ಬಾಯಾರಿಕೆ ನೀಗಿಸಲು ಕಲ್ಲಂಗಡಿ ಮೊರೆ


Team Udayavani, Mar 21, 2022, 2:44 PM IST

ಬಾಯಾರಿಕೆ ನೀಗಿಸಲು ಕಲ್ಲಂಗಡಿ ಮೊರೆ

ಮಾಗಡಿ: ಈ ಬಾರಿ ಮಾರ್ಚ್‌ನಲ್ಲೇ ಬೇಸಗೆ ಬಿಸಿ ಅನುಭವಕ್ಕೆ ಬರುತ್ತಿದ್ದು, ಬಿಸಿಲಿನ ಝಳಕ್ಕೆ ಜನರು ಹೈರಾಣಾಗಿದ್ದಾರೆ. ಇತ್ತೀಚಿಗಿನ ವರ್ಷಗಳಲ್ಲಿ ಹವಾಮಾನ ಏರುಪೇರು ಸರ್ವೇ ಸಾಮಾನ್ಯವಾಗಿದ್ದು, ಬೇಸಗೆಯ ಬಿಸಿಯೂ ಇದಕ್ಕೆ ಹೊರತಾಗಿಲ್ಲ.

ಬಿಸಿಲಿನ ತಾಪಕ್ಕೆ ಹೆದರಿ ನಗರಗಳಲ್ಲಿ ಮಧ್ಯಾಹ್ನದ ವೇಳೆ ಜನರು ಹೊರಗಡೆ ತಿರುಗಾಡುವುದನ್ನೇ ಕಡಿಮೆ ಮಾಡಿದ್ದಾರೆ. ಆದರೂ ಅನಿವಾರ್ಯ ಕೆಲಸ ಕಾರ್ಯ ಗಳಿಗಾಗಿ ಹೊರಗೆ ಹೋಗಬೇಕಾದ ಪರಿಸ್ಥಿತಿ ಉಂಟಾ ದರೆ ಸೆಕೆಗೆ ಬಸವಳಿದು ಹೋಗುತ್ತಿದ್ದಾರೆ. ಬಾಯಾರಿಕೆ ಹಾಗೂ ಬಿಸಿಲಿನ ತಾಪ ನೀಗಲು ಜನರು ಕಲ್ಲಂಗಡಿ ಮೊರೆ ಹೋಗುವ ದೃಶ್ಯ ನಗರದಲ್ಲಿ ಈಗ ಸಾಮಾನ್ಯವಾಗಿದೆ. ಬೇಸಗೆ ಕಾಲ ಬಂತೆಂದರೆ ಸಾಕು ಹಣ್ಣಿನ ವ್ಯಾಪಾರಿಗಳು ರಸ್ತೆ ಬದಿಗಳಲ್ಲಿ, ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಕಲ್ಲಂಗಡಿ ಹಣ್ಣುಗಳನ್ನು ತಂದು ಮಾರಾಟ ಮಾಡುವುದು ಸರ್ವೇ ಸಾಮಾನ್ಯವಾಗಿದೆ.

ಯಾವುದೇ ತಂಪು ಪಾನೀಯ ಕುಡಿದರೂ ಬಾಯಾರಿಕೆ ಇಂಗವುದಿಲ್ಲ. ಅದರಲ್ಲೂ ಈಗ ರಾಸಾಯನಿಕ ಮಿಶ್ರಿತ ತಂಪು ಪಾನೀಯ ಸೇವನೆ ಕಡಿಮೆ ಮಾಡಿದ್ದಾರೆ. ಮಜ್ಜಿಗೆ, ಎಳನೀರು, ಕಬ್ಬಿನ ರಸ, ದ್ರಾಕ್ಷಾ ರಸ, ಸೌತೆಕಾಯಿ, ಕಲ್ಲಂಗಡಿ ಹಣ್ಣು ಸೇವನೆಗೆ ಹೆಚ್ಚಾಗಿ ಆಸಕ್ತಿ ತೋರುತ್ತಿದ್ದಾರೆ. ಕಲ್ಲಂಗಡಿ ಹಣ್ಣು ಹೆಚ್ಚು ದ್ರವಾಂಶವನ್ನು ಹೊಂದಿರುವುದರಿಂದ ಇದು ಬಾಯಾರಿಕೆ ಇಂಗಿಸುತ್ತದೆ ಎಂಬ ನಂಬಿಕೆಯೂ ಬಹುಜನರಲ್ಲಿದೆ.

