ಸರ್ವಿಸ್‌ ರಸ್ತೆ ಹೆದ್ದಾರಿ ಸೇರುವಲ್ಲಿ ಮುರಿದ ಚರಂಡಿ ಸ್ಲ್ಯಾಬ್

ಬಿ.ಸಿ.ರೋಡ್‌: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ

Team Udayavani, Mar 23, 2022, 10:30 AM IST

barrycade

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಮುಂದುವರಿದಂತೆ ಅದರ ಅವ್ಯವಸ್ಥೆಯೂ ಮುಂದು ವರಿಯುತ್ತಿದ್ದು, ಬಂಟ್ವಾಳ ತಾಲೂಕು ಕೇಂದ್ರವಾದ ಬಿ.ಸಿ.ರೋಡ್‌ ಕೆಎಸ್‌ಆರ್‌ ಟಿಸಿ ಬಸ್‌ ನಿಲ್ದಾಣ ಮುಂಭಾಗದಲ್ಲಿ ಸರ್ವಿಸ್‌ ರಸ್ತೆ ಹೆದ್ದಾರಿಯನ್ನು ಸೇರುವಲ್ಲಿ ಚರಂಡಿ ಸ್ಲ್ಯಾಬ್ ಗಳು ಮುರಿದು ಅಪಾಯವನ್ನು ಆಹ್ವಾನಿಸುತ್ತಿದ್ದೆ.

ಬಿ.ಸಿ.ರೋಡ್‌ ನಗರದಿಂದ ಮಂಗಳೂರು ಕಡೆಗೆ ಸಾಗುವ ವಾಹನಗಳು ಇದೇ ಸ್ಥಳದಲ್ಲಿ ಹೆದ್ದಾರಿಯನ್ನು ಸೇರುತ್ತಿದ್ದು, ಈ ಭಾಗದಲ್ಲಿ ಅವ್ಯವಸ್ಥೆ ಇದೆ. ಚರಂಡಿಯ ಸ್ಲ್ಯಾಬ್ ಗಳನ್ನು ಸರಿಯಾಗಿ ಜೋಡಿಸದ ಪರಿಣಾಮ ಇಂತಹ ಸ್ಥಿತಿ ಉಂಟಾಗಿದೆ.

ಇಲ್ಲಿನ ಅವ್ಯವಸ್ಥೆಯ ಪರಿಣಾಮದಿಂದ ಈಗಾಗಲೇ ಅನೇಕ ವಾಹನಗಳು ಸ್ಲ್ಯಾಬ್ ಮುರಿದ ಹೊಂಡಕ್ಕೆ ಬಿದ್ದು ತೊಂದರೆ ಅನುಭವಿಸಿದೆ. ಆದರೆ ಕಳೆದ ಕೆಲವು ಸಮಯಗಳಿಂದ ಅಲ್ಲಿನ 2-3 ಕಡೆಗಳಲ್ಲಿ ಸ್ಲ್ಯಾಬ್ ಸಂಪೂರ್ಣ ಮುರಿದು ದೊಡ್ಡ ಗಾತ್ರದ ಹೊಂಡಗಳು ಸೃಷ್ಟಿಯಾಗಿದೆ. ಹೀಗಾಗಿ ವಾಹನದವರು ಸ್ವಲ್ಪ ಎಚ್ಚರ ತಪ್ಪಿದರೂ ಹೊಂಡಕ್ಕೆ ಬೀಳುವುದು ಖಚಿತ ಎಂಬ ಪರಿಸ್ಥಿತಿ ಇದೆ.

ಅಪಾಯದ ಸಾಧ್ಯತೆ

ಜತೆಗೆ ಇದು ಪಾದಚಾರಿಗಳಿಗೂ ಅಪಾಯಕಾರಿಯಾಗಿದ್ದು, ಎಚ್ಚರ ತಪ್ಪಿ ಬಿದ್ದರೆ ಕಾಲು ಮುರಿದುಕೊಳ್ಳಬೇಕಾದ ಸ್ಥಿತಿ ಇದೆ. ರಾತ್ರಿ ವೇಳೆ ಅಲ್ಲಿ ಹೊಂಡವಿರುವುದು ಗಮನಕ್ಕೆ ಬರುವ ಸಾಧ್ಯತೆ ಕಡಿಮೆ ಇದ್ದು, ಹೀಗಾಗಿ ಅಪಾಯದ ಸಾಧ್ಯತೆ ಹೆಚ್ಚು. ಪ್ರಾರಂಭದಿಂದಲೂ ಇಂತಹ ಸಮಸ್ಯೆ ಇದ್ದು, ಅದನ್ನು ಸರಿಪಡಿಸದ ಕಾರಣ ಸ್ಲ್ಯಾಬ್ ಮುರಿದು ದೊಡ್ಡ ಹೊಂಡ ಸೃಷ್ಟಿಯಾಗಿದೆ.

