![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 20, 2022, 4:01 PM IST
ಬೆಂಗಳೂರು: ಎಂಭತ್ತು ಲಕ್ಷ ರೂ. ಮೌಲ್ಯದ ರಕ್ತ ಚಂದನ ಮರ ವಶಕ್ಕೆ ಪಡೆದುಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ರಾಮಮೂರ್ತಿನಗರ ಠಾಣಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಇಲಾಖೆ ತನಿಖೆ ಆರಂಭಿಸಲು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
2021ರ ಅಕ್ಟೋಬರ್ನಲ್ಲಿ ಠಾಣೆ ಸಿಬ್ಬಂದಿ ಮಾದಕ ವಸ್ತು ಪ್ರಕರಣದಲ್ಲಿ ಮಂಗಳೂರಿನ ಬೆಳ್ತಂಗಡಿ ಸಮೀಪದ ವೇಣೂರಿಗೆ ತೆರಳಿದ್ದರು. ಸ್ಥಳಕ್ಕೆ ಹೋಗುತ್ತಿದ್ದಂತೆ ಪೊಲೀಸರು ಮತ್ತು ಕಳ್ಳರ ನಡುವೆ ಮಾರಾಮಾರಿಯಾಗಿದ್ದು, ನಂತರ ಚೀಲದಲ್ಲಿದ್ದ ವಸ್ತು ತೆರೆದು ನೋಡಿದಾಗ ಮಾದಕ ವಸ್ತು ಬದಲಿಗೆ, ರಕ್ತ ಚಂದನ ಪತ್ತೆಯಾಗಿತ್ತು. ಬಳಿಕ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.
ಈ ವೇಳೆ ಮತ್ತೂಬ್ಬ ಆರೋಪಿ ಪೊಲೀಸರ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದ. ಅದರಿಂದ ಹೆದರಿದ ಪೊಲೀಸರು ಪ್ರಾಣ ರಕ್ಷಣೆಗಾಗಿ ಅಲ್ಲೇ ಇದ್ದ ಕಾರಿನ ಹಿಂಭಾಗದಲ್ಲಿ ಆಶ್ರಯ ಪಡೆದುಕೊಂಡಿದ್ದರು. ಈ ವೇಳೆ ಬಂಧಿಸಿದ್ದ ಇಬ್ಬರು ಕೈ ಕೋಳ ಸಮೇತ ಪರಾರಿಯಾಗಿದ್ದರು. ಬಳಿಕ 750 ಕೆಜಿ ತೂಕದ ರಕ್ತಚಂದನವನ್ನು ವಶಕ್ಕೆ ಪಡೆದು ಠಾಣೆಗೆ ತಂದಿದ್ದರು.
ಆದರೆ, ಈ ವಿಚಾರವನ್ನು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿಲ್ಲ. ಜತೆಗೆ ಕೋರ್ಟ್ಗೂ ಮಾಹಿತಿ ನೀಡದೆ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಮಧ್ಯೆ ರಕ್ತಚಂದನವನ್ನು ಪೊಲೀಸರೇ ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಜಗನ್ ಕುಮಾರ್ ಎಂಬುವವರು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ಗೆ ದೂರು ನೀಡಿದ್ದರು.
ಇದನ್ನೂ ಓದಿ :ಚೆನ್ನೈ ತಂಡಕ್ಕೆ ಮೊಯಿನ್ ಅಲಿ ವಿಸಾ ಚಿಂತೆ; ಮೊದಲ ಪಂದ್ಯಕ್ಕೆ ಅನುಮಾನ
ಅದನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಇಲಾಖೆ, ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದಾರೆ. ಮತ್ತೂಂದೆಡೆ ದೂರುದಾರ ಜಗನ್ ಕುಮಾರ್ ವಿರುದ್ಧ ಈ ಹಿಂದೆ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಆರೋಪ ಪಟ್ಟಿ ಕೂಡ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ. ಜಗನ್ ಕುಮಾರ್ ಅವರಿಗೆ ಈ ಹಿಂದೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ವೊಬ್ಬ ಪ್ರಕರಣ ಕುರಿತು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
You seem to have an Ad Blocker on.
To continue reading, please turn it off or whitelist Udayavani.