![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 20, 2022, 6:20 AM IST
ಮುಂಬೈ: ಔರಂಗಜೇಬ್ ಸಮಾಧಿಯ ಮುಂದೆ ತಲೆಬಾಗಿ ನಮಿಸುವವರ ಜೊತೆಗೆ ಮೈತ್ರಿ ಹೇಗೆ ಸಾಧ್ಯ? ಎಂದು ಶಿವಸೇನೆಯ ನಾಯಕ ಸಂಜಯ್ ರವೂತ್ ಪ್ರಶ್ನಿಸಿದ್ದಾರೆ.
ಇತ್ತೀಚೆಗೆ, ಶಿವಸೇನೆಯ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಇಂಗಿತವನ್ನು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ನಾಯಕ ಇಮ್ತಿಯಾಜ್ ಜಲೀಲ್ ವ್ಯಕ್ತಪಡಿಸಿದ್ದರು.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಸಂಜಯ್ ರವೂತ್, ನಾವು ಔರಂಗಜೇಬ್ ಸಮಾಧಿಯ ಮುಂದೆ ತಲೆಬಾಗುವವರ ಜೊತೆಗೆ ಮೈತ್ರಿ ಬೆಳೆಸುವುದಿಲ್ಲ. ಇಂಥ ಯೋಚನೆಯನ್ನೂ ಮಾಡುವುದಿಲ್ಲ. ನಾವು ಛತ್ರಪತಿ ಶಿವಾಜಿಯವರ ಆದರ್ಶಗಳಲ್ಲೇ ಮುಂದುವರಿಯುತ್ತೇವೆ ಎಂದು ಹೇಳಿದ್ದಾರೆ.
“ಇದಲ್ಲದೆ, ಈಗಾಗಲೇ ಶಿವಸೇನೆಯು ಕಾಂಗ್ರೆಸ್, ಎನ್ಸಿಪಿ ಜೊತೆಗೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರವನ್ನು ರಚಿಸಿದೆ. ಈ ಮೈತ್ರಿಕೂಟದಲ್ಲಿ ನಾಲ್ಕನೇ ಪಕ್ಷವೊಂದನ್ನು ತರುವ ಯಾವುದೇ ಇಚ್ಛೆಯಿಲ್ಲ” ಎಂದು ಸಂಜಯ್ ರವೂತ್ ಸ್ಪಷ್ಟಪಡಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.