ಘೋಷಣೆಯಲ್ಲೇ ಉಳಿದ ಹಳದಿ ಎಲೆರೋಗ ಅಧ್ಯಯನ; ಬಜೆಟ್‌ನಲ್ಲಿ 25 ಕೋಟಿ ರೂ. ಘೋಷಿಸಿದ್ದ ಯಡಿಯೂರಪ್ಪ


Team Udayavani, Mar 22, 2022, 7:20 AM IST

ಘೋಷಣೆಯಲ್ಲೇ ಉಳಿದ ಹಳದಿ ಎಲೆರೋಗ ಅಧ್ಯಯನ; ಬಜೆಟ್‌ನಲ್ಲಿ 25 ಕೋಟಿ ರೂ. ಘೋಷಿಸಿದ್ದ ಯಡಿಯೂರಪ್ಪ

ಸುಳ್ಯ: ಅಡಿಕೆ ಹಳದಿ ಎಲೆರೋಗ ಅಧ್ಯಯನಕ್ಕೆ ಹಾಗೂ ಪರ್ಯಾಯ ಬೆಳೆಗಳಿಗೆ ಸಹಾಯಧನ ನೀಡಲು ರಾಜ್ಯ ಸರಕಾರ ವರ್ಷದ ಹಿಂದೆ ಬಜೆಟ್‌ನಲ್ಲಿ 25 ಕೋಟಿ ರೂ. ಮೀಸಲಿಡುವ ಘೋಷಣೆ ಮಾಡಿತ್ತು. ಆದರೆ ಅದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ.

ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಅಡಿಕೆ ಬೆಳೆಯುವ ಕೃಷಿಕರಿಗೆ ಹಳದಿ ಎಲೆ ರೋಗ ಭಾರೀ ಸಂಕಷ್ಟವನ್ನು ತಂದೊಡ್ಡಿದೆ. ಸುಳ್ಯ, ಪುತ್ತೂರು, ಕಡಬ ತಾಲೂಕಿನ ಕೃಷಿಕರು ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ರೋಗ ನಿಯಂತ್ರಣಕ್ಕೆ ಹಲವಾರು ರೀತಿಯಲ್ಲಿ ಪ್ರಯತ್ನಗಳಾಗುತ್ತಿದ್ದರೂ ಪರಿಪೂರ್ಣ ಫ‌ಲಿತಾಂಶ ಲಭ್ಯವಾಗಿಲ್ಲ.

ಹಳದಿಎಲೆ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎನ್ನಲಾಗಿದೆ. ರೋಗ ಪ್ರತಿರೋಧಕ ತಳಿ ಅಭಿವೃದ್ಧಿಯಿಂದ, ಪ್ಲಾಸ್ಟಿಕ್‌ ಮಲಿcಂಗ್‌ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ರೋಗ ನಿಯಂತ್ರಿಸಲು ಪ್ರಯತ್ನಗಳೂ ನಡೆಯುತ್ತಿದೆ ಎನ್ನಲಾಗಿದೆ.

ಬಜೆಟ್‌ನಲ್ಲಿ ಘೋಷಣೆ
ಯಡಿಯೂರಪ್ಪ ಅವರು 2021ರಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಅಡಿಕೆ ಹಳದಿ ಎಲೆರೋಗ ಅಧ್ಯಯನಕ್ಕೆ, ಪರ್ಯಾಯ ಬೆಳೆಗಳಿಗೆ ಅನುದಾನ ಘೋಷಿಸಿದ್ದರು. ಶಿವಮೊಗ್ಗದ ಕೃಷಿ ವಿಶ್ವವಿದ್ಯಾನಿಲಯದ ಶೃಂಗೇರಿಯ ಸಂಶೋಧನ ಕೇಂದ್ರದಲ್ಲಿ ಹಳದಿ ಎಲೆರೋಗ ಬಗ್ಗೆ ಅಧ್ಯಯನ ನಡೆಸಲು ಹಾಗೂ ವಿಟ್ಲದಲ್ಲಿ ಅಧ್ಯಯನಕ್ಕೆ ಲ್ಯಾಬ್‌ ನಿರ್ಮಾಣ ಹಾಗೂ ಸಂಶೋಧನೆಗೆ, ಪರ್ಯಾಯ ಬೆಳೆಗಳಿಗೆ ಅನುದಾನ ಮೀಸಲಿಡಲು ತೋಟಗಾರಿಕಾ ಇಲಾಖೆ ವತಿಯಿಂದ ಯೋಜನೆ ರೂಪಿಸಲಾಗಿದೆ ಎಂದು ತಿಳಿದುಬಂದಿದೆ.

ಎಪ್ರಿಲ್‌ನಿಂದ ಅಧ್ಯಯನ ನಿರೀಕ್ಷೆ
ಬಜೆಟ್‌ನಲ್ಲಿ ಘೋಷಿಸಿದರೂ ಕೊರೊನಾ ಕಾರಣವನ್ನಿಟ್ಟುಕೊಂಡು ಈ ಬಗ್ಗೆ ಅಧ್ಯಯನ ಇನ್ನೂ ಆರಂಭಗೊಂಡಿಲ್ಲ. ನವೆಂಬರ್‌ ವರೆಗೆ ಕೊರೊನಾ ಅಲೆ ಇದ್ದು, ಬಳಿಕ ಅನುದಾನ ಪಕ್ರಿಯೆ ನಡೆದಿದೆ. ಮುಂದಿನ ಎಪ್ರಿಲ್‌ನಿಂದ ಅಧ್ಯಯನ ಆರಂಭವಾಗುವ ನಿರೀಕ್ಷೆ ವ್ಯಕ್ತವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಇತ್ತ ಕೃಷಿಕರಿಗೆ ಸಂಭವಿಸಿದ ನಷ್ಟಕ್ಕೆ ಪರಿಹಾರವೂ ಇಲ್ಲ, ಅಧ್ಯಯನವೂ ನಡೆದಿಲ್ಲ ಎಂಬ ಆಕ್ರೋಶವೂ ವ್ಯಕ್ತವಾಗತೊಡಗಿದೆ.

