![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 16, 2022, 5:30 AM IST
ಬೆಂಗಳೂರು:ರಾಜ್ಯದ ಸುಮಾರು 236 ನಗರ/ ಪಟ್ಟಣ ಸ್ಥಳೀಯ ಸಂಸ್ಥೆಗಳಿಗೆ ಒಳಚರಂಡಿ ವ್ಯವಸ್ಥೆಯೇ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ 314 ನಗರ/ ಪಟ್ಟಣ ಸ್ಥಳೀಯ ಸಂಸ್ಥೆಗಳಿದ್ದು, 78 ಸಂಸ್ಥೆಗಳಲ್ಲಿ ಮಾತ್ರ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದ 236 ಕಡೆ ಈ ವ್ಯವಸ್ಥೆ ಅಳವಡಿಕೆಗೆ ಸುಮಾರು 18 ಸಾವಿರ ಕೋಟಿ ರೂ.ಗಳ ಆವಶ್ಯಕತೆ ಇದ್ದು, ಈ ಸಂಬಂಧ ಕೇಂದ್ರದ ಮೊರೆ ಹೋಗಿದ್ದೇವೆ ಎಂದರು.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಕೆ.ಎ. ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸ್ಥಳೀಯ ಸಂಸ್ಥೆಗಳಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಸಂಬಂಧ ಈಗಾಗಲೇ ಸಮಗ್ರ ಯೋಜನಾ ವರದಿ ಸಿದ್ಧಗೊಳಿಸಲಾಗಿದ್ದು, ಈ ಯೋಜನೆಗಾಗಿ 18 ಸಾವಿರ ಕೋಟಿ ರೂ. ಬೇಕಾಗುತ್ತದೆ. ಹಂತ-ಹಂತವಾಗಿ ಇದನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಈ ಮಧ್ಯೆ ಹೆಚ್ಚಿನ ಅನುದಾನಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಯೋಜನೆ ಅನುಷ್ಟಾನಕ್ಕೆ ಕ್ರಮ: ಕಾರಜೋಳ
ಅನುಷ್ಠಾನಕ್ಕೆ ಕ್ರಮ
ಸಾಮಾನ್ಯವಾಗಿ ಯಾವುದೇ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಮುನ್ನ ಸಂಬಂಧಪಟ್ಟ ನಗರ/ ಪಟ್ಟಣದ ನಕ್ಷೆ ಅನ್ವಯ ಮತ್ತು ಪ್ರಸ್ತುತ ಜನಸಂಖ್ಯೆಗೆ ಅನುಗುಣವಾಗಿ ಮುಂದಿನ 25-30 ವರ್ಷಗಳಿಗೆ ಅಂದಾಜು ಲೆಕ್ಕ ಹಾಕಿ,
ಅದರ ಆಧಾರದ ಮೇಲೆ ಯೋಜನೆ ರೂಪಿಸಲಾಗುವುದು. ಆದರೆ, ರಾಜ್ಯದಲ್ಲಿ ನಗರೀಕರಣ ವೇಗವಾಗಿದ್ದು, ಜನಸಂಖ್ಯೆ ಹೆಚ್ಚಾಗುತ್ತಿದೆ. ಅದೇ ನಗರ/ ಪಟ್ಟಣಕ್ಕೆ ವಿವಿಧ ಹಂತಗಳಲ್ಲಿ ಒಳಚರಂಡಿ ಯೋಜನೆ ಅನುಷ್ಠಾನಗೊಳಿಸಬೇಕಿದೆ. ಸ್ಥಳೀಯ ಜನಪ್ರತಿನಿಧಿಗಳ ಕೋರಿಕೆ ಬಂದಲ್ಲಿ ಅಂದಾಜುಪಟ್ಟಿ ತಯಾರಿಸಿ, ಸರಕಾರದಿಂದ ಆಡಳಿತಾತ್ಮಕ ಅನುಮೋದನೆ ಪಡೆದು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.