ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಶಾಸಕ,ಡಿಸಿ ಗೈರು: ಗ್ರಾಮಸ್ಥರ ಆಕ್ರೋಶ


Team Udayavani, Mar 19, 2022, 9:30 PM IST

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಶಾಸಕ,ಡಿಸಿ ಗೈರು: ಗ್ರಾಮಸ್ಥರ ಆಕ್ರೋಶ

ಗುಬ್ಬಿ: ಗ್ರಾಮಾಂತರ ಭಾಗದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟನೆಯ ನಂತರ ಸುಮಾರು 1 ಗಂಟೆಗಳ ಕಾಲ ಪ್ರತಿಭಟನೆಯ ಬಿಸಿಯನ್ನು ಅಧಿಕಾರಿಗಳು ಎದುರಿಸಬೇಕಾಯಿತು.

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ನೇರಲೆಕೆರೆ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ  ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿಲ್ಲ ಹಾಗಾಗಿ ಕಾರ್ಯಕ್ರಮವನ್ನು ಮಾಡಲೇ ಕೂಡದು ಎಂದು ಗ್ರಾಮಸ್ಥರು ಪಟ್ಟುಹಿಡಿದು ನಮ್ಮ ಸಮಸ್ಯೆಗಳನ್ನು ಬಗೆಹರಿಸುವವರು ಯಾರು ಎಂದು ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರು ಸೇರಿದಂತೆ ಎಲ್ಲ ಅಧಿಕಾರಿಗಳ ವಿರುದ್ಧ ಮುಗಿಬಿದ್ದರು.

ನಂತರ ಪೊಲೀಸ್ ಪ್ರವೇಶದ ನಂತರ  ಕಾರ್ಯಕ್ರಮ ಪೊಲೀಸರ ಮಧ್ಯಸ್ಥಿಕೆಯಲ್ಲೇ ಆರಂಭವಾಯಿತು.

ದೊಡ್ಡಗುಣಿ ಗ್ರಾಮದಿಂದ  ನೇರಳೆಕೆರೆ ಗ್ರಾಮಕ್ಕೆ ರಸ್ತೆ ಸರಿಯಿಲ್ಲದ ಇರುವುದರಿಂದ ಈ ಭಾಗದ ಜನರು ಓಡಾಡುವುದೇ ದುಸ್ತರವಾಗಿದೆ ಅದನ್ನು ಮೊದಲು ಮಾಡಿಸಿ   ಎಂದು ಬಹುತೇಕ ಗ್ರಾಮಸ್ಥರು ಮನವಿ ಸಲ್ಲಿಸಿದರು  ಮನವಿಗೆ ಸಂಬಂಧಪಟ್ಟ ಪಿಡಬ್ಲ್ಯುಡಿ ಅಧಿಕಾರಿ ವಿಜಯ್ ಕುಮಾರ್ ಉತ್ತರಿಸಿ ಏಪ್ರಿಲ್ ತಿಂಗಳಿನಲ್ಲಿ ಅನುದಾನ ಒದಗಲಿದ್ದು ಆಗ ಮಾಡಿಸಲಾಗುತ್ತದೆ ಸದ್ಯಕ್ಕೆ ರಸ್ತೆಯ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.ಇನ್ನೂ

ನೇರಲಕೆರೆ ಪ್ರೌಢಶಾಲೆಗೆ ಕಾಂಪೌಂಡ್ ವ್ಯವಸ್ಥೆ ಇಲ್ಲದೆ  ಜೂಜು ಅಡ್ಡೆ ಆಗಿದ್ದು ಅದಕ್ಕೆ ಕೂಡಲೇ ಕಾಂಪೌಂಡ್ ಅನ್ನು ನಿರ್ಮಾಣ ಮಾಡಬೇಕು,  ದೊಡ್ಡಗುಣಿಯಿಂದ ತಗ್ಗಿಹಳ್ಳಿ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಬೇಕು ರೈತರು ಟಿಸಿ ತೆಗೆದುಕೊಳ್ಳಲು ಹೋದರೆ ಸುಮಾರು 1.20 ಲಕ್ಷ ಹಣವನ್ನು ನೀಡುವಂತಹ ಪರಿಸ್ಥಿತಿ  ರೈತರದ್ದಾಗಿತ್ತು ಪಕ್ಕದ ಬೇರೆ ತಾಲ್ಲೂಕುಗಳಲ್ಲಿ ಇಂತಹ ವ್ಯವಸ್ಥೆ ಇಲ್ಲ ಎಂದು ಬೆಸ್ಕಾಂ ಅಧಿಕಾರಿಗಳ ವಿರುದ್ಧ ರೈತರು ಗರಂ ಆದರು.

ಇಡೀ ಗ್ರಾಮದಲ್ಲಿ ಮದ್ಯಮಾರಾಟ ಅತ್ಯಧಿಕವಾಗಿ ನಡೆಯುತ್ತಿದ್ದು ಅದನ್ನು ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.

