ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ;  ಕೈಗೂಡದ ಬಹುಕಾಲದ ಕನಸು!


Team Udayavani, Mar 18, 2022, 8:10 AM IST

ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ;  ಕೈಗೂಡದ ಬಹುಕಾಲದ ಕನಸು!

ಮೇರಿಹಿಲ್‌: ಮಂಗಳೂರಿನ ಸುದೀರ್ಘ‌ ಕಾಲದ ಬೇಡಿಕೆಯಾಗಿರುವ ಅಂತಾ ರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಇನ್ನೂ ಕಾಲ ಕೂಡಿಬಂದಿಲ್ಲ!

ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣವಾಗಬೇಕು ಎಂಬುದು ಕ್ರಿಕೆಟ್‌ ಪ್ರೇಮಿಗಳ ಬಹುಕಾಲದ ಹಂಬಲ. ಜಿಲ್ಲೆಯ ಪ್ರತಿಭೆ ಕೆ.ಎಲ್‌. ರಾಹುಲ್‌ ಅವರು ಪ್ರಸ್ತುತ ಭಾರತದ ತಂಡದ ಪ್ರಧಾನ ಆಟಗಾರರು. ಆದರೆ ನಗರದಲ್ಲಿ ಪ್ರಸ್ತುತ ರಣಜಿ ಪಂದ್ಯ ಆಯೋಜನೆಗೂ ಪೂರಕವಾದ ಮೈದಾನ ಸೌಲಭ್ಯ ಇಲ್ಲ; ಶಿವಮೊಗ್ಗ, ಹುಬ್ಬಳ್ಳಿ ಸಹಿತ ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ರಣಜಿ ಪಂದ್ಯಗಳು ಆಯೋಜನೆಗೊಳ್ಳುತ್ತಿವೆ.

ನೆಹರೂ ಮೈದಾನ ನಗರದಲ್ಲಿರುವ ಏಕೈಕ ಕ್ರಿಕೆಟ್‌ ಕ್ರೀಡಾಂಗಣ. ಮಕ್ಕಳಿಗೆ ಕ್ರಿಕೆಟ್‌ ತರಬೇತಿಗೂ ಇದು ಪ್ರಮುಖ ತಾಣ. ಇಲ್ಲಿ ಜಿಲ್ಲಾಮಟ್ಟದ, ಕೆಲವು ಬಾರಿ ಪ್ರಾದೇಶಿಕ ಮಟ್ಟದ ಕ್ರಿಕೆಟ್‌ ಪಂದ್ಯಗಳು ಆಯೋಜನೆ ಗೊಳ್ಳುತ್ತವೆ. ಆದರೆ ಇದನ್ನು ಸಮಾವೇಶಗಳಿಗೆ, ಇವೆಂಟ್‌ ಆಯೋಜನೆಗೂ ಬಳಕೆ ಮಾಡುವುದರಿಂದ ಕ್ರಿಕೆಟ್‌ ಪಂದ್ಯಗಳಿಗೂ ಪೂರ್ಣ ಪ್ರಮಾಣದಲ್ಲಿ ಲಭ್ಯವಿರುವುದಿಲ್ಲ. ನೆಹರೂ ಮೈದಾನ ಬಿಟ್ಟರೆ ಎನ್‌ಎಂಪಿಟಿಯಲ್ಲಿ ಕೆಲವು ಬಾರಿ ಕ್ರಿಕೆಟ್‌ ಪಂದ್ಯಗಳು ಆಯೋಜನೆ ಗೊಳ್ಳುತ್ತಿವೆ. ಈಗ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಸುಸಜ್ಜಿತ ಕ್ರೀಡಾಂಗಣ ಹೊರತುಪಡಿಸಿದರೆ ಉಳಿದಂತೆ ನಗರದಲ್ಲಿ ಸುಸಜ್ಜಿತ ಕ್ರಿಕೆಟ್‌ ಮೈದಾನ ಇಲ್ಲ.

