![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 12, 2022, 11:31 AM IST
ಬೆಂಗಳೂರು: ಕೆಂಗೇರಿ ಹಾಗೂ ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಗಳ ಆವರಣ ಹಾಗೂ ಮತ್ತೂಂದು ಫೈನಾನ್ಸ್ ಕಂಪನಿ ಆವರ ಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 31 ವಾಹನಗಳು ಸುಟ್ಟು ಕರಕಲಾಗಿವೆ.
ಕೆಂಗೇರಿ ಪೊಲೀಸ್ ಠಾಣೆ ಬಳಿಯಿರುವ ಕಾಂಪೌಂಡ್ಗೆ ಹೊಂದಿಕೊಂಡಂತಿರುವ ರೈಲ್ವೆ ಹಳಿ ಪಕ್ಕದಲ್ಲಿರುವ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾರೆ. ಪರಿಣಾಮ ಠಾಣಾ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು, ಆಟೋ, ಕಾರು ಮತ್ತು ಜೀಪಿಗೆ ಬೆಂಕಿ ತಗುಲಿ ದ್ದು, 18 ವಾಹನಗಳು ಬೆಂಕಿಗಾಹುತಿಯಾಗಿವೆ.
ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿ 2 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಈ ಹಾನಿಗೀಡಾದ ವಾಹ ನಗಳ ಪೈಕಿ ಕೆಲವು ದರೋಡೆ, ಸುಲಿಗೆ ಹಾಗೂ ಇತರೆ ಅಪರಾಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದರು.
ಮತ್ತೊಂದು ಪ್ರಕರಣದಲ್ಲಿ ಕೆ.ಜಿ. ಹಳ್ಳಿ ಠಾಣೆ ಆವರಣದಲ್ಲಿ ಜಪ್ತಿ ಮಾಡಿರುವ 6 ವಾಹನಗಳು ಬೆಂಕಿಗಾಹುತಿಯಾಗಿವೆ. ಮಧ್ಯಾಹ್ನ ಏಕಾಏಕಿ ಒಂದು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಉಳಿದ ವಾಹನಗಳಿಗೆ ಹರಡಿ ಒಟ್ಟು 6 ಕಾರುಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಬಾಣಸ ವಾಡಿಯ ಎಚ್ಬಿಆರ್ ಲೇಔಟ್ನ ಅಯೋಧ್ಯ ಮೈದಾನದಲ್ಲಿ ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದ 7 ಕಾರುಗಳಿಗೆ ಬೆಂಕಿ ತಗುಲಿದೆ. ಬೆಳಗ್ಗೆ 9 ಗಂಟೆಗೆ ಬೆಂಕಿ ತಗುಲಿ ಕಾರುಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಿಸಿಲಿನ ತಾಪದಿಂದ ಮೊದಲು ಒಂದು ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.