ಗ್ರಂಥಾಲಯ-ಮ್ಯೂಸಿಯಂ ಸ್ಥಾಪನೆಗೆ ಕ್ರಮ ವಹಿಸಿ
ಡಾ| ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ
Team Udayavani, Mar 21, 2022, 4:53 PM IST
ಹಾವೇರಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ| ವಿ.ಕೃ. ಗೋಕಾಕ ನೆನಪಿನಲ್ಲಿ ಸವಣೂರಲ್ಲಿ ನಿರ್ಮಿಸಿರುವ ಡಾ| ವಿ.ಕೃ. ಗೋಕಾಕ ಸ್ಮಾರಕ ಭವನದಲ್ಲಿ ನಿರಂತರ ಕಾರ್ಯಚಟುವಟಿಕೆ ನಡೆಸುವಂತಾಗಬೇಕು. ಸುಸಜ್ಜಿತ ಗ್ರಂಥಾಲಯ ಹಾಗೂ ವಿ.ಕೃ. ಗೋಕಾಕ ಅವರಿಗೆ ಸಂಬಂಧಿಸಿದ ವಸ್ತುಗಳು ಹಾಗೂ ಛಾಯಾಚಿತ್ರಗಳನ್ನು ಒಳಗೊಂಡ ಮ್ಯೂಸಿಯಂ ಸ್ಥಾಪನೆ ಕುರಿತಂತೆ ಶೀಘ್ರ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ| ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.
ಗೋಕಾಕ ಸಭಾಂಗಣದ ಆವರಣದಲ್ಲಿ ಸ್ವತ್ಛತೆ ಹಾಗೂ ಮುಂಭಾಗದಲ್ಲಿ ಕಾರಂಜಿ ನಿರ್ಮಾಣ ಕುರಿತಂತೆ ತ್ವರಿತವಾಗಿ ನೀಲನಕ್ಷೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಟ್ರಸ್ಟ್ ಸದಸ್ಯ ಕಾರ್ಯದರ್ಶಿಗೆ ಸೂಚಿಸಿದರು.
ಡಾ| ವಿ.ಕೃ. ಗೋಕಾಕ ವಸ್ತು ಸಂಗ್ರಾಲಯ ಹಾಗೂ ಗ್ರಂಥಾಲಯಕ್ಕೆ ಗೋಕಾಕರ ಮಗ ತಮ್ಮಲ್ಲಿ ಸಂಗ್ರಹವಿರುವ ವಸ್ತುಗಳು ಹಾಗೂ ಪುಸ್ತಕಗಳನ್ನು ನೀಡಲು ಮುಂದೆ ಬಂದಿದ್ದಾರೆ. ಗ್ರಂಥಾಲಯಕ್ಕೆ ಅಗತ್ಯ ಪೀಠೊಪಕರಣಗಳ ಖರೀದಿ ಹಾಗೂ ಸಭಾಭವನದಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಶೀಘ್ರದಲ್ಲೇ ಕಾರ್ಯ ಚಟುವಟಿಕೆ ಆರಂಭಿಸುವ ಕುರಿತಂತೆ ಕ್ರಮ ವಹಿಸಬೇಕು. ಏಪ್ರಿಲ್ ಮೊದಲ ವಾರದಲ್ಲಿ ಸವಣೂರಿನ ಗೋಕಾಕ ಸಭಾಂಗಣದಲ್ಲಿ ಟ್ರಸ್ಟ್ ಸಭೆ ಕರೆದು ಅಂತಿಮಗೊಳಿಸುವಂತೆ ಸೂಚನೆ ನೀಡಿದರು.
ನೀಲನಕ್ಷೆ: ನಾಡೋಜ ಡಾ| ಪಾಟೀಲ ಪುಟ್ಟಪ್ಪನವರ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಕುರಿತಂತೆ ತ್ವರಿತವಾಗಿ ಜಮೀನಿನ ನೋಂದಣಿ ಹಾಗೂ ಸ್ಮಾರಕದ ನೀಲನಕ್ಷೆ ತಯಾರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಟ್ರಸ್ಟ್ನ ಸದಸ್ಯರಾದ ಡಾ| ರಮಾಕಾಂತ ಜೋಶಿ, ಜಿ.ಎಂ. ಹೆಗಡೆ, ಸತೀಶ ಕುಲಕರ್ಣಿ ಮಾತನಾಡಿ, ಆ.9ರಂದು ಗೋಕಾಕರ ಜನ್ಮ ದಿನ ಧಾರವಾಡದಲ್ಲಿ ಆಯೋಜಿಸಬೇಕು. ಸವಣೂರಿನಲ್ಲಿ ನಿರ್ಮಾಣ ಮಾಡಿರುವ ಡಾ| ವಿ.ಕೃ. ಗೋಕಾಕ ಸಭಾಂಗಣಕ್ಕೆ ಜ್ಞಾನಪೀಠ ಪುರಸ್ಕೃತ ಡಾ| ವಿ.ಕೃ. ಗೋಕಾಕ ಭವನ ಎಂದು ನಾಮಕರಣ ಮಾಡಬೇಕು. ಗೋಕಾಕರ ಭವನದಲ್ಲಿ ವಸ್ತು ಸಂಗ್ರಹಾಲಯ ಅಭಿವೃದ್ಧಿ, ಗ್ರಂಥಾಲಯ ಸ್ಥಾಪನೆ, ಗೋಕಾಕರ ಚಿತ್ರಸಂಪುಟ ಸಾರ್ವಜನಿಕ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಶ್ರದ್ಧಾಂಜಲಿ: ಡಾ| ವಿ.ಕೃ. ಗೋಕಾಕ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸದಸ್ಯರಾಗಿದ್ದ ನಾಡೋಜ ಡಾ| ಪಾಟೀಲ ಪುಟ್ಟಪ್ಪ, ಎಂ.ಪಿ.ಪಾಟೀಲ, ಚನ್ನವೀರ ಕಣವಿ ಅಗಲಿಕೆಗೆ ಸಭೆಯ ಆರಂಭದಲ್ಲಿ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ ಜಿಪಂ ಸಿಇಒ ಮಹಮ್ಮದ್ ರೋಷನ್, ಸವಣೂರು ಉಪ ವಿಭಾಗಾಧಿ ಕಾರಿ ಅನ್ನಪೂರ್ಣ ಮುದಕಮ್ಮನವರ, ಸವಣೂರು ಪುರಸಭೆ ಅಧ್ಯಕ್ಷೆ ಶೈಲಾ ಎಚ್. ಮುದೇನಗೌಡರ, ಡಿವೈಎಸ್ಪಿ ಶಂಕರ ಮಾರಿಹಾಳ, ಟ್ರಸ್ಟ್ನ ಸದಸ್ಯರಾದ ಮೈಲಾರಪ್ಪ ತಳ್ಳಿಹಳ್ಳಿ, ಮಂಜುಳಾ ರಾಶೀನಕರ, ಚಂದ್ರಗೌಡ ಪಾಟೀಲ, ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಶಶಿಕಲಾ ಹುಡೇದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.