ಬೇಡಿಕೆಯ ಜತೆಗೆ ಬೆಲೆಯೂ ಹೆಚ್ಚು: ಕಲ್ಲಂಗಡಿ ಹಣ್ಣಿನ ಬೇಡಿಕೆ ಹೆಚ್ಚಾದಂತೆಲ್ಲ, ಬೆಲೆಯೂ ಏರುತ್ತದೆ. ಕಳೆದ ವರ್ಷ ಕಲ್ಲಂಗಡಿ ಹಣ್ಣು ಕೆಜಿಗೆ 12 ರಿಂದ 15 ರೂ. ಇತ್ತು. ಈ ವರ್ಷ ಈಗಾಗಲೇ ಕೆಜಿಗೆ 20 ರೂ. ನಿಂದ 25 ರೂ. ವರೆಗೆ ಮಾರಾಟವಾಗುತ್ತಿದೆ. ದೊಡ್ಡ ಗಾತ್ರದ ಕಲ್ಲಂಗಡಿ ಹಣ್ಣು 10 ರಿಂದ 12 ಕೆಜಿ ತೂಗುತ್ತದೆ. ಒಂದು ಕಲ್ಲಂಗಡಿ ಹಣ್ಣು 200 ರಿಂದ 250 ರೂ.ಗೆ ಮಾರಾಟವಾಗುತ್ತಿದೆ. ಒಂದು ತುಂಡು ಹಣ್ಣನ್ನು 20 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಬೆಲೆಯ ಬಗ್ಗೆ ಅಷ್ಟೇನೂ ತಲೆಕೆಡಿಸಿ ಕೊಳ್ಳದೆ ಹಣ್ಣು ಖರೀದಿಸಲು ಮುಂದಾಗುತ್ತಿದ್ದಾರೆ.

ರೋಗ ನಿರೋಧಕ ಶಕ್ತಿ: ಬಿ.ಪಿ. ಸಕ್ಕರೆ ಕಾಯಿಲೆ ಇರುವವರೂ ಕಲ್ಲಂಗಡಿ ಹಣ್ಣು ಸೇವನೆ ಮಾಡಬಹುದು ಎಂದು ವೈದ್ಯರು ಸಲಹೆ ನೀಡುತ್ತಾರೆ. ಜತೆಗೆ ಇದರಲ್ಲಿ ರೋಗನಿರೋಧಕ ಶಕ್ತಿ ಇದೆ. ಈ ಕಾರಣಕ್ಕಾಗಿ ಬೇರೆ ಹಣ್ಣಿಗಿಂತ ಕ‌ಲ್ಲಂಗಡಿ ಹಣ್ಣಿನ ಸೇವನೆಗೆ ಜನ ಮುಗಿ ಬೀಳುತ್ತಿದ್ದಾರೆ.

ಕಲ್ಲಂಗಡಿ ಹಣ್ಣನ್ನು ತಮಿಳುನಾಡಿನಿಂದ ಖರೀದಿ ಮಾಡಿ ತರಲಾಗುತ್ತದೆ. ರೈತರು ತೋಟದಿಂದ ನಮಗೆ ಕೆಜಿ ಗೆ 20 ರೂ. ಗೆ ಮಾರಾಟ ಮಾಡುತ್ತಾರೆ. ನಾವು ಅಲ್ಲಿಂದ ಲಾರಿ ಮಾಡಿಕೊಂಡು ಹಣ್ಣುಗಳನ್ನು ತರುತ್ತೇವೆ. ಕೆಲವೊಂದು ಹಣ್ಣು ಕೊಳೆತು ಹೋಗಿರುತ್ತದೆ. ಮೇಲ್ನೋಟಕ್ಕೆ ಗೊತ್ತಾಗುವುದಿಲ್ಲ. ಸುಂಕ, ಇತರೆ ಖರ್ಚು ಸೇರಿ ನಮಗೆ ಕೆಜಿಗೆ 22 ರೂ. ಖರೀದಿ ಬೆಲೆ ಬೀಳುತ್ತದೆ. 3 ರೂ. ಲಾಭ ಇಟ್ಟುಕೊಂಡು 25 ರೂ. ಗೆ ಮಾರಾಟ ಮಾಡುತ್ತೇವೆ. ಬೇಸಗೆಯಲ್ಲಿ ಮಾತ್ರ ವ್ಯಾಪಾರ ಅಧಿಕವಾಗಿರುತ್ತದೆ. -ಮಾರಿಮುತ್ತು, ಕಲ್ಲಂಗಡಿ ವ್ಯಾಪಾರಿ

ಬೇಸಿಗೆಯ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಬಾಟಲಿ ನೀರು ಬಾಯಾರಿಕೆ ನೀಗುವುದಿಲ್ಲ. ಬೇರೆ ಹಣ್ಣಿಗಿಂತ ಕಲ್ಲಂಗಡಿ ಹಣ್ಣು ಬಾಯಾರಿಕೆ ಇಂಗಿಸುತ್ತದೆ. ಹಣ್ಣಿನ ಬೆಲೆಗಿಂತ ಆರೋಗ್ಯ ಮುಖ್ಯ. ಹಾಗಾಗಿ ಹಣ್ಣಿನ ಸೇವನೆ ಮಾಡುತ್ತೇವೆ. – ರಾಜಣ್ಣ, ಗ್ರಾಹಕ ಶಾನಭೋಗನಹಳ್ಳಿ

-ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್‌ಟಿಆರ್‌ಆರ್‌ ರಸ್ತೆ

Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್‌ಟಿಆರ್‌ಆರ್‌ ರಸ್ತೆ

Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.