ಉಡಾದಲ್ಲಿ ಶೀಘ್ರ ಆನ್‌ಲೈನ್‌ ಸೇವೆ; ಅಧ್ಯಕ್ಷ ಮನೋಹರ ಕಲ್ಮಾಡಿ ಜತೆ ಚುಟುಕು ಸಂದರ್ಶನ

ಜನರ ಅಲೆದಾಟ ಇರೋದಿಲ್ಲ ಪಾರದರ್ಶಕ ಸೇವೆ ಇರಲಿದೆ

Team Udayavani, Mar 15, 2022, 5:49 AM IST

ಉಡಾದಲ್ಲಿ ಶೀಘ್ರ ಆನ್‌ಲೈನ್‌ ಸೇವೆ; ಅಧ್ಯಕ್ಷ ಮನೋಹರ ಕಲ್ಮಾಡಿ ಜತೆ ಚುಟುಕು ಸಂದರ್ಶನ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ಸ್ವೀಕರಿಸಿರುವ ಬಿಜಿಪಿ ಮುಂದಾಳು ಮನೋಹರ್‌ ಕಲ್ಮಾಡಿ  ಜನಸ್ನೇಹಿ ಆಡಳಿತದ ಜತೆ ನಗರದ ಅಭಿವೃದ್ಧಿ, ಇವುಗಳಿಗೆ ತೊಡಕಾಗಿರುವ ಸವಾಲು- ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಉದಯವಾಣಿ ಜತೆಗೆ ಮಾತನಾಡಿದ್ದಾರೆ.

ನಿಮ್ಮ ಅವಧಿಯಲ್ಲಿ ಪ್ರಾಧಿಕಾರವು ಜನರಿಗೆ ಹೇಗೆ ಸ್ಪಂದಿಸಲಿದೆ ?
ಜನರಿಗೆ ಕಚೇರಿ ಅಲೆದಾಟ ಸಮಸ್ಯೆ ಹೋಗಲಾಡಿಸುವ ದೃಷ್ಟಿಯಲ್ಲಿ ಈಗಾಗಲೇ ಹಿಂದಿನ ಅಧ್ಯಕ್ಷ ರಾಘವೇಂದ್ರ ಕಿಣಿ ಅವರು  ಆನ್‌ಲೈನ್‌ ಆ್ಯಪ್‌ ಯೋಜನೆ ಜಾರಿಗೆ ತಂದಿದ್ದು ಇದೀಗ ಕೊನೆಯ ಹಂತದಲ್ಲಿ ಕೆಲಸಗಳು ನಡೆಯುತ್ತಿದೆ. ಆನ್‌ಲೈನ್‌ ವ್ಯವಸ್ಥೆ ಮೂಲಕ ಜನರಿಗೆ ಪ್ರಾಧಿಕಾರದ ಕೆಲಸಗಳನ್ನು ಸುಲಭವಾಗಿಸುತ್ತೇವೆ. ಕೆಲವು ತಾಂತ್ರಿಕ ಸಮಸ್ಯೆ ಕಂಡುಬಂದಲ್ಲಿ ಆಫ್ಲೈನ್‌ ಮೂಲಕವು ಅರ್ಜಿ ಸ್ವೀಕರಿಸಿ ಸರಿಪಡಿಸುವ ಕೆಲಸವಾಗಲಿದೆ. ಭ್ರಷ್ಟಾಚಾರ ಮುಕ್ತ ಪಾರದರ್ಶಕ ಸೇವೆಗೆ ನಮ್ಮ ಪ್ರಯತ್ನ ನಿರಂತರ ಸಾಗಲಿದೆ.

