ಕಲೆ ಬದುಕುವುದನ್ನು ಕಲಿಸಿತು: ಮಂಜಮ್ಮ ಜೋಗತಿ

ಸಂಸ್ಕೃತಿ, ಪರಂಪರೆ, ಕಲೆ ಉಳಿಸಿ ಬೆಳೆಸುವ ಕಾರ್ಯ ಮಾಡಿ

Team Udayavani, Mar 15, 2022, 1:08 PM IST

9

ಕೂಡಲಸಂಗಮ: ತೃತೀಯ ಲಿಂಗಿಯಾದ ನಾನು ಜೀವನದ ಚೀಲ ತುಂಬಿಕೊಳ್ಳಲು, ಬದುಕಲು ಜಾನಪದ ಕಲೆಯನ್ನು ನಂಬಿ ಕಲಾ ಕ್ಷೇತ್ರಕ್ಕೆ ಕಾಲಿಟ್ಟೆ, ಕಲೆ ಸ್ವಾಭಿಮಾನದಿಂದ ಸ್ವಾವಲಂಬಿಯಾಗಿ ಬದುಕುವುದನ್ನು ಕಲಿಸಿತು ಎಂದು ಪದ್ಮಶ್ರೀ ಪುರಸ್ಕೃತ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಹೇಳಿದರು.

ಕೂಡಲಸಂಗಮ ಬಸವ ಧರ್ಮ ಪೀಠ ಆವರಣದಲ್ಲಿ ಸೋಮವಾರ ನಡೆದ ಮಾತೆ ಮಹಾದೇವಿ 3ನೇ ಲಿಂಗೈಕ್ಯ ಸಂಸ್ಮರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮೊದಲು ಸಮಾಜ ಬದಲಾಗಬೇಕು. ತೃತೀಯ ಲಿಂಗಿಗಳನ್ನು ಬೇರೆಯವರು ಎಂದು ನೋಡುವ ಪರಿಪಾಠ ಬದಲಾಗಬೇಕು ಅವರೂ ನಮ್ಮವರೇ ಎಂಬ ದೃಷ್ಟಿ ಎಲ್ಲರಲ್ಲೂ ಮೂಡಬೇಕು. ಚವಡಕಿ ಪದ ಹಾಡಿ, ನೃತ್ಯ ಮಾಡಿದ ನನ್ನನು ಇಂತಹ ವೈಚಾರಿಕ ಕಾರ್ಯಕ್ರಮಕ್ಕೆ ಆಹ್ವಾನಿಸಿ ಉದ್ಘಾಟಿಸಲು ಅವಕಾಶ ಮಾಡಿಕೊಟ್ಟದ್ದು ಬಸವಾದಿ ಶರಣರ ಆಸೆಯನ್ನು ಈಡೇರಿಸಿದಂತೆ. ನಾವು ನಮ್ಮ ಮಕ್ಕಳನ್ನು ಸರ್ಕಾರಿ ಕನ್ನಡ ಶಾಲೆಗೆ ಕಳುಹಿಸುವ ಮೂಲಕ ನಮ್ಮ ಸಂಸ್ಕೃತಿ, ಪರಂಪರೆ, ಕಲೆ ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು. ಮಕ್ಕಳನ್ನು ಮೊಬೈಲ್‌ದಿಂದ ದೂರ ಇಟ್ಟು ಶರಣರ ವಚನ ಪುಸ್ತಕಗಳನ್ನು ಓದಲು ಹಚ್ಚಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಗದಗ ತೋಂಟದಾರ್ಯ ಮಠದ ಡಾ| ತೋಂಟದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಲಿಂಗಾಯತ ಸ್ವತಂತ್ರ ಧರ್ಮ ಎಂಬ ಅರಿವು ನಮ್ಮಗೆ ಇಲ್ಲದಾಗ ಸ್ವತಂತ್ರ ಧರ್ಮ ಎಂಬ ಅರಿವು ಮೂಡಿಸಿದವರು ಲಿಂಗಾನಂದ ಸ್ವಾಮೀಜಿ, ಮಾತಾಜಿ. ಮಾನವೀಯ ಮೌಲ್ಯಗಳ ಗಣಿಯಾದ ಲಿಂಗಾಯತ ಧರ್ಮ 12ನೇ ಶತಮಾನದಲ್ಲಿಯೇ ಬಸವಣ್ಣನವರಿಂದ ಸ್ಥಾಪಿತಗೊಂಡಿದೆ. ಸದ್ಯ ಸಾಂವಿಧಾನಿಕ ಮಾನ್ಯತೆ ಪಡೆಯುವ ಕಾರ್ಯವನ್ನು ನಾವು ಮಾಡಬೇಕು. ಅಧಿ ಕಾರ, ಹಣದ ಆಸೆಗೆ ಲಿಂಗಾಯತ ಧರ್ಮ ವಿರೋಧಿಸುವುದು ಸರಿಯಲ್ಲ. ಇಂದು ವಿರೋಧಿಸುವವರು ಕೆಲವೇ ದಿನಗಳಲ್ಲಿ ನಮ್ಮೊಂದಿಗೆ ಬರುವರು. ಲಿಂಗಾಯತ ಧರ್ಮವನ್ನು ಕೆಲವು ಲಿಂಗಾಯತರೇ ವಿರೋ ಧಿಸುವರು ಅದಕ್ಕೆ ಅವರ ಅಜ್ಞಾನವೇ ಕಾರಣ. ವಚನ ಸಾಹಿತ್ಯವನ್ನು ಅಧ್ಯಯನ ಮಾಡುವ ಮೂಲಕ ಶಿವಶರಣರ ಆಶಯಗಳನ್ನು ಅರ್ಥಮಾಡಿಕೊಳ್ಳುವ ಕಾರ್ಯವನ್ನು ಮಾಡಬೇಕು ಎಂದರು.

