ಜೇಮ್ಸ್ ತೆಗೆದು ಕಾಶ್ಮೀರ್ ಫೈಲ್ಸ್ ಪ್ರದರ್ಶಿಸುವಂತೆ ರಾಜಕೀಯ ಮುಖಂಡರಿಂದ ಒತ್ತಡ: ನಿರ್ಮಾಪಕ


Team Udayavani, Mar 22, 2022, 7:55 PM IST

Untitled-1

ಗಂಗಾವತಿ: ಪುನೀತ್ ರಾಜಕುಮಾರ ನಟನೆಯ ಕೊನೆಯ ಚಿತ್ರ ಜೇಮ್ಸ್ ರಾಜ್ಯಾದ್ಯಂತ ಯಶಸ್ವಯಾಗಿ ಪ್ರದರ್ಶನವಾಗುತ್ತಿದ್ದು ಕೆಲವೆಡೆ ಜೇಮ್ಸ್ ತೆಗೆದು ಅಥವಾ ಒಂದೆರಡು ಶೋಗಳನ್ನು ಕಾಶ್ಮೀರ್ ಫೈಲ್ಸ್ ಚಿತ್ರ ಪ್ರದರ್ಶನ ಮಾಡುವಂತೆ ರಾಜಕೀಯ ಮುಖಂಡರುಗಳು ಒತ್ತಡ ಹೇರುತ್ತಿದ್ದು ಜೇಮ್ಸ್ ತೆಗೆಯದಂತೆ ಚಿತ್ರಮಂದಿರ ಪ್ರದರ್ಶಕರಿಗೆ ಮನವಿ ಮಾಡಲಾಗಿದೆ ಎಂದು ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ತಿಳಿಸಿದರು.

ಅವರು ಮಂಗಳವಾರ ನಗರದ ಶಿವೆ ಟಾಕೀಸ್ ಗೆ ತೆಲುಗು ಚಿತ್ರ ನಟ ಎಂ. ಶ್ರೀಕಾಂತ ಜತೆಗೂಡಿ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ರಾಜ್ಯದ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಪ್ರಮುಖ ರಾಜಕೀಯ ಮುಖಂಡರನ್ನು ಭೇಟಿಯಾಗಿ ಜೇಮ್ಸ್ ಚಿತ್ರ ವೀಕ್ಷಿಸುವಂತೆ ಮನವಿ ಮಾಡಲಾಗಿದೆ. ಸಿದ್ದರಾಮಯ್ಯನವರು ಜೇಮ್ಸ್ ಚಿತ್ರ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿ ಕೆಲವೆಡೆ ಚಿತ್ರ ಪ್ರದರ್ಶನಕ್ಕೆ ಅಡ್ಡಿಯಾಗುತ್ತಿರುವ ಕುರಿತು ಸಾಮಾಜಿಕ ಜಾಲತಾಣ ಪರ ವಿರುದ್ಧ ಅಭಿಪ್ರಾಯ ವ್ಯಕ್ತವಾಗುತ್ತಿರುವ ಕುರಿತು ಕೇಳಿದರು ಆಗ ಈ ಬಗ್ಗೆ ತಮಗೆ ಗೊತ್ತಿಲ್ಲ. ಕೆಲವೆಡೆ ಜೇಮ್ಸ್ ಪ್ರದರ್ಶನವಾಗುವ ಚಿತ್ರಮಂದಿರಗಳಲ್ಲಿ ಕಾಶ್ಮೀರ್ ಫೈಲ್ಸ್ ಚಿತ್ರ ಪ್ರದರ್ಶನಕ್ಕೆ ಕೆಲ ಚಿತ್ರಮಂದಿರಗಳ ಮಾಲೀಕರು ತಮ್ಮನ್ನು ಕೇಳಿದ್ದು ಇದಕ್ಕೆ  ನಿರಾಕರಿಸಲಾಗಿದೆ ಎಂದರು.

