ಚಾಲನಾ ಪರೀಕ್ಷಾ ಪಥಕ್ಕೆ ಭೂಮಿ ಸಮಸ್ಯೆ?


Team Udayavani, Mar 12, 2022, 3:15 PM IST

9driving

ಬೀದರ: ಚಾಲಕರಲ್ಲಿ ಪಕ್ವತೆ ಮೂಡಿಸುವುದರಿಂದ ಅಪಘಾತ ಘಟನೆಗಳನ್ನು ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರ ಸ್ವಯಂ ಚಾಲಿತ ವಿದ್ಯುನ್ಮಾನ ಚಾಲನಾ ಪರೀಕ್ಷಾ ಕೇಂದ್ರಗಳ ನಿರ್ಮಾಣಕ್ಕೆ ಒತ್ತು ನೀಡುತ್ತಿದ್ದು, ಅದರಂತೆ ಪ್ರಸಕ್ತ ಬಜೆಟ್‌ನಲ್ಲಿ ಆಧುನಿಕ ತಂತ್ರಜ್ಞಾನವುಳ್ಳ ಪಥವನ್ನು ಸ್ಥಾಪಿಸುವ ಬಗ್ಗೆ ಘೋಷಿಸಲಾಗಿದೆ. ಆದರೆ, ಪರೀಕ್ಷಾ ಕೇಂದ್ರ ನಗರ ಪ್ರದೇಶದಿಂದ 10 ಕಿ.ಮೀ. ದೂರದಲ್ಲಿ ಸ್ಥಾಪನೆ ಸಾಧ್ಯತೆ ಇರುವುದು ಜನರ ಬೇಸರಕ್ಕೆ ಕಾರಣವಾಗಲಿದೆ.

ನಗರದ ನೌಬಾದ್‌ನ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಸದ್ಯ ಕಚೇರಿಯ ಸ್ವಂತ ಜಾಗದಲ್ಲಿ ವಾಹನಗಳ ಚಾಲನಾ ಪರೀಕ್ಷೆ ನಡೆಸಲಾಗುತ್ತಿದೆ.

ಸರ್ಕಾರ ಬೀದರ ನಗರದಿಂದ 10 ಕಿ.ಮೀ. ಅಂತರದಲ್ಲಿರುವ “ಐಸಪುರ’ ಬಳಿ ವಾಹನ ಚಾಲನಾ ಪರೀಕ್ಷಾ ಕೇಂದ್ರ ನಿರ್ಮಾಣಕ್ಕಾಗಿ 8 ಎಕರೆ ಜಮೀನನ್ನು ಆರ್‌ಟಿಒ ಕಚೇರಿಗೆ ಮಂಜೂರು ಮಾಡಲಾಗಿದೆ. ಇತ್ತಿಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿರುವ ಆಯ-ವ್ಯಯದಲ್ಲಿ ರಸ್ತೆ ಸುರಕ್ಷತಾ ನಿಧಿ ಯಡಿ ಬೀದರ ಸೇರಿ 9 ನಗರಗಳಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ಸ್ಥಾಪಿಸುವುದಾಗಿ ಪ್ರಕಟಿಸಲಾಗಿದೆ.

ಸರ್ಕಾರ ಘೋಷಿಸಿರುವ ಹೊಸ ಯೋಜನೆ ಬೀದರ ಜನರಲ್ಲಿ ಸಂತಸ ಮೂಡಿಸಿದೆ. ಆದರೆ, ಈ ಮಹತ್ವದ ಪರೀಕ್ಷಾ ಕೇಂದ್ರ ನಗರದಿಂದ ಬಹು ದೂರದ ಪ್ರದೇಶದಲ್ಲಿ ಆರ್‌ಟಿಒಗೆ ಸೇರಿದ ಜಾಗದಲ್ಲಿ ಸ್ಥಾಪನೆಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಅಂದುಕೊಂಡಂತೆ ಘೋಷಿತ ಯೋಜನೆ ಅನುಷ್ಠಾನಗೊಂಡಲ್ಲಿ ವಾಹನ ಸವಾರರು ಚಾಲನಾ ಪರೀಕ್ಷೆಗಾಗಿ 10 ಕಿ.ಮೀ. ದೂರ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಲಿದೆ.

ಏನಿದು ವಿದ್ಯುನ್ಮಾನ ಪರೀಕ್ಷಾ ಕೇಂದ್ರ?

ಡ್ರೈವಿಂಗ್‌ ಲೈಸನ್ಸ್‌ ಮಾಡಿಸಲು ಆರ್‌ಟಿಒ ಕಚೇರಿಗೆ ತೆರಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ಲೈಸನ್ಸ್‌ ಪಡೆಯಲು ಕಚೇರಿಗೆ ಬಂದರೆ ಉದ್ದದ ಕ್ಯೂ ನಿಲ್ಲಬೇಕು. ಡಿಎಲ್‌ಗಾಗಿ ಅರ್ಜಿ ಹಾಕಿದ ನಂತರ ಡ್ರೈವಿಂಗ್‌ ಟೆಸ್ಟ್‌ ಸೇರಿದಂತೆ ಹಲವು ಸುತ್ತಿನ ಪರೀಕ್ಷೆಗಳನ್ನು ಎದುರಿಸಬೇಕು. ಇದನ್ನೆಲ್ಲ ಎದುರಿಸಲಾಗದ ಹಲವರು ಮಧ್ಯವರ್ತಿಗಳ ಮೂಲಕ ಸುಲಭವಾಗಿ ಡಿಎಲ್‌ ಪಡೆಯುತ್ತಿದ್ದರು. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥಗಳನ್ನು ಸ್ಥಾಪಿಸಲಾಗುತ್ತಿದೆ. ಈ ವಿದ್ಯುನ್ಮಾನ ಚಾಲನಾ ಪರೀಕ್ಷಾ ಕೇಂದ್ರದಲ್ಲಿ ಎಲ್ಲವೂ ಆಧುನಿಕ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಡಿಎಲ್‌ ಪಡೆಯುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ, ನಿಗದಿತ ಶುಲ್ಕ ಪಾವತಿಸಿದ್ದಲ್ಲಿ ಅರ್ಜಿದಾರರಿಗೆ ಪರೀಕ್ಷೆಗೆ ಹಾಜರಾಗಬೇಕಾದ ದಿನ ಮತ್ತು ಸಮಯ ನೀಡಲಾಗುತ್ತದೆ. ಡಿಎಲ್‌ ಪರೀಕ್ಷೆಗೆ ಹಾಜರಾಗುವ ಅರ್ಜಿದಾರರು ವಿದ್ಯುನ್ಮಾನ ಪರೀಕ್ಷಾ ಪಥದಲ್ಲೇ ವಾಹನ ಚಾಲನೆ ಮಾಡಬೇಕಿದ್ದು, ಈ ಸಂದರ್ಭದಲ್ಲಿ ಯಾವುದೇ ಲೋಪವಿಲ್ಲದೆ ವಾಹನ ಚಾಲನೆ ಮಾಡಿದರಷ್ಟೇ ಡಿ.ಎಲ್‌ ದೊರೆಯಲಿದೆ. ಇದರಿಂದ ಸಮಯ ಉಳಿತಾಯ, ಮಧ್ಯವರ್ತಿಗಳ ಹಾವಳಿ ತಪ್ಪಿದರೆ, ಮತ್ತೂಂದೆಡೆ ಇತರರ ನೆರವು ಪಡೆದು ಚಾಲನಾ ಪರವಾನಗಿ ಪಡೆಯುವುದು ನಿಲ್ಲಲಿದೆ.

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.