ಬೀದರ ಬಸವ ಸೇವಾ ಪ್ರತಿಷ್ಠಾನದ ಡಾ| ಅಕ್ಕ ಗಂಗಾಂಬಿಕೆ ಮಾತನಾಡಿ, ಹಾಳು ಕೊಂಪೆಯಾದ ಬಸವಣ್ಣನ ವಿದ್ಯಾಭೂಮಿ, ಐಕ್ಯಕ್ಷೇತ್ರ ಕೂಡಲ ಸಂಗಮ, ಕಾರ್ಯಕ್ಷೇತ್ರ ಬಸವ ಕಲ್ಯಾಣ ವನ್ನು ಜಗತ್ತಿಗೆ ಪರಿಚಯಿಸಿದವರು ಮಾತಾಜಿ. ಬಸವಾದಿ ಶರಣರ ಕ್ಷೇತ್ರಗಳ ಅಭಿವೃದ್ಧಿಗೆ ಮಾತಾಜಿಯವರ ಕೊಡುಗೆ ಅಪಾರವಾಗಿದೆ. ಧರ್ಮ, ಆಧ್ಯಾತ್ಮ, ನೈತಿಕ ವಿಸ್ತಾರ ಮಾತಾಜಿಯ ಮೂಲ ಕಲ್ಪನೆಗಳಾಗಿದ್ದವು. ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಚೌಕಟ್ಟು ಹಾಕಿಕೊಟ್ಟು ಸ್ವತಂತ್ರ ಧರ್ಮದ ಮಾನ್ಯತೆಗೆ ಜೀವನವಿಡಿ ಹೋರಾಡಿದರು ಎಂದರು.

ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ಸದ್ಯ 1200 ರಾಷ್ಟ್ರೀಯ ಬಸವ ದಳದ ಶಾಖೆಗಳು ಇದ್ದು, ಬರುವ ದಿನಗಳಲ್ಲಿ ಹೆಚ್ಚಿನ ಶಾಖೆ ತೆರೆಯುತ್ತೇವೆ. ತೆಲಂಗಾಣ ರಾಜ್ಯದ ಹೈದ್ರಾಬಾದ್‌ನಲ್ಲಿ ಲಿಂಗಾಯತ ರ್ಯಾಲಿ ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಎಲ್ಲ ಬಸವತತ್ವ ಮಠಾ ಧೀಶರೊಂದಿಗೆ ಚರ್ಚಿಸಿ ದಿನಾಂಕ ಘೋಷಣೆ ಮಾಡುತ್ತೆವೆ ಎಂದರು. ಬೀದರದ ಹಿರಿಯ ನ್ಯಾಯವಾದಿ ಗಂಗಶೆಟ್ಟಿ ಪಾಟೀಲ ಅಧ್ಯಕ್ಷತೆ ವಹಿಸಿದರು.

ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ, ಮಹಾದೇಶ್ವರ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ಬಸವಯೋಗಿ ಸ್ವಾಮೀಜಿ, ನಾಗನೂರದ ಮಾತೆ ಬಸವ ಗೀತಾ, ಧಾರವಾಡದ ಮಾತೆ ಅಕ್ಕನಾಗಲಾಂಬಿಕೆ, ಬಸವಯೋಗಿ ಸ್ವಾಮೀಜಿ ಇದ್ದರು.

ತೆಲಂಗಾಣ ಲಿಂಗಾಯತ ಧರ್ಮ ಮಹಾಸಭಾ ರಾಜ್ಯಾಧ್ಯಕ್ಷ ವಿಜಯಕುಮಾರ ಪಟ್ನೆಯವರಿಗೆ ಶರಣ ದಾಸೋಹ ರತ್ನ, ಹುಬ್ಬಳ್ಳಿ ರಾಷ್ಟ್ರೀಯ ಬಸವ ದಳದ ಜಿಲ್ಲಾಧ್ಯಕ್ಷ ಕಲ್ಯಾಣಪ್ಪ ಪರಮಾದಿ ಅವರಿಗೆ ಶರಣ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

10-mudhol

Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

4

Kundapura: ಚರಂಡಿ ದುರಸ್ತಿಗಾಗಿ ಕಿತ್ತ ಸ್ಲ್ಯಾಬ್‌ಗಳೂ ಅಳವಡಿಕೆಯಾಗಿಲ್ಲ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.