![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Mar 17, 2022, 1:40 PM IST
ಬೆಂಗಳೂರು : ”ದಿ ಕಾಶ್ಮೀರ್ ಫೈಲ್ಸ್” ರೀತಿ ಪುನೀತ್ ರಾಜಕುಮಾರ್ ಅವರ ”ಜೇಮ್ಸ್” ಚಿತ್ರಕ್ಕೂ ತೆರಿಗೆ ವಿನಾಯಿತಿ ನೀಡಬೇಕೆಂಬ ವಿಚಾರ ಈಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.
ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಇತರೆ ನಾಯಕರು ಆಗ್ರಹಿಸಿದ್ದಾರೆ. ಆದರೆ ಈ ಎರಡು ಚಿತ್ರದ ಹೆಸರಿನಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಜೇಮ್ಸ್ ಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ಬಗ್ಗೆ ವಿಧಾನ ಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಸಿ. ಟಿ. ರವಿ, ಎರಡು ಸಿನಿಮಾಗಳಿಗೆ ತಂದು ಹಾಕುವ ಕೆಲಸ ಬೇಡ.ಕಾಶ್ಮೀರ ಪೈಲ್ ಸಿನಿಮಾ ಅದು ಸತ್ಯಾಂಶಗಳ ಮೇಲೆ ತೆಗೆದಿರುವ ಸಿನಿಮಾ.ಇದು ಉತ್ತಮ ಸಂದೇಶ ಇರುವ ಸಿನಿಮಾ. ಜೇಮ್ಸ್ ಚಿತ್ರಕ್ಕೂ ಸಹ ತೆರಿಗೆ ವಿನಾಯಿತಿ ಕೊಡಲಿ.ಆದರೆ ಎರಡು ಸಿನಿಮಾಗಳನ್ನ ಹೋಲಿಕೆ ಮಾಡುವುದು ಬೇಡ ಎಂದು ಅಭಿಪ್ರಾಯ ಪಟ್ಟರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ಎಂದು ಸರಕಾರಕ್ಕೆ ಪತ್ರ ಬರೆಯುವೆ.ಪುನೀತ್ ಬಗ್ಗೆ ಬೊಮ್ಮಾಯಿ ಬಹಳ ಪ್ರೀತಿ ತೋರಿಸಿದ್ದರು. ಪದ್ಮಶ್ರೀ ಪ್ರಶಸ್ತಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತೋ ಇಲ್ವೋ ಗೊತ್ತಿಲ್ಲ .ಜೇಮ್ಸ್ ಚಿತ್ರ ಎಲ್ಲರೂ ನೋಡಿ. ನಾನು ಥಿಯೇಟರ್ ಗೆ ಹೋಗಲ್ಲ, ಹೋಗ್ಬಾರದು ಅಂತಿಲ್ಲ, ಥಿಯೇಟರ್ ಗೆ ಹೋಗುವ ಅಭ್ಯಾಸ ತಪ್ಪಿದೆ ಎಂದರು.
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.