1999ಬೇಡಿಕೆ :

ಕರ್ನಾಟಕ ಕ್ರಿಕೆಟ್‌ ಅಸೋಸಿಯೇಶನ್‌ 1999ರಲ್ಲಿ ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್‌ ಮೈದಾನವನ್ನು ನಿರ್ಮಿಸುವ ಪ್ರಸ್ತಾವವನ್ನು ದ.ಕ. ಜಿಲ್ಲಾಡಳಿತದ ಮುಂದಿರಿಸಿತ್ತು. 15 ಎಕ್ರೆ ಜಾಗವನ್ನು ಜಿಲ್ಲಾಡಳಿತ ನೀಡಿದರೆ ಮೈದಾನ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ತಿಳಿಸಿತ್ತು. ಪ್ರಸ್ತಾವ ಮುಂದಿರಿಸಿ 23 ವರ್ಷಗಳಾಗಿವೆ. ಸಾಕಾರ ರೂಪ ಪಡೆಯಲಿಲ್ಲ!

2002ರಲ್ಲಿ ಪಿಲಿಕುಳದ ಪ್ರಸ್ತುತ ಇರುವ ಗಾಲ್ಫ್ ಮೈದಾನದಲ್ಲಿ ಕ್ರಿಕೆಟ್‌ ಸ್ಟೇಡಿಯಂ ಹಾಗೂ ಸಮಗ್ರ ಕ್ರೀಡಾ ಸಂಕೀರ್ಣ ನಿರ್ಮಾಣದ ಪ್ರಸ್ತಾವ ಕೇಳಿಬಂತು. ಇಲ್ಲಿ ಸುಮಾರು 72 ಎಕ್ರೆ ಜಾಗವಿದೆ. ಇದನ್ನು ತಣ್ಣೀರುಬಾವಿಗೆ ವರ್ಗಾಯಿಸಿ ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಸ್ಟೇಡಿಯಂ ಹಾಗೂ ಕ್ರೀಡಾಸಂಕೀರ್ಣಕ್ಕೆ ಬಳಸಲು ನಿರ್ಣಯಿಸಲಾಗಿತ್ತು. ಇದೂ ಮುಂದೆ ಏನೂ ಆಗಲಿಲ್ಲ. ಈ ಮಧ್ಯೆ ನಗರದ ಇತರೆಡೆಗಳಲ್ಲಿಯೂ ಸ್ಥಳದ ಹುಡುಕಾಟ ನಡೆದಿತ್ತು. ಬೈಕಂಪಾಡಿ, ತಣ್ಣೀರುಬಾವಿ, ಬೊಂದೇಲ್‌ ಪ್ರಸ್ತಾವನೆಯಾಗಿ ಅಲ್ಲೇ ಬಾಕಿಯಾಗಿವೆ. ಇದೆಲ್ಲದರ ನಡುವೆ ಕೆಂಜಾರಿನಲ್ಲಿ ಮಂಗಳೂರು ವಿಮಾನನಿಲ್ದಾಣದ ಬಳಿ 30 ಎಕ್ರೆ ಜಾಗವನ್ನು ಕ್ರಿಕೆಟ್‌ ಆಸೋಸಿಯೇಶನ್‌ಗೆ 30 ವರ್ಷಗಳ ಅವಧಿಗೆ ಲೀಸ್‌ಗೆ ನೀಡುವ ಬಗ್ಗೆಯೂ ಇನ್ನೊಂದು ಪ್ರಸ್ತಾವ ಕೇಳಿ ಬಂದಿತ್ತು.