ಭರ್ಜರಿಯಾಗಿ ಜೇಮ್ಸ್ ಪ್ರದರ್ಶನವಾಗುವ ಸಂದರ್ಭದಲ್ಲಿ ಬೇರೆ ಸಿನೆಮಾ ಪ್ರದರ್ಶಿಸಿದರೆ ಬೇರೆ ಸಂದೇಶ ಹೋಗುತ್ತದೆ. ಆದ್ದರಿಂದ ದಯವಿಟ್ಟು ದಿವಂಗತ ಪುನೀತ ರಾಜಕುಮಾರ ಹಾಗೂ ಪುನೀತ್ ಅವರ ಅಭಿಮಾನಿಗಳಿಗೆ  ಅವಮಾನವಾಗುವ ಯಾವುದೇ ಘಟನೆಗಳು ನಡೆಯಬಾರದು. ಈಗಾಗಲೇ ಜೇಮ್ಸ್ ತೆರೆ ಕಂಡು 6 ದಿನ ವಿಶ್ವದಾದ್ಯಂತ ಅತ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಉತ್ತಮ ಕಲೆಕ್ಷನ್ ಇದ್ದು ಕನ್ನಡಿಗರು ಸೇರಿ ವಿಶ್ವದ ಎಲ್ಲಾ ಪ್ರೇಕ್ಷಕರು ಜೇಮ್ಸ್ ಚಿತ್ರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಡಾ|ಶಿವರಾಜಕುಮಾರ, ರಾಘವೇಂದ್ರರಾಜಕುಮಾರ ಹಾಗೂ ಅಶ್ವೀನಿ ಪುನೀತರಾಜಕುಮಾರ ಜೇಮ್ಸ್ ಚಿತ್ರ ಪ್ರದರ್ಶನದ ಬಗ್ಗೆ ದಿನವೂ ಮೊಬೈಲ್ ಕರೆ ಮಾಡಿ ವಿಚಾರಿಸುತ್ತಿದ್ದು ಜೇಮ್ಸ್ ನ್ನು ಕನ್ನಡಿಗರು ಯಶಸ್ವಿ ಮಾಡಲಿದ್ದಾರೆಂದರು.

ಈ ಸಂದರ್ಭದಲ್ಲಿ ಶಿವೆ ಚಿತ್ರಮಂದಿರ ಮಾಲೀಕ ಶಿವರಾಜಗೌಡ, ಬಿಜೆಪಿ ಮುಖಂಡರಾದ ಗಣೇಶ್  ಬಿಚ್ಚಾಲಿ, ಚನ್ನವೀರನಗೌಡ, ವಿನಯ್ ಪಾಟೀಲ್, ವಿರೇಶ ಸುಳೇಕಲ್, ದೇವಪ್ಪ ನಾಯಕ, ಮೇಕಾ ಸುಬ್ರಮಣ್ಯ, ಕೋಟೇಶ್ವರರಾವ್, ವೀರಭದ್ರರಾವ್ ಸೇರಿ ಅನೇಕರಿದ್ದರು.

ಪುನೀತರಾಜಕುಮಾರ ನಿಧನರಾಗಿಲ್ಲ. ಅವರು ಸಾಮಾಜಿಕ ಸೇವೆಗಳ ಮೂಲಕ ನಮ್ಮೊಂದಿಗಿದ್ದಾರೆ. ಕೊನೆಯ ಚಿತ್ರ ಜೇಮ್ಸ್ ನ್ನು ಈಗಾಗಲೇ ಅಪ್ಪು ಅಭಿಮಾನಿಗಳು ಯಶಸ್ವಿ ಮಾಡಿದ್ದು ಯಾವುದೋ ಕಾರಣಕ್ಕೆ ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಮಾಡಬಾರದು. ಕನ್ನಡ ಭಾಷೆ ನೆಲ ಜಲದ ಬಗ್ಗೆ ಡಾ|ರಾಜಕುಮಾರ ಕುಟುಂಬಕ್ಕೆ ಹೆಚ್ಚಿನ ಕಾಳಜಿ ಇತ್ತು. ಅದನ್ನು ಕನ್ನಡ ಚಿತ್ರ ಪ್ರೇಕ್ಷಕರು ಮುಂದುವರಿಸಿ ಕೊಂಡು  ಹೋಗಬೇಕು. ನಾನು ಸಹ ಜೇಮ್ಸ್ ನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಾಪಕ ಕಿಶೋರ ಪತ್ತಿಕೊಂಡ ಜತೆ ಸೇರಿ ಸಂಚರಿಸಿ ಜೇಮ್ಸ್ ಚಿತ್ರ ಪ್ರಮೋಟ್ ಮಾಡುತ್ತೇನೆ. ನಾನು ಸಹ ಕನ್ನಡಿಗ ಗಂಗಾವತಿ ನನ್ನ ಮಾತೃಭೂಮಿಯಾಗಿದೆ.ಎಂ. ಶ್ರೀಕಾಂತ ತೆಲುಗುಕನ್ನಡ ಚಿತ್ರ ನಟ.

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.