ಜಗಳೂರು ಪಪಂ: ಉಳಿತಾಯ ಬಜೆಟ್‌ ಮಂಡನೆ


Team Udayavani, Mar 15, 2022, 12:30 PM IST

ಜಗಲರ್

ಜಗಳೂರು: ಪಟ್ಟಣ ಪಂಚಾಯತ್ ಅಧ್ಯಕ್ಷ ಸಿದ್ದಪ್ಪರವರು 2022-23 ಸಾಲಿನಲ್ಲಿ 18,11,760 ರೂ.ಗಳ ಉಳಿತಾಯ ಬಜೆಟ್‌ ಮಂಡಿಸಿದರು. 2022-23ನೇ ಸಾಲಿಗೆ ನಿರೀಕ್ಷಿಸಿದ ಆದಾಯ 64 ಕೋಟಿ 33 ಲಕ್ಷದ 18 ಸಾವಿರದ 660 ರೂ ಆಗಿದೆ. ಖರ್ಚು 64 ಕೋಟಿ 15 ಲಕ್ಷದ 5 ಸಾವಿರದ 900 ರೂ. ಅಂದಾಜಿಸಲಾಗಿದೆ. ಒಟ್ಟು 18 ಲಕ್ಷದ 11 ಸಾವಿರದ 760 ರೂ. ಉಳಿತಾಯ ಬಜೆಟ್‌ ಆಗಿದೆ. ಆಸ್ತಿ ತೆರಿಗೆಯಿಂದ 64 ಲಕ್ಷ ರೂ. ಕ್ರೋಢೀಕರಣವಾಗಿದ್ದು ಇದರಲ್ಲಿ 16.64 ಲಕ್ಷ ರೂ. ಸರಕಾರಕ್ಕೆ ಪಾವತಿಸಬೇಕಾದ ಮೊತ್ತವಾಗಿದೆ.

ಪಟ್ಟಣ ಪಂಚಾಯಿತಿ ಆಸ್ತಿ ಮತ್ತು ಅಧಿಕಾರವನ್ನು ಬಳಸಿ ಸಂಗ್ರಹಿಸಿದ ಇತರೆ ಒಟ್ಟು ಅಂದಾಜು ಆದಾಯ (ಗುತ್ತಿಗೆ ಹೊರಗುತ್ತಿಗೆ ನೌಕರರ ವೇತನ, ತೆರಿಗೆ, ಕಚೇರಿಯ ಸ್ಟೇಷನರಿ ಹಾಗೂ ರಿಜಿಸ್ಟರ್‌ ಮತ್ತು ಇತರೆ ವೆಚ್ಚಗಳನ್ನು ಹೊರತುಪಡಿಸಿ). ಶೇ. 24.10ರ ಯೋಜನೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ 14, 06,476 ರೂ. ಕಾಯ್ದಿರಿಸಲಾಗಿದೆ. ಶೇ. 7.25 ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಕ್ಕೆ 4,23,110 ರೂ., ಶೇ. 5ರ ಯೋಜನೆಯಲ್ಲಿ ವಿಕಲಚೇತನರ ಅಭಿವೃದ್ಧಿಗಾಗಿ 2,91,800 ರೂ., ಕ್ರೀಡಾ ಯೋಜನೆಗಾಗಿ ಶೇ.1ರ ಮೊತ್ತ 58,360 ರೂ. ಕಾಯ್ದಿರಿಸಲಾಗಿದೆ ಎಂದರು.

ಪಟ್ಟಣದ ವಿವಿಧೆಡೆ ಹಾಗೂ ಅವಶ್ಯಕತೆ ಇರುವ ಕಡೆಗಳಲ್ಲಿ ಸಾರ್ವಜನಿಕ ಹೈಟೆಕ್‌ ಶೌಚಾಲಯ ನಿರ್ಮಾಣ, ವಿವಿಧ ವಾರ್ಡ್‌ಗಳಲ್ಲಿ ಸಿಸಿ ರಸ್ತೆ ನಿರ್ಮಾಣ, ಬಾಕ್ಸ್‌ ಚರಂಡಿಗಳನ್ನು ನಿರ್ಮಿಸುವುದು, ಕೊಟ್ಟೂರು ರಸ್ತೆ, ಚಿತ್ರದುರ್ಗ ರಸ್ತೆ, ಮರೇನಹಳ್ಳಿ ರಸ್ತೆಯಲ್ಲಿ ಸ್ವಾಗತ ಕಮಾನುಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಜೆಟ್‌ನಲ್ಲಿ ಮುಕ್ತಿವಾಹನಕ್ಕೆ ಅನುದಾನ ನಿಗದಿಪಡಿಸಿರುವುದು ಶ್ಲಾಘನೀಯ ಎಂದು ಸದಸ್ಯ ಪಾಪಲಿಂಗ ಹೇಳಿದರು. ಬರೀ ಬಜೆಟ್‌ನಲ್ಲಿ ಸೇರಿಸುವುದು ಮುಖ್ಯವಲ್ಲ, ಸಾಮಾನ್ಯ ಸಭೆಯಲ್ಲೂ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ಮೊನ್ನೆ ನಡೆದ ಹರಾಜಿನಿಂದ ಬಂದ ಹಣದಲ್ಲಿ ಈ ಬಾರಿಯಾದರೂ ಮುಕ್ತಿ ವಾಹನ ಖರೀದಿ ಮಾಡಬೇಕೆಂದರು. ಇದಕ್ಕೆ ಬಹುತೇಕ ಸದಸ್ಯರು ಸಹಮತ ವ್ಯಕ್ತಪಡಿಸಿದರು. ಈ ಹಿಂದಿನ ಸಾಮಾನ್ಯ ಸಭೆಯಲ್ಲಿ ನಡೆದ ಚರ್ಚಿತ ವಿಷಯಗಳು, ಕೈಗೊಂಡ ನಿರ್ಣಯಗಳ ಬಗ್ಗೆ ಸಿಬ್ಬಂದಿಗಳು ಮಾಹಿತಿ ನೀಡುವುದಿಲ್ಲ ಎಂದು ಉಪಾಧ್ಯಕ್ಷೆ ಮಂಜಮ್ಮ ಅಸಮಾಧಾನ ವ್ಯಕ್ತಪಡಿಸಿದರು

ನಗರೋತ್ತರ ಯೋಜನೆಯಡಿ 5 ಕೋಟಿ ರೂ. ಅನುದಾನ ಬಂದಿದೆ. ಬಿಜೆಪಿ ಸದಸ್ಯರಿಗೆ ಸಿಂಹಪಾಲು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರಿಗೆ ಕಡಿಮೆ ಅನುದಾನ ನೀಡಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಸದಸ್ಯ ಶಕೀಲ್‌ ಆರೋಪಿಸಿದರು. ಸದಸ್ಯರಾದ ರವಿ, ತಿಪ್ಪೇಸ್ವಾಮಿ, ಶಕೀಲ್‌, ಮಹಮ್ಮದ್‌ ಅಲಿ, ಲೋಕಮ್ಮ, ಲಲಿತಮ್ಮ, ನಿರ್ಮಲಾಕುಮಾರಿ, ಆರೋಗ್ಯ ನಿರೀಕ್ಷಕ ಕಿಫಾಯತ್‌, ಸಿಬ್ಬಂದಿಗಳಾದ ನೂರುಲ್ಲಾ, ನಾಯಕ್‌, ಮೋದಿನ್‌, ಪುನೀತ್‌, ಮಂಜಮ್ಮ ಮತ್ತಿತರರು ಇದ್ದರು.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.