ಗೊಬ್ಬರವಾಗಿ ಬದಲಾಗಲಿದೆ ಗಂಗೆಯ ಕೆಸರು;ಗಂಗಾ ನೈರ್ಮಲ್ಯ ನಿಟ್ಟಿನಲ್ಲಿ ಸರ್ಕಾರ ಚಿಂತನೆ
ಸಾವಯವ ಕೃಷಿಗೂ ಉತ್ತೇಜನ; ಜಲಮಾಲಿನ್ಯಕ್ಕೂ ತಡೆ
Team Udayavani, Mar 21, 2022, 7:45 AM IST
ನವದೆಹಲಿ: ಗಂಗಾ ನದಿಯಲ್ಲಿನ ಕೆಸರನ್ನು ಗೊಬ್ಬರವನ್ನಾಗಿ ಪರಿವರ್ತಿಸಿ, ಅವುಗಳನ್ನು ರಾಸಾಯನಿಕ ಗೊಬ್ಬರಗಳಿಗೆ ಪರ್ಯಾಯವಾಗಿ ಬಳಸುವಂತೆ ಮಾಡಲು ಮತ್ತು ಆ ಮೂಲಕ ಸಾವಯವ ಕೃಷಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಜೊತೆಗೆ, ರಾಸಾಯನಿಕಗಳು ನದಿಯನ್ನು ಸೇರದಂತೆ ತಡೆಯುವ ನಿಟ್ಟಿನಲ್ಲೂ ಸರ್ಕಾರ ಯೋಜನೆ ರೂಪಿಸುತ್ತಿದೆ.
ಗಂಗಾ ನದಿಯ ಕೆಸರಿನ ನಿರ್ವಹಣೆ ಕುರಿತು ಕಳೆದ 2 ವಾರಗಳಿಂದ ಸತತ ಹಲವು ಸುತ್ತುಗಳ ಸಭೆ ನಡೆದಿದ್ದು, ಬೇರೆ ಬೇರೆ ರೀತಿಯ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ರಾಷ್ಟ್ರೀಯ ಸ್ವತ್ಛ ಗಂಗಾ ಯೋಜನೆ(ಎನ್ಎಂಸಿಜಿ) ಪ್ರಧಾನ ನಿರ್ದೇಶಕ ಅಶೋಕ್ ಕುಮಾರ್ ಹೇಳಿದ್ದಾರೆ.
ಅದರಂತೆ, ನದಿಯಲ್ಲಿನ ಕೆಸರನ್ನು ಸಂಸ್ಕರಿಸಿ, ಅದನ್ನು ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಸಂಸ್ಕರಿತ ಕೆಸರು ರಸಗೊಬ್ಬರಕ್ಕೆ ಸಮಾನವಾಗಿರುತ್ತದೆ. ವಿಫುಲ ಫಾಸ್ಫರಸ್ ಮತ್ತು ಪೌಷ್ಟಿಕಾಂಶಗಳಿರುವ ಸಂಸ್ಕರಿತ ನೀರು ಬೆಳೆಗಳ ಬೆಳವಣಿಗೆಗೂ ಸಹಕಾರಿ. ಹೀಗಾಗಿ, ರಸಗೊಬ್ಬರವಾಗಿ ಬಳಕೆಯಾಗುವಂಥ ಸಂಸ್ಕರಿತ ಕೆಸರನ್ನು ಉತ್ಪತ್ತಿ ಮಾಡಿ, ಅದನ್ನು ರೈತರಿಗೆ ಕಡಿಮೆ ದರದಲ್ಲಿ ನೀಡುವ ಕುರಿತು ಕಂಪನಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ. ಇದಕ್ಕೆ ಅವರು ಒಪ್ಪಿದರೆ, ನದಿಗಳಿಗೆ ಅಪಾಯಕಾರಿ ರಾಸಾಯನಿಕಗಳು ಸೇರುವುದನ್ನೂ ತಪ್ಪಿಸಿದಂತಾಗುತ್ತದೆ.
ಏನು ಅನುಕೂಲ?
– ಗಂಗಾ ನದಿಯೂ ಕೆಸರಿನಿಂದ ಮುಕ್ತಗೊಂಡು, ಸ್ವಚ್ಛಗೊಳ್ಳುತ್ತದೆ
– ರಾಸಾಯನಿಕಗಳ ಬದಲು ರೈತರು ಸಾವಯವ ಗೊಬ್ಬರ ಬಳಸುತ್ತಾರೆ
– ಸಾವಯವ ಕೃಷಿಗೆ ಉತ್ತೇಜನ ಸಿಗಲಿದೆ
– ಅಪಾಯಕಾರಿ ರಾಸಾಯನಿಕಗಳು ನದಿಗೆ ಸೇರುವುದು ತಪ್ಪುತ್ತದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.