ಸಿಬಂದಿ ಕೊರತೆ ಹೇಗೆ ನಿಭಾಯಿಸುತ್ತೀರಿ ?
ತಾಂತ್ರಿಕ ಸಿಬಂದಿ ಕೊರತೆಯಿಂದ ಸಮಯಕ್ಕೆ ಸರಿಯಾಗಿ ಕೆಲಸ ನಡೆಯಲು ಕಷ್ಟ ಸಾಧ್ಯ, ಈಗ 900 ಕಡತಗಳು ಬಾಕಿ ಇವೆೆ. 4 ಜನ ಮಾಡುವ ಕೆಲಸ ಒಬ್ಬರೇ ಮಾಡಬೇಕಿದೆ. ಡಿಸಿ ಕಚೇರಿಯಿಂದ ಹೆಚ್ಚುವರಿ ಸಿಬಂದಿ ನಿಯೋಜಿಸಲು ಜಿಲ್ಲಾಧಿಕಾರಿ ಬಳಿ ಚರ್ಚೆ ನಡೆಸಿದ್ದೇವೆ. ಜನರನ್ನು ಕಾಯಿಸುವ ವ್ಯವಸ್ಥೆ ಇರುವುದಿಲ್ಲ. ವಾರಕ್ಕೆ ಎರಡು ದಿನ ಸ್ಥಳ ಪರಿಶೀಲನೆ ಮತ್ತು ಉಳಿದ ದಿನಗಳಲ್ಲಿ ಕಚೇರಿ ಕೆಲಸ ಮಾಡುತ್ತೇವೆ.

ತುಂಡು ಭೂಮಿ ಸಮಸ್ಯೆಗೆ ಶೀಘ್ರ ಪರಿಹಾರ
ಶಾಸಕ ರಘುಪತಿ ಭಟ್‌ ಅವರ ಅವಿರತ ಶ್ರಮದಿಂದಾಗಿ ಈ ಸಮಸ್ಯೆ ಬಗೆಹರಿಯುವ ಹಂತಕ್ಕೆ ತಲುಪಿದೆ. ಬಡವರ್ಗಕ್ಕೆ ಕೃಷಿ ವಲಯದಲ್ಲಿ ಮನೆ ನಿರ್ಮಿಸಲು ಇರುವ ಸಮಸ್ಯೆಯನ್ನು ಸರಕಾರ ದೂರ ಮಾಡಲಿದೆ. ಈ ನಿಯಮ ಸರಳೀಕರಣ ಬಳಿಕ ಸಾಕಷ್ಟು ಮಂದಿಗೆ ಅನುಕೂಲವಾಗಲಿದೆ.

ಕೆರೆ ಅಭಿವೃದ್ಧಿ , ಮೂಲಸೌಕರ್ಯಕ್ಕೆ ಒತ್ತು
ಕೆರೆ ಸಂರಕ್ಷಣೆ, ಮೂಲ ಸೌಕರ್ಯಕ್ಕೆ ವಿಶೇಷ ಒತ್ತು ನೀಡಲಾಗುವುದು. 4 ಕೆರೆಗಳ ಸಂರಕ್ಷಣೆಗೆ ಈಗಾಗಲೇ ಯೋಜನೆ ರೂಪಿಸಲಾಗಿದೆ.  ಜನರು, ಜನಪ್ರತಿನಿಧಿಗಳ ಸಹಕಾರ, ಸಲಹೆ ಪಡೆದು ಅಭಿವೃದ್ಧಿ ಯೋಜನೆ ರೂಪಿಸಲಾಗುವುದು.

ಜನ ಸಂಪರ್ಕ
ಪ್ರಾಧಿಕಾರದ ಕಚೇರಿ ಸಂಪೂರ್ಣ ಜನಸ್ನೇಹಿ ಆಗಿ ರೂಪುಗೊಳ್ಳಲಿದೆ. ಕಚೇರಿ ದಿನಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಚೇರಿಯಲ್ಲಿ ಜನರಿಗೆ ಲಭ್ಯವಿದ್ದು, ಅಹವಾಲು ಸ್ವೀಕರಿಸುತ್ತೇನೆ. ಅಧಿಕಾರಿ, ಸಿಬಂದಿ ಈ ಸಮಯದಲ್ಲಿ ಕಚೇರಿಯಲ್ಲಿ ಜನರಿಗೆ ಸಿಗುತ್ತಾರೆ. 9845166287 ನಂಬರ್‌ಗೆ ಸಂಪರ್ಕಿಸಬಹುದು.