ಹಳದಿ ಎಲೆರೋಗಕ್ಕೆ ಸಾವಿರಾರು ಎಕರೆ ಅಡಿಕೆ ಬೆಳೆ ತುತ್ತಾಗಿದ್ದು, ಉತ್ತಮ ಫ‌ಸಲಿನ ನಿರೀಕ್ಷೆಯಲ್ಲಿದ್ದವರಿಗೆ ಭಾರೀ ಹೊಡೆತ ಬಿದ್ದಿದೆ. ನಷ್ಟ ಅನುಭವಿಸಿದವರು ಸರಕಾರದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ. ಆದರೆ ಸರಕಾರ ಪರಿಹಾರ ಕೊಡುವ ಬದಲು ಹಲವು ವರ್ಷಗಳಿಂದ ಅಧ್ಯಯನದ ಹೆಸರಲ್ಲಿ ಹಣ ಖರ್ಚು ಮಾಡುತ್ತಿದೆ; ಯಾವುದೇ ಫ‌ಲಿತಾಂಶ ಮಾತ್ರ ಇಲ್ಲ ಎಂದು ಕೃಷಿಕರು ದೂರಿದ್ದಾರೆ. ಎಕರೆಗೆ ಇಂತಿಷ್ಟು ಪರಿಹಾರ ನೀಡಬೇಕೆಂಬ ಒತ್ತಾಯವೂ ಇದೆ.

ಇದನ್ನೂ ಓದಿ:ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ: ಸಚಿವ ಆರಗ ಜ್ಞಾನೇಂದ್ರ

ಪರ್ಯಾಯ ಬೆಳೆಗೆ ಸಹಾಯಧನ
ಮೀಸಲಿಟ್ಟ ಅನುದಾನದಲ್ಲಿ ಅಡಿಕೆಗೆ ಪರ್ಯಾಯವಾಗಿ ಬೆಳೆಯಬಹುದಾದ ಬೆಳೆ ಗಳಿಗೂ ಸಹಾಯಧನ ನೀಡಲು ಯೋಜನೆ ರೂಪಿಸಲಾಗಿದೆ. ಬಾಳೆ, ಕಾಳುಮೆಣಸು, ಜಾಯಿಕಾಯಿ, ರಾಂಬೂಟಾನ್‌, ತೆಂಗು ಮುಂತಾದ 8-10 ಬೆಳೆಗಳಿಗೆ ಸಹಾಯ ಧನ ನೀಡಲಾಗುತ್ತದೆ. ಇಲಾಖೆ, ಉದ್ಯೋಗ ಖಾತರಿಯಡಿ ಸಹಾಯಧನ ಲಭ್ಯವಾಗದರೈತರಿಗೆ ಈ ಯೋಜನೆ ಮುಖಾಂತರ ಸಹಾಯಧನ ಸಿಗಲಿದೆ.

ಬಜೆಟ್‌ನಲ್ಲಿ 25 ಕೋಟಿ ರೂ. ಘೋಷಿಸಲಾಗಿದ್ದು, ಅದನ್ನು ಅಡಿಕೆ ಹಳದಿ ಎಲೆರೋಗ ಅಧ್ಯಯನ ಹಾಗೂ ಪರ್ಯಾಯ ಬೆಳೆಗಳಿಗೆ ಸಹಾಯಧನಕ್ಕೆ ಯೋಜನೆ ರೂಪಿಸಲಾಗಿದೆ. ಈವರೆಗೆ ಕೊರೊನಾ ಹಿನ್ನೆಲೆಯಿಂದ ಯೋಜನೆ ಕಾರ್ಯರಂಭಗೊಂಡಿಲ್ಲ. ಮುಂದಿನ ಎಪ್ರಿಲ್‌ನಿಂದ ಅಧ್ಯಯನ ನಡೆಯಲಿದೆ.
– ನಿರ್ದೇಶಕರು, ತೋಟಗಾರಿಕೆ ಇಲಾಖೆ

ಬಜೆಟ್‌ನಲ್ಲಿ ಪ್ರಸ್ತಾವದ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆಯಿಂದ ಯಾವ ರೀತಿ ಯೋಜನೆ ರೂಪಿಸಬಹುದೆಂದು ಮಾಹಿತಿ ಕೇಳಲಾಗಿತ್ತು. ಅದರಂತೆ ನಾವು ಯೋಜನೆ ರೂಪಿಸಬಹುದಾದ ಬಗ್ಗೆ ಪ್ರಸ್ತಾವನ್ನು ಸರಕಾರಕ್ಕೆ ಸಲ್ಲಿಸಿದ್ದೆವು. ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ಬಂದಿಲ್ಲ.
– ಡಾ| ಭವಿಷ್ಯ, ವಿಜ್ಞಾನಿ, ಸಿಪಿಸಿಆರ್‌ಐ, ವಿಟ್ಲ

-ದಯಾನಂದ ಕಲ್ನಾರು

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.