“ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆ; ದೇಶ ವಿಭಜಿಸುವ ಷಡ್ಯಂತ್ರ: ಡಾ| ಭಟ್‌


Team Udayavani, Mar 21, 2022, 6:35 AM IST

“ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆ; ದೇಶ ವಿಭಜಿಸುವ ಷಡ್ಯಂತ್ರ: ಡಾ| ಭಟ್‌

ಉಳ್ಳಾಲ: ಸ್ವಾತಂತ್ರ್ಯ ಪೂರ್ವದಲ್ಲಿ ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣದಿಂದ ದೇಶ ವಿಭಜನೆಯಾಯಿತು. ಈಗ ಹಿಜಾಬ್‌ನಂತಹ ವಿಚಾರವನ್ನು ಮುನ್ನೆಲೆಗೆ ತಂದಿದ್ದು, ಮತ್ತೆ ದೇಶವನ್ನು ವಿಭಜಿಸುವಂತಹ ಕುತಂತ್ರ ನಡೆಯುತ್ತಿದೆ. ಇದರ ವಿರುದ್ಧ ಹಿಂದೂಗಳು ಸಂಘಟಿತರಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಅಭಿಪ್ರಾಯಪಟ್ಟರು.

ವಿಶ್ವ ಹಿಂದೂ ಪರಿಷತ್‌ ಮಂಗಳೂರು ವಿಭಾಗದ ವತಿಯಿಂದ ರವಿವಾರ ಶ್ರೀ ಕ್ಷೇತ್ರ ಕದ್ರಿಯಿಂದ ಕುತ್ತಾರು ಆದಿ ಕೊರಗಜ್ಜ ಕ್ಷೇತ್ರದವರೆಗೆ ನಡೆದ “ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಅವರು  ದಿಕ್ಸೂಚಿ ಭಾಷಣ ಮಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿಯೇ ಮುಸ್ಲಿಂ ತುಷ್ಟೀಕರಣ ಆರಂಭವಾಗಿತ್ತು. ಆರಂಭದಲ್ಲಿ ಕಾಂಗ್ರೆಸ್‌ನ ಮೂಲ ಪ್ರಾರ್ಥನೆಯಾದ ವಂದೇಮಾತರಂ ಮಹಮ್ಮದಾಲಿ ಜಿನ್ನನಿಗಾಗಿ ಕಡಿತವಾಯಿತು. ರಾಷ್ಟ್ರಧ್ವಜವಾಗಬೇಕಿದ್ದ ಕೇಸರಿ ಧ್ವಜ ಕೇಸರಿ, ಬಿಳಿ, ಹಸಿರು ಬಣ್ಣದ್ದಾಯಿತು. ರಘುಪತಿ ರಾಘವ ರಾಜಾರಾಮ್‌ ಕಡಿತವಾಯಿತು. ಈಗ ಹಿಜಾಬ್‌ ಹೆಸರಿನಲ್ಲಿ ಉಡುಪಿಯಲ್ಲಿ ಮುಗ್ಧ ಹೆಣ್ಣುಮಕ್ಕ ಳನ್ನು ಬಳಸಿ ದೇಶಾದ್ಯಂತ ಪ್ರತ್ಯೇಕತ ವಾದದ ಭಾವನೆ ಮೂಡಿಸುವ ಯತ್ನ ನಡೆಯುತ್ತಿದೆ. ಶಾಲಾ ಸಮವಸ್ತ್ರ ಧರಿಸಿ ಕಲಿತು ಉನ್ನತ ಸ್ಥಾನಕ್ಕೇರಿರುವ ಅನೇಕ ಮುಸ್ಲಿಂ ಮಹಿಳೆಯರಿದ್ದಾರೆ. ಅವರ ಶಿಕ್ಷಣಕ್ಕೆ ಇಲ್ಲಿ ಯಾವುದೇ ಅಡ್ಡಿಯಾ ಗಿಲ್ಲ. ಈಗ ಅಡ್ಡಿಯಾಗುತ್ತಿದೆ ಎನ್ನುತ್ತಿರು ವುದು ಖೇದನೀಯ ಎಂದರು.

ನಾವೂ ಬದುಕುವುದು ಬೇಡವೇ?
ಇತಿಹಾಸದ ಪುಟ ತೆರೆದು ಓದಿದರೆ ಹಿಂದೂ ಧರ್ಮದ ಯಾರೂ ಕೂಡ ತಾವಾಗಿಯೇ ಇನ್ನೊಬ್ಬರ ಮೇಲೆ ದಾಳಿ ಮಾಡಿದ ಉದಾಹರಣೆ ಇಲ್ಲ. ಸದಾ ನೋವು ತಿನ್ನುತ್ತಾ ಇರಬೇಕೇ? ಹಿಂದೂಗಳು ಬದುಕುವುದು ಬೇಡವೇ? ಅನ್ಯ ಧರ್ಮೀಯರನ್ನು ದ್ವೇಷಿಸಲು ಹೇಳಿಕೊಡುವ ಮತಗಳು ಮೇಲೋ ಅಥವಾ ಮಾನವರು ಮಾತ್ರವಲ್ಲದೆ ಸೃಷ್ಟಿಯ ಎಲ್ಲ ಜೀವಜಂತುಗಳಿಗೆ ಶ್ರೇಯಸ್ಸು ಬಯಸುವ ಹಿಂದೂ ಧರ್ಮ ಮೇಲೋ? ಎಂದು ಡಾ| ಪ್ರಭಾಕರ ಭಟ್‌ ಪ್ರಶ್ನಿಸಿದರು.