ಹೊಂಡಕ್ಕೆ ಬ್ಯಾರಿಕೇಡ್‌-ಹಲಗೆ

ಚರಂಡಿಯ ಸ್ಲ್ಯಾಬ್ ಮುರಿದು ಹೊಂಡ ಸೃಷ್ಟಿಯಾಗಿರುವ ಪರಿಣಾಮ ಅದಕ್ಕೆ ಯಾವುದೇ ವಾಹನಗಳು ಅಥವಾ ನಡೆದುಕೊಂಡು ಹೋಗುವ ಪಾದಚಾರಿಗಳು ಬೀಳದಂತೆ ಎಚ್ಚರಿಕೆ ನೀಡುವ ದೃಷ್ಟಿಯಿಂದ ಒಂದು ಹೊಂಡಕ್ಕೆ ಹಳೆಯದಾದ ಬ್ಯಾರಿಕೇಡನ್ನು ಹೊಂಡದೊಳಗೆ ಇಳಿಸಲಾಗಿದೆ. ಮತ್ತೂಂದಕ್ಕೆ ಹಲಗೆಯನ್ನು ಇರಿಸಿ ಅಪಾಯವನ್ನು ತಪ್ಪಿಸುವ ಪ್ರಯತ್ನ ನಡೆಸಲಾಗಿದೆ.

ಈ ಭಾಗದಲ್ಲಿ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಜತೆಗೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣನಿಂದ ಬಸ್‌ಗಳು ಹೆದ್ದಾರಿಯನ್ನು ಸಂಧಿಸುವ ಸ್ಥಳವೂ ಇದೇ ಆಗಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು, ಪುರಸಭಾ ಆಡಳಿತ ಮಂಡಳಿ ಈ ಕುರಿತು ಗಮನಹರಿಸಿ ಸಮಸ್ಯೆಯ ಗಂಭೀರತೆಯನ್ನು ಅರಿತು ದುರಸ್ತಿ ಕಾರ್ಯ ನಡೆಸುವಂತೆ ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.

ನಾಗರಿಕರ ತಾಳ್ಮೆ ಪರೀಕ್ಷೆ ಬೇಡ

ಈ ಪ್ರದೇಶದಲ್ಲಿ ಒಂದೆರಡು ಕಡೆ ಚರಂಡಿಯ ಸ್ಲಾಬ್‌ ಮುರಿದು ಹೊಂಡಗಳು ಸೃಷ್ಟಿಯಾಗಿದ್ದು, ಅದಕ್ಕೆ ಯಾರೂ ಬೀಳದಂತೆ ಅಡ್ಡಲಾಗಿ ಇಟ್ಟಿರುವ ಬ್ಯಾರಿಕೇಡ್‌ ಹಾಗೂ ಹಲಗೆಯ ಮೇಲೆ ಈ ಅವ್ಯವಸ್ಥೆಯ ವಿರುದ್ಧ ಸಾರ್ವಜನಿಕರು ಬರವಣಿಗೆಯ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ರಟ್ಟಿನ ಮೂಲಕ ‘ ನಾಗರಿಕರ ತಾಳ್ಮೆ ಪರೀಕ್ಷೆ ಬೇಡ-ಅಧಿಕಾರಿಗಳೇ, ರಾಜಕಾರಣಿಗಳೇ ‘ ಎಂದು ಬರೆದು ಹಾಕಿದ್ದಾರೆ.

ಸಮಸ್ಯೆ ಪರಿಶೀಲನೆಗೆ ಅಧಿಕಾರಿಗಳಿಗೆ ಸೂಚನೆ

ಬೇರೆ ಬೇರೆ ಸಮಸ್ಯೆಗಳ ಕುರಿತು ಹೆದ್ದಾರಿಯವರಿಗೆ ಪತ್ರ ಬರೆದರೂ, ಯಾವುದೇ ಸ್ಪಂದನೆ ಸಿಕ್ಕಿಲ್ಲ. ಸ್ಲ್ಯಾಬ್ ಮುರಿದಿರುವ ಸಮಸ್ಯೆಯನ್ನು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಪುರಸಭೆಯಿಂದ ಸಾಧ್ಯವಾಗುವುದಾದರೆ ದುರಸ್ತಿ ಪಡಿಸಲಾಗುವುದು. -ಮೊಹಮ್ಮದ್‌ ಶರೀಫ್‌, ಅಧ್ಯಕ್ಷರು, ಬಂಟ್ವಾಳ ಪುರಸಭೆ

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-VHP

VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.