ಮಣಿಪಾಲ ಮಣ್ಣಪಳ್ಳದ ಅಭಿವೃದ್ಧಿಗೆ ಕಾಯಕಲ್ಪ ಸಿಗಬಹುದೇ ?
ಸ್ಥಳೀಯರ ಸಹಕಾರದೊಂದಿಗೆ ಮಣ್ಣಪಳ್ಳ ಪ್ರದೇಶವನ್ನು ಮಾದರಿಯಾಗಿ ರೂಪಿಸುವ ಬಗ್ಗೆ ಯೋಜನೆ ಹಮ್ಮಿಕೊಳ್ಳಲಾಗುವುದು. ಕೆರೆ ಹೂಳೆತ್ತುವುದು, ಮೂಲ ಸೌಕರ್ಯ ಕಲ್ಪಿಸುವ ಜತೆಗೆ ಉತ್ತಮ ಪರಿಸರವನ್ನು ನಿರ್ಮಿಸಬೇಕು. ಬೋಟಿಂಗ್‌ ವ್ಯವಸ್ಥೆ ಪುನಃ ಆರಂಭದ ಬಗ್ಗೆ ಪರಿಶೀಲಿಸುತ್ತೇನೆ. ಫ್ಲೋಟಿಂಗ್‌ ರೆಸ್ಟೋರೆಂಟ್‌ (ತೇಲುವ ಹೊಟೇಲ್‌)ನಂಥ ಯೋಜನೆಗಳು ಜಾರಿಗೆ ಬಂದಲ್ಲಿ ಆಕರ್ಷಕ ತಾಣವಾಗಿ ರೂಪುಗೊಳ್ಳಬಹುದು. ಪ್ರವಾಸೋದ್ಯಮ ಇಲಾಖೆ ಜತೆಗೆ ಚರ್ಚಿಸಿ ಮಣ್ಣಪಳ್ಳ ಪ್ರದೇಶ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.

ಉಡುಪಿ ನಗರ  ಬಿಜೆಪಿ ಅಭಿನಂದನೆ
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ (ಉಡಾ)ದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮನೋಹರ್‌ ಎಸ್‌. ಕಲ್ಮಾಡಿ ಮತ್ತು  ಸದಸ್ಯರಾದ ಕಿಶೋರ್‌ ಕರಂಬಳ್ಳಿ, ಸುಮಾ ನಾಯ್ಕ, ಮಾಲತಿ ನಾಯಕ್‌, ಯೋಗೀಶ್‌ ಚಂದ್ರಾಧರ, ಪ್ರವೀಣ್‌ ಕುಮಾರ್‌ ಕಪ್ಪೆಟ್ಟು, ಪ್ರಭಾಕರ ಪೂಜಾರಿ ಅವರಿಗೆ ನಗರ ಬಿಜೆಪಿ ಕಚೇರಿಯಲ್ಲಿ ಸೋಮವಾರ ಉಡುಪಿ ನಗರ ಬಿಜೆಪಿಯಿಂದ ನಗರ ಅಧ್ಯಕ್ಷ ಮಹೇಶ್‌ ಠಾಕೂರ್‌  ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಶಾಸಕ ಕೆ. ರಘುಪತಿ ಭಟ್‌ ಶುಭಹಾರೈಸಿದರು. ಪಕ್ಷದ ವಿವಿಧ ಸ್ತರಗಳಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಮನೋಹರರನ್ನು ಪಕ್ಷವೇ ಗುರುತಿಸಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಹೇಳಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌, ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಎ. ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡಾ ಮಾಜಿ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ,  ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ, ಜಿÇÉಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್‌ ಅಮೀನ್‌, ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬುಮತ್ತಿತರರು ಉಪಸ್ಥಿತರಿದ್ದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಮಣಿಪಾಲ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.