ರೈತರ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ನೀಡಲು ಆಗ್ರಹ
ಟ್ರಾನ್ಸ್ಫಾರ್ಮರ್ ಸುಟ್ಟ 24 ಗಂಟೆಗಳ ಒಳಗಾಗಿ ಬದಲಾಯಿಸಬೇಕು.
Team Udayavani, Mar 11, 2022, 5:14 PM IST
ಸಂಡೂರು: ಬೇಸಿಗೆ ಪ್ರಾರಂಭವಾಗಿದ್ದು, ವಿದ್ಯುತ್ ಕಣ್ಣಮುಚ್ಚಾಲೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಪಂಪ್ಸೆಟ್ ಗಳಿಗೆ ನಿರಂತರ ವಿದ್ಯುತ್ ನೀಡಬೇಕು ಎಂದು ರೈತ ಸಂಘದ ಅಧ್ಯಕ್ಷ ಮೇಟಿ ಚಂದ್ರಶೇಖರ್ ಒತ್ತಾಯಿಸಿದರು.
ಪಟ್ಟಣದ ಜೆಸ್ಕಾಂ ಕಚೇರಿ ಮುಂಭಾಗದಲ್ಲಿ ಸಂಡೂರು, ಧರ್ಮಾಪುರ, ಲಕ್ಷ್ಮೀಪುರ, ಭುಜಂಗನಗರ, ನರಸಿಂಗಾಪುರ, 18 ಹುಲಿಕುಂಟೆ, ಕೃಷ್ಣಾನಗರ ಸೇರಿದಂತೆ ವಿವಿಧ ಗ್ರಾಮಗಳ ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ಧರ್ಮಾಪುರ, ಹುಲಿಕುಂಟೆ, ಲಕ್ಷ್ಮೀಪುರ ಗ್ರಾಮಗಳ ವ್ಯಾಪ್ತಿಯ ಜಮೀನುಗಳಿಗೆ ಈ ಹಿಂದೆ 24 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುತ್ತಿತ್ತು. ಈಗ ರೈತರು ಮೊದಲಿನಂತೆಯೆ ವಿದ್ಯುತ್ ಸಿಗುವುದೆಂಬ ನಂಬಿಕೆಯಲ್ಲಿ ಬೆಳೆಗಳನ್ನು ಹಾಕಿರುತ್ತಾರೆ. ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ಬಿಸಿಲಿನ ಪ್ರಭಾವ ಹೆಚ್ಚು ಇರಲಿದ್ದು ರೈತರ ಬೆಳೆಗೆ ಹಾನಿಯಾಗುತ್ತದೆ. ಹೀಗಾಗಿ ಈ ಮುಂಚೆ ಇರುವಂತೆ ಬೆಳೆ ಬರುವ ತನಕ ಪೂರ್ಣಾವಧಿ ವಿದ್ಯುತ್ ನೀಡಬೇಕೆಂದು ಒತ್ತಾಯಿಸಿದರು.
ಟ್ರಾನ್ಸ್ಫಾರ್ಮರ್ ಸುಟ್ಟ 24 ಗಂಟೆಗಳ ಒಳಗಾಗಿ ಬದಲಾಯಿಸಬೇಕು. ಗಂಗಾಕಲ್ಯಾಣ ಯೋಜನೆಯಡಿ ಹಾಕಿರುವ ಕೊಳವೆ ಬಾವಿಗಳಿಗೂ ಕೂಡಾ ರೈತರ ಟಿಸಿಗೆ ಸಂಪರ್ಕ ಕಲ್ಪಿಸಲಾಗಿದ್ದು ಟಿಸಿಗಳು ಸುಟ್ಟು ಹೋಗುತ್ತಿವೆ. ಹೀಗಾಗಿ ಲಕ್ಷ್ಮೀಪುರ ಗ್ರಾಮದಲ್ಲಿ ಹೆಚ್ಚುವರಿ ಟಿಸಿ ಅಳವಡಿಸಬೇಕೆಂದು ಆಗ್ರಹಿಸಿದರು.
ರೈತ ಮುಖಂಡರಾದ ಎಂ.ಎಲ್. ಕೆ. ನಾಯ್ಡು, ಉಜ್ಜಿನಿ ಗೌಡ, ಶಂಕ್ರಪ್ಪ, ಸೋಮಶೇಖರ್, ಉಮಾಪತಿ, ನಿಂಗಪ್ಪ, ಅಂಗಡಿಯವರ ಮಲ್ಲಣ್ಣ, ಕರಿಸಿದ್ದಯ್ಯ, ಕುಮಾರಸ್ವಾಮಿ, ಚಂದ್ರಶೇಖರ್ ಮ್ಯಾಗಳಮನಿ, ಯರ್ರಿಸ್ವಾಮಿ, ಧರ್ಮಾಪುರ ಬಸಣ್ಣ, ಮಲ್ಲಣ್ಣ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Bellary; ಜೈಲಿನಲ್ಲಿಂದು ದರ್ಶನ್ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು
Darshan ಭೇಟಿಗೆ ಮಾಹಿತಿ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು
Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.