ಇನ್ನು ಕೇಂದ್ರೀಯ ವಿ.ವಿ. ಪದವಿಗೂ ಪ್ರವೇಶ ಪರೀಕ್ಷೆ

ಕೇಂದ್ರೀಯ ವಿ.ವಿ.ಗಳಲ್ಲಿ ಪಿಯು ಅಂಕಗಳಿಗಿಲ್ಲ ಮಾನ್ಯತೆ; ಯುಜಿಸಿ ಹೊಸ ನಿಯಮ; ಮುಂದಿನ ವರ್ಷವೇ ಜಾರಿ

Team Udayavani, Mar 23, 2022, 7:05 AM IST

ಇನ್ನು ಕೇಂದ್ರೀಯ ವಿ.ವಿ. ಪದವಿಗೂ ಪ್ರವೇಶ ಪರೀಕ್ಷೆ

ಹೊಸದಿಲ್ಲಿ: ಇನ್ನು ಮುಂದೆ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಕೋರ್ಸ್‌ಗೆ ಪ್ರವೇಶ ಪಡೆಯ ಬೇಕೆಂದರೆ 12ನೇ ತರಗತಿಯ ಅಂಕಗಳು ಲೆಕ್ಕಕ್ಕೇ ಬರುವುದಿಲ್ಲ. ಬದಲಿಗೆ ವಿ.ವಿ.ಗಳು ನಡೆಸುವ ಪ್ರವೇಶ ಪರೀಕ್ಷೆಯ ಅಂಕಗಳನ್ನು ಆಧರಿಸಿ ಪ್ರವೇಶ ನೀಡಲಾಗುತ್ತದೆ.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾ ವಣೆ ಗಳಿಗೆ ನಾಂದಿ ಹಾಡುತ್ತಿರುವ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಇಂಥದ್ದೊಂದು ಹೊಸ ಆದೇಶ ಹೊರಡಿಸಿದೆ. ಎಲ್ಲ ಕೇಂದ್ರೀಯ ವಿ.ವಿ. ಗಳೂ ಕಡ್ಡಾಯ  ವಾಗಿ ಸಾಮಾನ್ಯ ವಿಶ್ವ ವಿದ್ಯಾನಿಲಯ ಪ್ರವೇಶ ಪರೀಕ್ಷೆ(ಸಿಯುಇಟಿ)ಯನ್ನು ನಡೆಸಿ, ಅದರ ಅಂಕಗಳ ಆಧಾರದಲ್ಲೇ ಪ್ರವೇಶ ನೀಡಬೇಕು ಎಂದು ಹೇಳಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ(2022-23) ಇದು ಜಾರಿಯಾಗಲಿದೆ.
ಕಡ್ಡಾಯವಾಗಿ ಎಲ್ಲ 45 ಕೇಂದ್ರೀಯ ವಿ.ವಿ.ಗಳು ಇನ್ನು ಯುಜಿ ಕೋರ್ಸ್‌ಗಳಿಗೆ ಸಿಯುಇಟಿ ಪರೀಕ್ಷೆ ನಡೆಸಬೇಕು. ಆದರೆ ಸದ್ಯದ ಮಟ್ಟಿಗೆ ಸ್ನಾತಕೋತ್ತರ ಪ್ರವೇಶದ ವೇಳೆ ಸಿಯುಇಟಿ ಅಂಕಗಳ ಪರಿಗಣನೆಯನ್ನು ಆಯಾ ವಿ.ವಿ.ಗಳ ವಿವೇಚನೆಗೆ ಬಿಡಲಾಗಿದೆ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೀಶ್‌ ಕುಮಾರ್‌ ಹೇಳಿದ್ದಾರೆ.

ಜುಲೈಯಲ್ಲಿ ಪರೀಕ್ಷೆ
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ಜುಲೈ ಮೊದಲ ವಾರದಲ್ಲಿ ಈ ಪ್ರವೇಶ ಪರೀಕ್ಷೆ(ಸಿಯುಇಟಿ) ಯನ್ನು ನಡೆಸಲಿದೆ. ಎಲ್ಲ ಪ್ರಶ್ನೆಗಳು 12ನೇ ತರಗತಿ ಸಿಬಿಎಸ್‌ಇ ಪಠ್ಯಕ್ರಮದ ಅಂಶಗಳನ್ನೇ ಒಳಗೊಂಡಿರಲಿದೆ. ಪರೀಕ್ಷೆ 2 ಹಂತಗಳಲ್ಲಿ ಮೂರೂವರೆ ಗಂಟೆ ಕಾಲ ನಡೆಯಲಿದೆ. ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗುತ್ತದೆ.
ರಂಗಭೂಮಿ, ಸಂಗೀತ ಮತ್ತಿತರ ಕೌಶಲ ಆಧರಿತ, ವೃತ್ತಿಪರ ಯುಜಿ ಕೋರ್ಸ್‌ಗಳಿಗೆ ವಿ.ವಿ.ಗಳು ಪ್ರಾಕ್ಟಿಕಲ್‌ ಪರೀಕ್ಷೆಗಳನ್ನು ಆಯೋಜಿಸಿ, ಅದರ ಅಂಕಗಳನ್ನು ವಿದ್ಯಾರ್ಥಿಯ ಅಂತಿಮ ಸಿಯುಇಟಿ ಸ್ಕೋರ್‌ಗೆ ಸೇರ್ಪಡೆ ಮಾಡಬೇಕು.

ಇದನ್ನೂ ಓದಿ:ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ: ಮೋದಿ

ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ
ಸಿಯುಇಟಿ ಎನ್ನುವುದು ಕಂಪ್ಯೂಟರೀಕೃತ ಪರೀಕ್ಷೆಯಾಗಿದ್ದು, ಕನ್ನಡ, ಇಂಗ್ಲಿಷ್‌, ಹಿಂದಿ, ಗುಜರಾತಿ, ಅಸ್ಸಾಮಿ, ಬಂಗಾಲಿ, ಮಲಯಾಳ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ನಡೆಯಲಿದೆ. ವಿಶೇಷವೆಂದರೆ ವಿದೇಶಿ ವಿದ್ಯಾರ್ಥಿಗಳಿಗೆ ಈ ಪ್ರವೇಶ ಪರೀಕ್ಷೆಯಿಂದ ಯುಜಿಸಿ ವಿನಾಯಿತಿ ನೀಡಿದೆ.

ಮೀಸಲಾತಿ ಮೇಲೆ ಪರಿಣಾಮವಿಲ್ಲ
ಯಾವುದಾದರೂ ವಿ.ವಿ.ಯು ಸ್ಥಳೀಯ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಮೀಸಲಾತಿ ನೀಡುತ್ತಾ ಬಂದಿದ್ದರೆ ಆ ಮೀಸಲಾತಿಯು ಮುಂದುವರಿಯುತ್ತದೆ. ಆದರೆ ಈ ವಿದ್ಯಾರ್ಥಿಗಳು ಕೂಡ ಸಿಯುಇಟಿ ಬರೆದೇ ಪ್ರವೇಶ ಪಡೆಯಬೇಕು.

 

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.