ಮೇರಿಹಿಲ್‌ನಲ್ಲಿ  ಸುಸಜ್ಜಿತ ಕ್ರಿಕೆಟ್‌ ಸ್ಟೇಡಿಯಂ! :

ನಿವೇಶನ ಹಾಗೂ ಅನುದಾನ ಲಭ್ಯತೆ ಆಧಾರದ ಮೇಲೆ ನಗರದ ಮೇರಿಹಿಲ್‌ನ ಕ್ರೀಡಾ ಇಲಾಖೆಗೆ ಸೇರಿದ 9 ಎಕ್ರೆ ಮೈದಾನವನ್ನೇ ಸುಸಜ್ಜಿತ ಕ್ರಿಕೆಟ್‌ ಮೈದಾನವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಸರಕಾರ ಸದ್ಯ ಉತ್ಸುಕತೆ ತೋರಿದೆ. ಇಲ್ಲಿ 10 ಕೋ.ರೂ ವೆಚ್ಚದಲ್ಲಿ ಕ್ರಿಕೆಟ್‌ ಅಕಾಡೆಮಿ ಹಾಗೂ ಟರ್ಫ್‌ ಮೈದಾನ ನಿರ್ಮಾಣ ಪ್ರಸ್ತಾವ ಅನುಷ್ಠಾನ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತದೆ. ಆದರೆ ಇದೂ ಮಾತುಕತೆ ಹಂತದಲ್ಲೇ ಇದೆ!

ಸ್ಟೇಡಿಯಂ ಮೂಲಕ ಮಂಗಳೂರು ವಿಶ್ವಮಾನ್ಯ! :

ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಗಮನ ಸೆಳೆಯುವ ಕ್ರಿಕೆಟ್‌ ಪಂದ್ಯಾಟ ಆಯೋಜನೆಗೊಳ್ಳುವುದು ನಗರದ ಅಭಿವೃದ್ಧಿಯ ದೃಷ್ಟಿಯಲ್ಲಿ ಅಗತ್ಯವಿದೆ. ಕ್ರಿಕೆಟ್‌ ಜನಾಕರ್ಷಣೆಯ ಕ್ರೀಡೆ. ಏಕದಿನ ಪಂದ್ಯ, ಟಿ-20, ಐಪಿಎಲ್‌, ಟೆಸ್ಟ್‌, ಅಂಡರ್‌-19 ಹೀಗೆ ಅಂತಾರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡೆಗಳು ಆಯೋಜನೆಗೊಳ್ಳುತ್ತಿವೆ. ಇವುಗಳಲ್ಲಿ ವಾರ್ಷಿಕವಾಗಿ ಒಂದೆರಡು ಪಂದ್ಯಗಳು ಮಂಗಳೂರಿನಲ್ಲಿ ನಡೆಯಲು ಅವಕಾಶವಾದರೆ, ನಗರ ವಿಶ್ವಮಟ್ಟದಲ್ಲಿ ಇನ್ನಷ್ಟು ಹೆಚ್ಚು ಜನಾಕರ್ಷಣೆ ಪಡೆಯಲು ಪೂರಕ.

ಮಾತುಕತೆ ಹಂತದಲ್ಲಿದೆ ಸ್ಟೇಡಿಯಂ ನಿರ್ಮಾಣ :

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಪ್ರಕ್ರಿಯೆ ಮಾತುಕತೆ ಹಂತದಲ್ಲಿದೆ. ಮೇರಿಹಿಲ್‌ನ ಹೆಲಿಪ್ಯಾಡ್‌ ಸಮೀಪದಲ್ಲಿರುವ ಕ್ರೀಡಾಂಗಣವನ್ನು ಇಲಾಖೆಯ ಉಸ್ತುವಾರಿಯಲ್ಲಿ ಕ್ರಿಕೆಟ್‌ ಅಸೋಸಿಯೇಶನ್‌ ಅವರು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಸರಕಾರ ಕೈಗೊಳ್ಳಲಿದೆ.-ಪ್ರದೀಪ್‌ ಡಿ’ಸೋಜಾ, –ಉಪನಿರ್ದೇಶಕರು, ಕ್ರೀಡಾ ಇಲಾಖೆ-ದ.ಕ.

 

-ದಿನೇಶ್‌ ಇರಾ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.