ಮುಂಬೈ-ಅಹಮದಾಬಾದ್: ಬುಲೆಟ್ ರೈಲು ಯೋಜನೆಗೆ ಶೇ.89ರಷ್ಟು ಭೂಮಿ ಸ್ವಾಧೀನ: ಸಚಿವ ವೈಷ್ಣವ್
Team Udayavani, Mar 23, 2022, 8:52 PM IST
ಹೊಸದಿಲ್ಲಿ: ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗೆ ಅಗತ್ಯವಿರುವ ಸರಿಸುಮಾರು ಶೇ.89ರಷ್ಟು ಭೂಮಿಯನ್ನು ಕೇಂದ್ರ ಸ್ವಾಧೀನಪಡಿಸಿಕೊಂಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಗೆ ಬುಧವಾರ (ಮಾ.23) ತಿಳಿಸಿದ್ದಾರೆ.
ಲೋಕಸಭೆ ಕಲಾಪದಲ್ಲಿ ಮಾತನಾಡಿದ ಅವರು ಮುಂಬೈ-ಅಹಮದಾಬಾದ್ ಹೈಸ್ಪೀಡ್ ಬುಲೆಟ್ ರೈಲು ಯೋಜನೆ ಯು ವಿಶೇಷವಾಗಿ ಮಹಾರಾಷ್ಟ್ರ ರಾಜ್ಯದಲ್ಲಿ ಭೂಸ್ವಾಧೀನದ ಸಮಸ್ಯೆಯಿಂದ ವಿಳಂಬವಾಗಿದೆ ಇದರ ಪರಿಣಾಮ ಒಪ್ಪಂದಗಳ ಅಂತಿಮಗೊಳಿಸುವಿಕೆ ಮತ್ತು ಮಹಾಮಾರಿ ಕೋವಿಡ್ -19ನ ಪ್ರತಿಕೂಲ ಪರಿಣಾಮದಿಂದ ಈ ಯೋಜನೆ ವಿಳಂಬವಾಗುತ್ತಿದೆ ಎಂದು ಸಚಿವರು ತಮ್ಮ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಎಂಎಚ್ಎಸ್ಆರ್ ಯೋಜನೆಗೆ ಅಗತ್ಯವಿರುವ ಒಟ್ಟು 1,396 ಹೆಕ್ಟೇರ್ ಭೂಮಿಯಲ್ಲಿ ಸುಮಾರು ಶೇ. 89ರಷ್ಟು ಅಂದಾಜು 1,248 ಹೆಕ್ಟೇರ್ ಭೂಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಅಗತ್ಯವಿರುವ ಒಟ್ಟು 297.81 ಹೆಕ್ಟೇರ್ ಗಳಲ್ಲಿ ಶೇ.68.65 ರಷ್ಟು ಭೂಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದರು.
ಮಹಾರಾಷ್ಟ್ರದ ಪಾಲ್ಘಡ್ ಜಿಲ್ಲೆಯ 5 ಗ್ರಾಮಗಳು ಗ್ರಾಮಸಭೆಗಳಲ್ಲಿ ಎಂಎಚ್ಎಸ್ಆರ್ ಯೋಜನೆಗಾಗಿ ಭೂಸ್ವಾಧೀನವನ್ನು ವಿರೋಧಿಸಿ ಪ್ರಸ್ತಾವನೆ ಅಂಗೀಕರಿಸಿವೆ ಎಂದರು.
ಗುಜರಾತ್ನಲ್ಲಿ ಯೋಜನೆಗೆ ಅಗತ್ಯವಿರುವ 954.28 ಹೆಕ್ಟೇರ್ ಗಳಲ್ಲಿ ಶೇ.98.76 ರಷ್ಟು ಭೂಸ್ವಾಧೀನಪಡಿಸಲಾಗಿದೆ ಎಂದು ಸಚಿವರು ಹೇಳಿದರು.
ದಾದ್ರಾ ಮತ್ತು ನಗರ ಹವೇಲಿಯಲ್ಲಿ ಯೋಜನೆಗೆ ಅಗತ್ಯವಿರುವ 7.9 ಹೆಕ್ಟೇರ್ ಭೂಮಿಯಲ್ಲಿ ಶೇ. 100 ರಷ್ಟು ಕೇಂದ್ರ ಭೂಸ್ವಾಧೀನಪಡಿಸಿಕೊಂಡಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.