ಹಿಜಾಬ್‌ ಹೈ ತೀರ್ಪು: ಬಂದೋಬಸ್ತ್

ಶಾಲಾ ಕಾಲೇಜುಗಳಿಗೆ ಪೊಲೀಸ್‌ ಭದ್ರತೆ

Team Udayavani, Mar 16, 2022, 5:59 PM IST

15

ಕೊಪ್ಪಳ: ಹಿಜಾಬ್‌ ವಿಚಾರ ಕುರಿತಂತೆ ಹೈಕೋರ್ಟ್‌ ಅಂತಿಮ ತೀರ್ಪು ಪ್ರಕಟಿಸಿದ್ದು, ಜಿಲ್ಲಾದ್ಯಂತ ಶಾಂತಿಯುತ ವಾತಾವರಣ ಕಂಡು ಬಂದಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ವಿದ್ಯಾರ್ಥಿಗಳು ಎಂದಿನಂತೆ ಶಾಲಾ-ಕಾಲೇಜು ತರಗತಿಗಳಿಗೆ ತೆರಳಿ ಪಾಠ ಆಲಿಸಿದರು. ಆದರೂ ಪೊಲೀಸ್‌ ಇಲಾಖೆ ನಗರ ಪ್ರದೇಶದಲ್ಲಿನ ಕಾಲೇಜುಗಳಿಗೆ ಬಿಗಿ ಭದ್ರತೆ ಒದಗಿಸಿತ್ತು.

ಜಿಲ್ಲಾಡಳಿತವು ಹೈಕೋರ್ಟ್‌ ತೀರ್ಪು ಪ್ರಕಟಿಸುವ ಮುನ್ನವೇ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪ್ರದೇಶಗಳಲ್ಲಿ ಶಾಲಾ-ಕಾಲೇಜುಗಳಿಗೆ ಪೊಲೀಸ್‌ ಭದ್ರತೆ ಒದಗಿಸಿತ್ತು.

ಮಂಗಳವಾರ ಎಂದಿನಂತೆ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಿ ಪಾಠ, ಬೋಧನೆ ಆಲಿಸಿದರು. ನಗರ ಪ್ರದೇಶದ ಸರ್ಕಾರಿ ಕಾಲೇಜುಗಳಲ್ಲಿ ಕೆಲ ದಿನಗಳ ಹಿಂದೆ ಹಿಜಾಬ್‌ ವಿವಾದ ಸದ್ದು ಮಾಡಿತ್ತು. ಜಿಲ್ಲಾದ್ಯಂತ ನಗರ ಪ್ರದೇಶದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಿತ್ತು. ಹೈಕೋರ್ಟ್‌ ಆದೇಶ ಪಾಲನೆ ಮಾಡುತ್ತಿರುವ ಕುರಿತು ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆಯೂ ಒಂದು ಕೋಮಿನ ಜನ ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೇ, ತಳ್ಳಾಡಿದ ಘಟನೆಯೂ ಜರುಗಿತ್ತು. ಹಾಗಾಗಿ ಜಿಲ್ಲೆಯಲ್ಲಿನ ಕೆಲವೊಂದು ಕಾಲೇಜುಗಳನ್ನು ಅತಿ ಸೂಕ್ಷ್ಮವೆಂದು ಪರಿಗಣಿಸಿ ಅಂತಹ ಶಾಲೆ ಹಾಗೂ ಕಾಲೇಜುಗಳ ಮೇಲೆಯೂ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮೊದಲೇ ನಿಗಾ ವಹಿಸಿತ್ತು.

ಶಾಲಾ ಕಾಲೇಜುಗಳಿಗೆ ಬಿಗಿ ಭದ್ರತೆ: ಮಂಗಳವಾರ ನಗರ ಪ್ರದೇಶದ ಕಾಲೇಜುಗಳಿಗೆ ಬೆಳಗ್ಗೆಯಿಂದಲೇ ಭಾರಿ ಭದ್ರತೆ ಒದಗಿಸಲಾಗಿತ್ತು. ಮಹಿಳಾ ಪೇದೆ ಸೇರಿ ಹೆಚ್ಚುವರಿ ಪೊಲೀಸ್‌ ತುಕಡಿ, ವಾಹನಗಳನ್ನು ನಿಯೋಜಿಸಿತ್ತು. ಇಷ್ಟಾದರೂ ಕೆಲು ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ಬಂದಿದ್ದರು. ಇದಕ್ಕೆ ಯಾವುದೇ ಪ್ರತಿರೋಧವು ಕಾಣಲಿಲ್ಲ. ಎಂದಿನಂತೆ ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸಿ ತರಗತಿಗೆ ತೆರಳಿ ಪಾಠ ಆಲಿಸಿ ಮನೆಗಗಳತ್ತ ಮರಳಿದರು.

ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶಗಳಲ್ಲೇ ಹಿಜಾಬ್‌ ವಿಚಾರ ಭಾರಿ ಸದ್ದು ಮಾಡಿತ್ತು. ಇಲ್ಲಿವರೆಗೂ ಹೈಕೋಟ್‌ ìನ ಮಧ್ಯಂತರ ತೀರ್ಪು ಪಾಲನೆ ಜಾರಿಯಲ್ಲಿತ್ತು. ಪ್ರಸ್ತುತ ಅಂತಿಮ ತೀರ್ಪು ಪ್ರಕಟವಾಗಿದ್ದು, ಇಲಾಖೆಯಿಂದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳಲ್ಲಿ ಕೋರ್ಟ್‌ ಆದೇಶ ಪಾಲನೆಗೆ ವಿದ್ಯಾರ್ಥಿಗಳಿಗೆ ಸೂಚನೆ ನೀಡುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ, ಯಾವುದೇ ಅಹಿತಕರ ಘಟನೆಗಳು ಜಿಲ್ಲೆಯಲ್ಲಿ ನಡೆದಿಲ್ಲ ಎಂದು ಇಲಾಖೆ ಅ ಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೈಕೋರ್ಟ್‌ ತೀರ್ಪು ಪ್ರಕಟವಾದ ನಂತರ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೇ ಶಾಂತಿಯುತ ವಾತಾವರಣ ಕಂಡುಬಂತು.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.