ನೈಸರ್ಗಿಕ ಬಣ್ಣಗಳಿಂದ ಹೋಳಿ ಆಚರಿಸಿ
ತುರ್ತು ಪರಿಸ್ಥಿತಿಯಲ್ಲಿ 102ಕ್ಕೆ ಕರೆ ಮಾಡಿ
Team Udayavani, Mar 13, 2022, 1:13 PM IST
ರಬಕವಿ-ಬನಹಟ್ಟಿ: ಮಾ. 17 ಮತ್ತು 18ರಂದು ನಡೆಯುವ ಹೋಳಿ ಹಬ್ಬವನ್ನು ಶಾಂತಿ ಸೌಹಾರ್ದದಿಂದ ಆಚರಿಸಿ. ಹೋಳಿ ಸಂದರ್ಭದಲ್ಲಿ ನೈಸರ್ಗಿಕ ಬಣ್ಣಗಳನ್ನು ಮಾತ್ರ ಬಳಸಿ. ಇದರಿಂದ ಯಾವುದೆ ತೊಂದರೆ ಇಲ್ಲ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಎಸ್.ಬಿ.ಇಂಗಳೆ ಹೇಳಿದರು.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಪಾಲನಾ ಸಭೆಯಲ್ಲಿ ಅವರು ಮಾತನಾಡಿದರು. ಇನ್ನೊಬ್ಬರಿಗೆ ತೊಂದರೆಯಾಗದಂತೆ ಹೋಳಿ ಆಚರಿಸಿ. ಡಾಂಬರೀಕರಣದ ರಸ್ತೆಗಳ ಮೇಲೆ ಕಾಮ ದಹನ ಬೇಡ. ಡಾಂಬರೀಕರಣದ ರಸ್ತೆಗಳ ಮೇಲೆ ಕಾಮ ದಹನ ಮಾಡಿದರೆ ರಸ್ತೆಗಳಲ್ಲಿ ತೆಗ್ಗು ನಿರ್ಮಾಣವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಶಾಂತಿಯಿಂದ ಹಬ್ಬ ಆಚರಿಸಬೇಕು ಎಂದರು. ಪೌರಾಯುಕ್ತ ಶ್ರೀನಿವಾಸ ಜಾಧವ ಮಾತನಾಡಿ, ಯಾವುದೆ ರೀತಿಯ ಸಾರ್ವಜನಿಕ ಅಸ್ತಿಗಳಿಗೆ ತೊಂದರೆಯಾಗದಂತೆ ಹಬ್ಬವನ್ನು ಆಚರಿಸಿ. ಬಣ್ಣದ ನಂತರ ಜನರು ನದಿ, ಕೆರೆಗಳಲ್ಲಿ ಬಣ್ಣ ತೊಳೆದುಕೊಳ್ಳಬಾರದು. ಇದರಿಂದ ನೀರು ಕಲುಷಿತಗೊಳ್ಳುತ್ತದೆ. ರಾಸಾಯನಿಕ ಬಣ್ಣಗಳು ಬೇಡ ಎಂದರು.
ಜಮಖಂಡಿ ಡಿವೈಎಸ್ಪಿ ಮಾತನಾಡಿ, ಶಾಂತಿ ಸುವ್ಯವಸ್ಥೆಗೆ ತೊಂದರೆಯಾಗದಂತೆ ಮತ್ತು ಸಂಪ್ರದಾಯದಂತೆ ಹಬ್ಬಗಳನ್ನು ಆಚರಿಸಿ ಎಂದರು. ನಗರಸಭೆ ಅಧ್ಯಕ್ಷ ಸಂಜಯ ತೆಗ್ಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸಪ್ರಭು ಹಟ್ಟಿ, ಶ್ರೀಶೈಲ ಧಬಾಡಿ, ಮಹಾಶಾಂತ ಶೆಟ್ಟಿ, ಶಂಕರ ಸೋರಗಾವಿ, ಶಿವಾನಂದ ಗಾಯಕವಾಡ, ಅಂಜುಮನ್ ಎ ಇಸ್ಲಾಂ ಸಮಿತಿ ಹಾರೂನ್ ಸಾಂಗ್ಲಿಕರ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.