ವಿಹಿಂಪ ಪ್ರಾಂತ ಕಾರ್ಯಕಾರಿಣಿ ಸದಸ್ಯ ಕೃಷ್ಣಮೂರ್ತಿ, ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌, ಜಿಲ್ಲಾ ಅಧ್ಯಕ್ಷ ಗೋಪಾಲ ಕುತ್ತಾರ್‌, ಜಿಲ್ಲಾ ಸೇವಾ ಪ್ರಮುಖ್‌ ಪ್ರವೀಣ್‌ ಕುತ್ತಾರು, ಪಂಜಂದಾಯ, ಬಂಟ,
ವೈದ್ಯನಾಥ ದೈವಸ್ಥಾನ, ಕೊರಗಜ್ಜ ಆದಿ ಕ್ಷೇತ್ರದ ಮೊಕ್ತೇಸರ ರವೀಂದ್ರ ನಾಥ ಪೂಂಜಾ, ವಿನೋದ್‌ ಶೆಟ್ಟಿ ಬೊಲ್ಯಗುತ್ತು, ರತ್ನಾಕರ ಕಾವ,ಬಜರಂಗದಳ ವಿಭಾಗ ಸಂಚಾಲಕಭುಜಂಗ ಕುಲಾಲ್‌ ಉಪಸ್ಥಿತರಿದ್ದರು.
ವಿಹಿಂಪ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್‌ ಸ್ವಾಗತಿಸಿ, ಬಜರಂಗದಳ ಸುರಕ್ಷಾ ಪ್ರಮುಖ್‌ ಚೇತನ್‌ ಅಸೈಗೋಳಿ ವಂದಿಸಿದರು. ರವಿ ಅಸೈಗೋಳಿ ನಿರೂಪಿದರು.

ರಾಷ್ಟ್ರಧ್ವಜದ ಬಣ್ಣವೂ ಬದಲಾಗಬಹುದು
ಭಾರತಕ್ಕೆ ಸ್ವಾತಂತ್ರ್ಯ ಸನ್ನಿಹಿತವಾಗುತ್ತಿದ್ದಂತೆ ರಾಷ್ಟ್ರಧ್ವಜ ನಿರ್ಮಾಣಕ್ಕೆ ಏಳು ಜನ ಪ್ರಮುಖರ ಧ್ವಜ ಸಮಿತಿ ರಚನೆ ಮಾಡಲಾಯಿತು. ಈ ಸಮಿತಿ ರಾಷ್ಟ್ರಧ್ವಜದಲ್ಲಿ ಕೇಸರಿ ಬಣ್ಣ ಮತ್ತು ಕೊನೆಯಲ್ಲಿ ಚರಕದ ಚಿಹ್ನೆ ಬಳಸುವ ಸೂಚನೆಯನ್ನು ಕಾಂಗ್ರೆಸ್‌ಗೆ ನೀಡಿತು. ತ್ಯಾಗದ ಸಂಕೇತ ಕೇಸರಿ ಬಣ್ಣ. ಆದರೆ ಅಲ್ಪಸಂಖ್ಯಾಕರ ತುಷ್ಟೀಕರಣಕ್ಕೆ ರಾಷ್ಟ್ರ ಧ್ವಜದಲ್ಲಿ ಕೇಸರಿ, ಹಸುರು, ಬಿಳಿ ಬಂತು. ಈಗ ನಾವು ಅದನ್ನು ಗೌರವಿಸುವ. ರಾಷ್ಟ್ರ ಧ್ವಜ ಬರುವುದಕ್ಕೆ ಮೊದಲು ಇಲ್ಲಿ ಬ್ರಿಟಿಷರ ಧ್ವಜವಿತ್ತು. ಅದಕ್ಕೂ ಮೊದಲು ಹಸಿರು ಮತ್ತು ಚಂದ್ರನ ಧ್ವಜವಿತ್ತು. ಈಗ ರಾಜ್ಯ ಸಭೆಯಲ್ಲಿ ಬಹುಮತ ಇದ್ದರೆ ರಾಷ್ಟ್ರಧ್ವಜವನ್ನು ಬದಲಾಯಿಸಲೂ ಅವಕಾಶವಿದೆೆ.
– ಡಾ| ಕಲ್ಲಡ್ಕ ಪ್ರಭಾಕರ ಭಟ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.