ಸಾಗರ : ವಿದ್ಯುತ್ ತಂತಿ ತಗುಲಿ ತೆಂಗಿನ ಮರಕ್ಕೆ ಬೆಂಕಿ
Team Udayavani, Mar 12, 2022, 8:33 PM IST
ಸೊರಬ: ಗ್ರಾಮದ ಮಧ್ಯದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ತಗುಲಿ ತೆಂಗಿನ ಮರಕ್ಕೆ ಬೆಂಕಿ ತಗುಲಿದ ಘಟನೆ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ನಡೆದಿದೆ.
ನಿರಂತರ ವಿದ್ಯುತ್ ಯೋಜನೆಯ 11 ಕೆವಿ ವಿದ್ಯುತ್ ತಂತಿ ಗ್ರಾಮದಲ್ಲಿ ಹಾದುಹೋಗಿದೆ. ಗ್ರಾಮದ ರಾಮಪ್ಪ ಹುಚ್ಚಪ್ಪ ಎಂಬುವರ ಮನೆಯ ಮುಂಭಾಗದಲ್ಲಿರುವ ತೆಂಗಿನ ಮರದ ಒಣಗಿದ ಗರಿಗಳಿಗೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಗ್ರಾಮಸ್ಥರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಗ್ರಾಮದಲ್ಲಿ ನಿರಂತರ ಜ್ಯೋತಿ ವಿದ್ಯುತ್ ಯೋಜನೆಯ 11 ಕೆವಿ ವಿದ್ಯುತ್ ಮಾರ್ಗವು ಹಾದು ಹೋಗಿದ್ದು, ವಿದ್ಯುತ್ ತಂತಿಯ ಮೇಲ್ಬಾಗದಲ್ಲಿಯೇ ಅನೇಕ ತೆಂಗಿನ ಮರದ ಗರಿಗಳು ಚಾಚಿಕೊಂಡಿವೆ. ಗ್ರಾಮದಲ್ಲಿ ಆತಂಕ ನಿರ್ಮಾಣವಾಗಿದ್ದು, ಈಗಾಗಲೇ ಸುಮಾರು 5 ಮರಗಳು ವಿದ್ಯುತ್ಗೆ ಬಲಿಯಾಗಿವೆ. ಇನ್ನೂ ತೆಂಗಿನ ಮರದಲ್ಲಿನ ಕಾಯಿಗಳನ್ನು ತೆಗೆಯಲು ಸಹ ಭಯದ ವಾತಾವರಣವಿದೆ. ಯಾವ ಕ್ಷಣದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎನ್ನುವ ಆತಂಕ ಗ್ರಾಮಸ್ಥರದ್ದಾಗಿದ್ದು, ಕೂಡಲೇ ಗ್ರಾಮದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್ನ್ನು ಕೇಬಲ್ ಲೈನ್ ಆಗಿ ಪರಿವರ್ತಿಸಬೇಕು ಎಂದು ಗ್ರಾಮಸ್ಥರಾದ ಪರಮೇಶ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಘೋಷಣೆ, ಸಿದ್ದಾಂತಗಳಿಂದ ಸರ್ಕಾರಗಳು ಜನರನ್ನು ಮರಳು ಮಾಡಲು ಸಾಧ್ಯವಿಲ್ಲ: ಆನಂದ್ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.