗ 25 ಸ್ಥಾನಗಳನ್ನು ಹೊಂದಿದ್ದು, 40 ಸದಸ್ಯ ಬಲದ ಸದನದಲ್ಲಿ ಅರ್ಧಕ್ಕಿಂತ ಹೆಚ್ಚು ಸ್ಥಾನವನ್ನು ಪಡೆದಿವೆ.
ಇಂದು ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವುದಾಗಿ ಗೋವಾ ಬಿಜೆಪಿ ಹೇಳಿದೆ. ಸೋಮವಾರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ರಾಜಕಾರಣಿಗಳು ಲಂಚ ತಿನ್ನುವುದು ಕಡಿಮೆ ಮಾಡಬೇಕು: ಯತ್ನಾಳ್
ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷವು ಕರಾವಳಿ ರಾಜ್ಯದಲ್ಲಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭವಿಷ್ಯ ನುಡಿದಿತ್ತು. ಅದು ಈಗ ನಿಜವಾಗಿದೆ. ಇದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಆದರೆ ಎಂಜಿಪಿಯ ಬಿಜೆಪಿ ಬೆಂಬಲದ ನಡೆ ಆ ಮೈತ್ರಿಯನ್ನು ದೂರ ಮಾಡಿದೆ.
ಪಂಜಾಬ್ ನಲ್ಲಿ ಭರ್ಜರಿ ಜಯ ಸಾಧಿಸಿದ ಆಮ್ ಆದ್ಮಿ ಪಕ್ಷವು ಗೋವಾದಲ್ಲಿ ಕೇವಲ ಮೂರು ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ 11ರಲ್ಲಿ ಗೆಲುವು ಸಾಧಿಸಿದೆ.
ಗೋವಾದ ಜನರ ತೀರ್ಪನ್ನು ಪಕ್ಷ ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ. “ನಾವು ಗೋವಾದ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. 11 ಸ್ಥಾನಗಳಲ್ಲಿ ನಮಗೆ ಮತ ಹಾಕಿದ ಗೋವಾದ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ನಮ್ಮ ಕೆಲವು ನಾಯಕರನ್ನು ಗೋವಾದ ಜನರು ಒಪ್ಪಿಕೊಳ್ಳದಿರುವುದು ಬೇಸರದ ಸಂಗತಿ. ಮುಂಬರುವ ಚುನಾವಣೆಯಲ್ಲಿ ಗೋವಾದ ಜನತೆಗಾಗಿ ಇವರು ಉತ್ತಮ ಅಭ್ಯರ್ಥಿಗಳು ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನನಗೆ ಖಾತ್ರಿಯಿದೆ.” ಎಂದು ಚಿದಂಬರಂ ಸುದ್ದಿಗಾರರಿಗೆ ತಿಳಿಸಿದರು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.