ಪ್ರಿಯಕರನ ಮದುವೆ ಸುದ್ದಿ ಕೇಳಿ ಪ್ರಿಯತಮೆ ಆತ್ಮಹತ್ಯೆ, ಮದುವೆ ಮಂಟಪದಿಂದ ಪ್ರಿಯಕರ ಪರಾರಿ


Team Udayavani, Mar 20, 2022, 7:51 PM IST

ಪ್ರಿಯಕರನ ಮದುವೆಯಿಂದ ಬೇಸತ್ತು ಪ್ರಿಯತಮೆ ಆತ್ಮಹತ್ಯೆ, ಮದುವೆ ಮಂಟಪದಿಂದ ಪ್ರಿಯಕರ ಪರಾರಿ

ಶಿವಮೊಗ್ಗ :  ಬೇರೆ ಯುವತಿ ಜೊತೆಗೆ ಪ್ರಿಯಕರ ಮದುವೆ ಆಗುತ್ತಿರುವುದರಿಂದ ಮನನೊಂದು ಪ್ರಿಯತಮೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೆ ಪ್ರಿಯಕರ ಮದುವೆ ಮಂಟಪದಿಂದಲೇ ಪರಾರಿಯಾಗಿದ್ದಾನೆ.

ಶಿವಮೊಗ್ಗದ ಓ.ಟಿ.ರಸ್ತೆಯ ರೂಪಶ್ರೀ, ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾಲ್ಕು ಪುಟದ ಡೆತ್ ನೋಟ್ ಬರೆದಿದ್ದು, ಪ್ರಿಯಕರನ ವಿರುದ್ಧ ಆರೋಪ ಮಾಡಿದ್ದಾಳೆ.

ಪ್ರಿಯಕರನ ಮದುವೆ ದಿನವೇ ನೇಣಿಗೆ

ಮುರಳಿ ಎಂಬಾತನನ್ನು ರೂಪಶ್ರೀ ಬಹು ವರ್ಷದಿಂದ ಪ್ರೀತಿಸುತ್ತಿದ್ದಳು. ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮುರಳಿಯ ಮದುವೆ ನಿಶ್ಚಯವಾಗಿತ್ತು. ಮದುವೆ ದಿನವೇ ರೂಪಶ್ರೀ ನೇಣಿಗೆ ಶರಣಾಗಿದ್ದಾರೆ.

ಡೆತ್ ನೋಟ್ ಪತ್ತೆ

ಸಾವಿಗೂ ಮುನ್ನ ರೂಪಶ್ರೀ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಇದು ಪತ್ತೆಯಾಗಿದೆ. ‘ಇಬ್ಬರೂ ಪ್ರೀತಿ ಮಾಡುತ್ತಿದ್ದೆವು. ಮದುವೆ ಆಗಲು ಕೂಡ ನಿರ್ಧಾರ ಮಾಡಿಕೊಂಡಿದ್ದೆವು. ಈಗ ತನ್ನನ್ನು ಬಿಟ್ಟು ಬೇರೊಬ್ಬರ ಜೊತೆಗೆ ಮದುವೆ ಆಗುತ್ತಿದ್ದಾನೆ. ಆ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ರೂಪಶ್ರೀ ಡೆತ್ ನೋಟ್’ನಲ್ಲಿ ಬರೆದಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಅಡಿ ಪ್ರಕರಣ ದಾಖಲು ಮಾಡಿದ್ದೇವೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಸೇರುತ್ತೇನೆ ಎನ್ನುವುದು ಸುಳ್ಳು ಸುದ್ದಿ: ಗೋವಾ ಶಾಸಕ ವಿಜಯ್ ಸರ್ದೇಸಾಯಿ

ಮದುವೆ ಮನೆಯಿಂದಲೇ ಪರಾರಿ

ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಿಶ್ಚಯವಾಗಿದ್ದ ಯುವತಿಗೆ ಮುರಳಿ ತಾಳಿ ಕಟ್ಟಿದ್ದಾನೆ. ರೂಪಶ್ರೀ ಆತ್ಮಹತ್ಯೆಯ ವಿಚಾರ ತಿಳಿಯುತ್ತಿದ್ದ ಹಾಗೆ ಕಲ್ಯಾಣ ಮಂಟಪದಿಂದಲೇ ಮುರಳಿ ಪರಾರಿಯಾಗಿದ್ದಾನೆ. ‘ಮುರಳಿಯ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಸದ್ಯದಲ್ಲೇ ಆತನನ್ನು ಬಂಧಿಸುತ್ತೇವೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದರು.

ಇಬ್ಬರೂ ಉಪನ್ಯಾಸಕರಾಗಿದ್ದರು

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ರೂಪಶ್ರೀ ಅತಿಥಿ ಉಪನ್ಯಾಸಕರಾಗಿದ್ದರು. ಪಿ.ಹೆಚ್.ಡಿ ಮಾಡುತ್ತಿದ್ದರು. ಇನ್ನು, ಮುರಳಿ ಕೂಡ ಉಪನ್ಯಾಸಕನಾಗಿದ್ದ. ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ. ಬಹು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಈಚೆಗೆ ರೂಪಶ್ರೀಯನ್ನು ಬಿಟ್ಟು ಮನೆಯಲ್ಲಿ ನಿಶ್ಚಯಿಸಿದ್ದ ಯುವತಿ ಜೊತೆಗೆ ಮುರಳಿ ಮದುವೆ ಆಗಿದ್ದಾನೆ.

ಆತ್ಮಹತ್ಯೆ ಪ್ರಕರಣ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.