ತ್ಯಾಜ್ಯ ನಿರ್ವಹಣೆಗೆ ಮಾದರಿ ತೊಟ್ಟಿ
Team Udayavani, Mar 18, 2022, 3:40 AM IST
ಬಜಪೆ: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಜಾಗದ ಕೊರತೆಯಿಂದಾಗಿ ವಿಲೇವಾರಿಗೆ ತಿಂಗಳಿಗೆ 2.5 ಲಕ್ಷ ರೂ. ಖರ್ಚು ಮಾಡಲಾಗುತ್ತಿತ್ತು.ಇದೇ ಆದಾಯ ಉಳಿಕೆ ಹಾಗೂ ತ್ಯಾಜ್ಯ ನಿರ್ವಹಣೆಗೆ ಸ್ಥಳೀಯಾಡಳಿತವು ವಿನೂತನ ಮಾದರಿ ಯೋಜನೆಯೊಂದನ್ನು ರೂಪಿಸಿದೆ.
ಪಂಚಾಯತ್ ಕಚೇರಿಯ ಸಮೀಪದಲ್ಲಿಯೇ ತ್ಯಾಜ್ಯ ಮಾದರಿ ತೊಟ್ಟಿಯನ್ನು ನಿರ್ಮಿಸಲಾಗಿದೆ. ಶಿಶಿರ ಕಾಂಪೋಸ್ಟ್ (ಬಯೋಮೆಸ್ ಕಾಂಪೋಸ್ಟ್ ) ಮಾದರಿಯಲ್ಲಿ ತ್ಯಾಜ್ಯವನ್ನು ಕಾಂಪೋಸ್ಟ್ ಮಾಡಲಾಗುತ್ತಿದೆ. ಸೋಮವಾರದ ಸಂತೆಯ ತ್ಯಾಜ್ಯ, ಕಸ, ಮಾರುಕಟ್ಟೆ, ಸಮೀಪದ ಹೊಟೇಲ್ ಮತ್ತು ಅಂಗಡಿಗಳ ಹಸಿ ಕಸವನ್ನು ತಂದು ಈ ತೊಟ್ಟಿಗೆ ಹಾಕಲಾಗುತ್ತದೆ.
2 ತೊಟ್ಟಿ ನಿರ್ಮಾಣ :
ಪ್ರಾಯೋಗಿಕವಾಗಿ ಪಟ್ಟಣ ಪಂಚಾಯತ್ ಕಚೇರಿಯ ಹಿಂದುಗಡೆ ಸುಮಾರು 1 ಲಕ್ಷ ರೂ. ವೆಚ್ಚದಲ್ಲಿ 2 ತೊಟ್ಟಿಗಳನ್ನು ನಿರ್ಮಿಸಲಾಗಿದೆ. ಅಡಿ ಭಾಗವನ್ನು ಕಲ್ಲಿನಿಂದ ಕಟ್ಟಿ, ಸುತ್ತ ನೆಟ್ ಹಾಕಲಾಗಿದೆ. ಗಾಳಿ ಹೋಗಲು ರಂಧ್ರಗಳನ್ನು ಕೊರೆದ ಮೂರು ಪೈಪ್ಗ್ಳನ್ನು ಅಳವಡಿಸಲಾಗಿದೆ. ತ್ಯಾಜ್ಯಕ್ಕೆ ಮರದ ಹುಡಿ ಅಥವಾ ತೆಂಗಿನ ನಾರು ಹುಡಿಯನ್ನು ಹಾಕಲಾಗುತ್ತಿದ್ದು, ಸುಮಾರು 45 ದಿನಗಳ ಕಾಲ ಕಾಂಪೋಸ್ಟ್ ಮಾಡಲಾಗುತ್ತದೆ. ಈ ಎರಡು ತೊಟ್ಟಿಗಳ ಪೈಕಿ ಸುಮಾರು 2 ಟನ್ ಕಾಂಪೋಸ್ಟ್ ಸಿಗಲಿದೆ.
ಸೋಮವಾರ ಸಂತೆಯ ಬಳಿಕ ಪಟ್ಟಣ ಪಂಚಾಯತ್ನ ಕಸ ಸಂಗ್ರಹ ವಾಹನವನ್ನು ಅಲ್ಲಿ ನಿಲ್ಲಿಸಲಾಗುತ್ತದೆ. ಸಂತೆಯ ಹಸಿ ತ್ಯಾಜ್ಯವನ್ನು ವಾಹನಕ್ಕೆ ಹಾಕಲಾಗುತ್ತದೆ. ಇದರಿಂದ ಸಂತೆಯ ಪರಿಸರ ಸ್ವತ್ಛತೆಗೆ ಹಾಗೂ ತ್ಯಾಜ್ಯ ವಿಲೇವಾರಿಗೆ ಉಪಕ್ರಮ ಕೈಗೊಂಡತಾಗಿದೆ.
ಜಾಗೃತಿ ಮಾಹಿತಿ :
ಬಜಪೆ ಪ.ಪಂ. ತ್ಯಾಜ್ಯ ಘಟಕಕ್ಕೆ ಜಾಗದ ಕೊರತೆ ಇದೆ. ಪಟ್ಟಣ ಪಂಚಾಯತ್ ಕಚೇರಿಯ ಸಮೀಪದಲ್ಲಿಯೇ ಹಸಿ ಕಸದಿಂದ ಕಾಂಪೋಸ್ಟ್ ತಯಾರಿ ಮಾದರಿ ತೊಟ್ಟಿಯನ್ನು ನಿರ್ಮಿಸಲಾಗಿದೆ. ವಸತಿ ಸಮುಚ್ಚಯಗಳು ಹೆಚ್ಚು ಇರುವುದರಿಂದ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ಸರಕಾರಿ ಕಚೇರಿಗಳಿಗೆ, ಅಂಗನವಾಡಿ ಕೇಂದ್ರಗಳಿಗೆ, ಶಾಲೆಗಳಿಗೆ ಮಾಹಿತಿ ನೀಡಲಾಗುತ್ತದೆ. ಮನೆಯಲ್ಲಿ ಹಸಿ ಕಸ, ಒಣಕಸ ಬೇರೆ ಬೇರೆ ಮಾಡಿ ನೀಡಿದ್ದಲ್ಲಿ ತ್ಯಾಜ್ಯ ವಿಲೇವಾರಿ ಸುಲಭವಾಗಲಿದೆ. – ಪೂರ್ಣಕಲಾ ವೈ.ಕೆ., ಮುಖ್ಯಾಧಿಕಾರಿ, ಬಜಪೆ ಪ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.