ಭಾರತೀಯ ಸೇನೆಗೆ ಎಚ್ಚರಿಕೆ ನೀಡಿದ ತೆಲಂಗಾಣ ಸಚಿವ ಕೆಟಿಆರ್
ನೀರು, ವಿದ್ಯುತ್ ಸೌಕರ್ಯ ನಿಲ್ಲಿಸುತ್ತೇವೆ
Team Udayavani, Mar 14, 2022, 7:20 AM IST
Telangana minster ,KT Rama Rao ,power, water supplies
ಹೈದರಾಬಾದ್: “ಭಾರತೀಯ ಸೇನೆಯ ಯೋಧರಿಂದ ಹೈದರಾಬಾದ್ ಪ್ರಾಂತ್ಯದ ಜನರಿಗೆ ವಿನಾಕಾರಣ ಕಿರುಕುಳ ಉಂಟಾಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ, ಸರ್ಕಾರದಿಂದ ಸೇನಾ ಪ್ರಾಂತ್ಯಕ್ಕೆ ನೀಡಲಾಗುತ್ತಿರುವ ವಿದ್ಯುತ್ ಹಾಗೂ ನೀರಿನ ಸಂಪರ್ಕವನ್ನು ನಿಲ್ಲಿಸಬೇಕಾಗುತ್ತದೆ.”
– ಇದು ಹೈದರಾಬಾದ್ನ ದಂಡುಪ್ರದೇಶದಲ್ಲಿರುವ ಭಾರತೀಯ ಸೇನಾ ವಲಯಕ್ಕೆ ತೆಲಂಗಾಣದ ಮಾಹಿತಿ ತಂತ್ರಜ್ಞಾನದ ಸಚಿವ ಕೆ.ಟಿ. ರಾಮರಾವ್ (ಕೆಟಿಆರ್) ಖಡಕ್ ಎಚ್ಚರಿಕೆ!
ತೆಲಂಗಾಣ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಹೈದರಾಬಾದ್ ಹೊರವಲಯದಲ್ಲಿರುವ ಸೇನಾ ದಂಡುಪ್ರದೇಶದ ಸಿಬ್ಬಂದಿಯಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತಿದೆ. ಅನೇಕ ಕಡೆ ಏಕಾಏಕಿ ರಸ್ತೆಗಳನ್ನು ಬಂದ್ ಮಾಡುವುದು, ಕಂಡಕಂಡ ಕಡೆಯಲ್ಲೆಲ್ಲಾ ಚೆಕ್ಡ್ಯಾಂ ನಿರ್ಮಿಸುವ ಕೆಲಸಗಳನ್ನು ಸೇನಾ ಸಿಬ್ಬಂದಿ ಕೈಗೊಳ್ಳುತ್ತಿದ್ದು, ಅದರಿಂದ ಜನಸಾಮಾನ್ಯರು ಟ್ರಾಫಿಕ್ ಜಾಮ್ ಮುಂತಾದ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಅನೇಕ ಚೆಕ್ಡ್ಯಾಂಗಳನ್ನು ನಿರ್ಮಿಸಿದ್ದರಿಂದಾಗಿ 2020ರಲ್ಲಿ ಅತಿವೃಷ್ಟಿಯಾದಾಗ ಅನೇಕ ಪ್ರದೇಶಗಳು ಮುಳುಗಡೆಯಾಗಿದ್ದವು ಎಂದು ಅವರು ಆರೋಪಿಸಿದರು.
“ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವುದನ್ನು ಪರಿಗಣಿಸದೆ, ಇದೇ ರೀತಿಯ ಅನವಶ್ಯಕ ಕಾಮಗಾರಿಗಳನ್ನು ಮುಂದುವರಿಸಿದರೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ದಂಡು ಪ್ರದೇಶಕ್ಕೆ ನೀಡಲಾಗುತ್ತಿರುವ ವಿದ್ಯುತ್ ಹಾಗೂ ನೀರಿನ ಸೌಕರ್ಯಗಳನ್ನು ನಿಲ್ಲಿಸಬೇಕಾಗುತ್ತದೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಪ್ರತಿಕ್ರಿಯೆ
“ಕೆಟಿಆರ್ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯಿಸಿದ್ದು, ಹೈದರಾಬಾದ್ ದಂಡು ಪ್ರದೇಶದಲ್ಲಿರುವ ಭೂಸೇನೆಯ ಕ್ಯಾಂಪನ್ನು ಅಲ್ಲಿಂದ ಖಾಲಿ ಮಾಡಿಸುವ ಉದ್ದೇಶವನ್ನು ಕೆಟಿಆರ್ ಹೊಂದಿದ್ದಾರೆ. ಹಾಗಾಗಿ, ಸೇನೆಯ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದು ತೆಲಂಗಾಣ ಸರ್ಕಾರ ಸೇನೆಯನ್ನು ಹೇಗೆ ಗೌರವಿಸುತ್ತದೆ ಎಂಬುದನ್ನು ಸಾರಿ ಹೇಳಿದೆ’ ಎಂದು ಟೀಕಿಸಿದೆ.
“We will cut power and water supply if needed to military authorities (Cantonment limits) because it is not fair to close the roads whenever they want,” said Telangana IT Minister and TRS working president KTR Rao in the State Legislative Assembly yesterday pic.twitter.com/fO30WrSiom
— ANI (@ANI) March 13, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.