![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 22, 2022, 2:51 PM IST
ರಾಮದುರ್ಗ: ಪಟ್ಟಣದಲ್ಲಿ ಮಾ. 21 ರಿಂದ 23 ರವರೆಗೆ ನಡೆಯಲಿರುವ ಶಿವರಾತ್ರಿ ಶಿವಜಾತ್ರಿ ರಾಜ್ಯ ಮಟ್ಟದ 7 ನೇ ಜಾನಪದ ಮಹಾಸಮ್ಮೇಳನದ ಜಾನಪದ ಕಲಾ ಮೆರವಣಿಗೆಯನ್ನು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷ ಶರಣು ತಳ್ಳಿಗೇರಿ ಅವರು ಉದ್ಘಾಟಿಸಿ ಚಾಲನೆ ನೀಡಿದರು.
ತಾಲೂಕಿನ ಅವರಾದಿ ಶಿವಪೇಟೆಯ ಓಂ ಶಿವ ಮೇಳದ ಆಶ್ರಯದಲ್ಲಿ ನಡೆಯುತ್ತಿರುವ ಜಾನಪದ ಮಹಾಸಮ್ಮೇಳನ ಮೆರವಣಿಗೆ ಪಟ್ಟಣದ ವಿದ್ಯಾಚೇತನ ಶಾಲಾ ಆವರಣದಿಂದ ಹೊರಟು, ಜುನಿಪೇಟ ಮಾರ್ಗವಾಗಿ ಹಳೆ ಪೊಲೀಸ್ ಠಾಣೆ, ತೇರ ಬಝಾರ್, ನೇಕಾರ ಪೇಟೆ, ರಾಧಾಪೂರ ಪೇಟೆಯಿಂದ ಮಾರ್ಕೆಟ್ ಗೇಟ್ ಮೂಲಕ ಹಾಯ್ದು ವಿದ್ಯಾ ಚೇತನ ಶಾಲೆಯಲ್ಲಿ ಕೊನೆಗೊಂಡಿತು.
ಮೆರವಣಿಗೆಯಲ್ಲಿ ಮಹಿಳೆಯರ ಕುಂಭ ಮೇಳ, ಡೊಳ್ಳು ಕುಣಿತ, ಗಾರುಡಿ ಗೊಂಬೆ, ಹೆಜ್ಜೆ ಮೇಳ, ಕಹಳೆ ಓಲಗ, ಖಣಿ ಸಂಬಾಳ, ಜಗ್ಗಲಿಗೆ ಮೇಳ, ಪುರವಂತಿಕೆ ನೃತ್ಯ, ಜೋಗತಿ ನೃತ್ಯ ಹೀಗೆ 15ಕ್ಕೂ ಹೆಚ್ಚು ಜಾನಪದ ತಂಡಗಳು ಬೆಳಗಾವಿ, ವಿಜಯನಗರ, ವಿಜಯಪುರ, ಬಳ್ಳಾರಿ, ಹಾವೇರಿ, ದಾವಣಗೇರಿ, ಉತ್ತರ ಕನ್ನಡ, ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದವು.
ಓಂ ಶಿವ ಮೇಳದ ಸಂಸ್ಥಾಪಕ ಜಾನಪದ ಕಲಾವಿದ ಸಿದ್ದು ಮೋಟೆ, ನಿವೃತ್ತ ಯೋಧ ಪುಂಡಲೀಕ ನಡಗಡ್ಡಿ ಮತ್ತು ಇತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮಾ. 22 ರಂದು ಮಂಗಳವಾರ ಬಸಲಿಂಗಯ್ಯ ಹಾಗೂ ಕೌಜಲಗಿ ವಿಠ್ಠಲ ವೇದಿಕೆಯಲ್ಲಿ ಜರುಗುವ ಜಾನಪದ ಶಿವರಾತ್ರಿ ಸಮಾರಂಭದ ಸಾನಿಧ್ಯವನ್ನು ರಬಕವಿ ಬ್ರಹ್ಮಾನಂದ ಆಶ್ರಮದ ಗುರು ಸಿದ್ಧೇಶ್ವರ ಸ್ವಾಮೀಜಿ ವಹಿಸಲಿದ್ದು, ಮಾಜಿ ಶಾಸಕ ಅಶೋಕ ಪಟ್ಟಣ ಅಧ್ಯಕ್ಷತೆ ವಹಿಸುವರು. ಉದ್ಯಮಿ ವಿಜಯ ಶೆಟ್ಟಿ, ಪ್ರದೀಪ ಪಟ್ಟಣ, ರಾಜೇಶ್ವರಿ ಮೆಟಗುಡ್ಡ, ಮುತ್ತುರಾಜ ಕೊಂಡಾ, ಮುಖ್ಯಾಕಾರಿ ರವಿ ಬಾಗಲಕೋಟೆ, ಸಿಪಿಐ ಐ.ಆರ್. ಪಟ್ಟಣಶೆಟ್ಟಿ, ಆಗಮಿಸುವರು. ಬೆಂಬಳಗಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಪ್ರಕಾಶ ತೆಗ್ಗಿಹಳ್ಳಿ ಉಪನ್ಯಾಸ ನೀಡುವರು. ಡಾ| ಎಂ.ಎನ್. ಸಿದ್ಧಗಿರಿ ಪ್ರಾಸ್ತಾವಿಕ ಮಾತನಾಡುವರು.
ಇದೇ ಸಂದರ್ಭದಲ್ಲಿ ಜಾನಪದ ಶಿವಶ್ರೀ ಪ್ರಶಸ್ತಿ ಪ್ರದಾನ, ಜಾನಪದ ಕಲಾ ಪ್ರೋತ್ಸಾಹಿಗಳ ಸಮ್ಮಾನ, ಸಮ್ಮೇಳನಕ್ಕೆ ಸಹಾಯ ನೀಡಿದ ಸನ್ಮಾನ್ಯರ ಸತ್ಕಾರ ನಡೆಯುವದು. ನಂತರ ಜಾನಪದ ಕಲಾ ಸಂಭ್ರಮ ಜರುಗಲಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.