ಆರೋಗ್ಯ ಇಲಾಖೆಯ ಕಿರಿಯ ಆರೋಗ್ಯಾಧಿಕಾರಿ ಕಚೇರಿ ನೇರಲೆಕೆರೆ ಗ್ರಾಮದಲ್ಲಿ ಇದ್ದರೂ ಸಹ ಇಲ್ಲಿ ಯಾವುದೇ ಆರೋಗ್ಯ ಸಿಬ್ಬಂದಿ ಇಲ್ಲದೇ ಇರುವುದರಿಂದ ಸಾಕಷ್ಟು ಸಮಸ್ಯೆಯಾಗಿದ್ದು ಕೂಡಲೇ ಅಲ್ಲಿಗೆ ಆರೋಗ್ಯ ಸಹಾಯಕಿಯನ್ನು ಕೊಡಬೇಕು ಎಂದು ಮನವಿ ಮಾಡಿದರು

ಇನ್ನೂ ಈ ಗ್ರಾಮದಲ್ಲಿ ಅತ್ಯಧಿಕವಾದ ನೀರಿನ ಸಮಸ್ಯೆ ಇದ್ದು ಅದನ್ನು ಸರಿಪಡಿಸಬೇಕು 1300 ಅಡಿ ಕೊಳವೆಬಾವಿ ಕೊರೆಸಿದರೂ ಸಹ ನೀರಿಲ್ಲದೆ ಇರುವುದರಿಂದ ಎತ್ತಿನಹೊಳೆ ಯೋಜನೆ ಮೂಲಕ ಇಲ್ಲಿಗೆ ನೀರು ಹರಿಸಲು ಎಸ್ಕೇಪ್ ಇಡಬೇಕು ಎಂದು ಬಹುತೇಕ ರೈತರ ಮನವಿಯಾಗಿತ್ತು.

ಇನ್ನೂ ಪೋಡಿ ಮುಕ್ತ ಗ್ರಾಮ ಎಂದು ಹೆಸರಿಗೆ ಮುಗಿಸಿದ್ದಾರೆ ಆದರೆ ಇದುವರೆಗೂ ಸಂಪೂರ್ಣವಾಗಿ ಪೋಡಿಮುಕ್ತ ಗ್ರಾಮವನ್ನಾಗಿ ಅಧಿಕಾರಿಗಳು ಮಾಡಿಲ್ಲ ಅದನ್ನು ಸರಿಪಡಿಸಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕು ಕಚೇರಿಯಲ್ಲಿ ದಾಖಲೆಗಳು  ಇಡುವಂತಹ ಸ್ಟೋರ್ ರೂಂ ಕುರಿ ತುಂಬುವ ದೊಡ್ಡಿಯಾಗಿದ್ದು ಯಾರು ಬೇಕಾದರೂ ಅಲ್ಲಿ ಹೋಗುವಂತಹ   ಸ್ಥಿತಿ ನಿರ್ಮಾಣವಾಗಿದೆ ಅದನ್ನು ತಪ್ಪಿಸಿ ನಮ್ಮ ರೆಕಾರ್ಡುಗಳನ್ನು ಉಳಿಸಬೇಕು ಎಂದು ರೈತರು ಮನವಿ ಮಾಡಿದರು.

ಇನ್ನೂ ನೇರಲಕೆರೆ ಗ್ರಾಮದ ಸರ್ವೆ ನಂಬರ್ 31 ರಲ್ಲಿ 3ಎಕರೆ ಗೋಮಾಳದ ಜಾಗವನ್ನು ಉಳ್ಳವರು ರಾಜಕೀಯ ಹಿಂಬಾಲಕರು ಕಬಳಿಸಲು ಯತ್ನಿಸುತ್ತಿದ್ದು ಅದನ್ನು ಕೂಡಲೇ ಸರ್ಕಾರ ತನ್ನ ಹತೋಟಿಗೆ ತೆಗೆದು ಕೊಳ್ಳಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಒಟ್ಟಾರೆ ಹತ್ತು ಹಲವು ಸಮಸ್ಯೆಗಳನ್ನು ಕೇಳಿಕೊಂಡು ನಂತಹ ಗ್ರಾಮಸ್ಥರಿಗೆ ಸಂಬಂಧಪಟ್ಟಂತಹ ಕೆಲವು ಅಧಿಕಾರಿಗಳು ಮಾಹಿತಿಯನ್ನು ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಶಿವಾನಂದ,ಸದಸ್ಯರಾದ ನರಸಿಂಹಮೂರ್ತಿ, ರಾಜಣ್ಣ, ಗ್ರೇಡ್ 2 ತಹಸೀಲ್ದಾರ್ ಶಶಿಕಲಾ, ಕಾರ್ಯನಿರ್ವಾಹಕ ಅಧಿಕಾರಿ ನರಸಿಂಹಯ್ಯ,  ಸಿಡಿಪಿಓ ಮಂಜುನಾಥ, ಪಿಡಬ್ಲ್ಯುಡಿ ಅಧಿಕಾರಿ ವಿಜಯಕುಮಾರ್,  ಆರೋಗ್ಯಾಧಿಕಾರಿ ಜಯಣ್ಣ, ಕೃಷಿ ಇಲಾಖೆಯ ಜಗನ್ನಾಥ್, ಬೆಸ್ಕಾಂ  ಅಧಿಕಾರಿ ಅನಿಲ್ ಕುಮಾರ್ ,ಕಂದಾಯ ಇಲಾಖೆ ಅಧಿಕಾರಿ ನಾರಾಯಣ್, ಅಬಕಾರಿ ಇಲಾಖೆ ಅಧಿಕಾರಿ ವನಜಾಕ್ಷಿ,ಸಮಾಜ ಕಲ್ಯಾಣ ಇಲಾಖೆಯ ರಾಮಣ್ಣ, ಪಂಚಾಯತ್ ರಾಜ್ ಇಲಾಖೆಯ ಲಿಂಗರಾಜ  ಶೆಟ್ಟಿ, ಸಿಪಿಐ ನದಾಫ್, ಪಿಎಸ್ ಐ ನಟರಾಜು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.