ಚಂದ್ರಮೌಳೇಶರ ದೇವಸ್ಥಾನದ ಸುತ್ತ ಅಕ್ರಮ ಗಣಿಗಾರಿಕೆ
Team Udayavani, Mar 24, 2022, 3:21 PM IST
ಗುಂಡ್ಲುಪೇಟೆ: ತಾಲೂಕಿನ ಹಿರೀಕಾಟಿ ಗ್ರಾಮಕ್ಕೆ ಹೊಂದಿಕೊಂಡಂತ್ತಿರುವ ಚಂದ್ರಮೌಳೇಶ್ವರ ದೇವಸ್ಥಾನದ ಅಕ್ಕಪಕ್ಕದ ಸರ್ಕಾರಿ ಗೋಮಾಳದಲ್ಲಿ ಲೀಸ್ ನೆಪದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ರಾಜಕೀಯ ಪ್ರಭಾವ ಬಳಸಿ ಕಲ್ಲು ಲೂಟಿ ಒಡೆಯಲಾಗಿದೆ. ಹೀಗಿದ್ದರೂ ಕೂಡ ಈ ಬಗ್ಗೆ ಅಧಿಕಾರಿಗಳು ಚಕಾರ ಎತ್ತದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಹಿರೀಕಾಟಿ ಗ್ರಾಮಕ್ಕೆ ಹೊಂದಿಕೊಂಡಂತ್ತಿರುವ ಚಂದ್ರಮೌಳೇಶ್ವರ ದೇವಸ್ಥಾನದ ಸುತ್ತ ಮುತ್ತಲಿನ ಜಾಗದಲ್ಲಿ ಗಣಿಗಾರಿಕೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ರಾಜಕೀಯ ಒತ್ತಡಕ್ಕೆ ಮಣಿದು ಲೀಸ್ ನೀಡಿದ್ದಾರೆ ಎಂದು ದೊಡ್ಡಹುಂಡಿ, ಹಿರೀಕಾಟಿ, ಕೃಷ್ಣಾಪುರ ಗ್ರಾಮಸ್ಥರು ಆರೋಪಿಸಿದ್ದಾರೆ. ಹಿರೀಕಾಟಿ ಗ್ರಾಮದ ಸ.ನಂ.108ರಲ್ಲಿ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆದಿರುವ ಕಾರಣ ಕ್ವಾರಿಯ ಮದ್ಯದಲ್ಲಿರುವ ದೇವಸ್ಥಾನಕ್ಕೆ ಭಕ್ತರು ಜೀವ ಭಯದಲ್ಲಿ ಹೋಗು ವಂತ ಸ್ಥಿತಿ ಎದುರಾಗಿದೆ. ದೇವಸ್ಥಾನ ಹಾಗೂ ಸ್ಮಶಾನದ ಸುತ್ತಲೂ ಕನಿಷ್ಟ 200 ಮೀಟರ್ ಗಣಿಗಾರಿಕೆ ಮಾಡುವಂತ್ತಿಲ್ಲ ಎಂದು ಅಧಿಕಾರಿಗಳು ಹಲವು ಬಾರಿ ಹೇಳಿದ್ದಾರೆ. ಆದರೆ ಇದನ್ನು ಉಲ್ಲಂ ಸಿ ಗಣಿಗಾರಿಕೆ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರಿ ಗೋಮಾಳದಲ್ಲಿ ಹಲವು ತಲೆಮಾರಿನಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದ ಗ್ರಾಮದ ಕೆಲ ಮಂದಿ ಜಮೀನನ್ನು ಪ್ರಭಾವ ಬಳಸಿ ಜಮೀನಿನಲ್ಲಿ ಕ್ವಾರಿ ಮಾಡಿರುವ ಕುರುಹುಗಳಿವೆ. ಈ ಹಿಂದೆ ಸ್ಮಶಾನದ ಜಾಗ ಸರ್ವೆ ನಡೆಸಿದ ಬಳಿಕ ಹದ್ದುಬಸ್ತು ಮಾಡಿತ್ತು. ಗಣಿಗಾರಿಕೆ ಸಲುವಾಗಿ ಕೆಲ ಲೀಸ್ದಾರರು ಸ್ಮಶಾನದ ಗಡಿಯೊಳಗೆ ಮಣ್ಣು ಹಾಕುವ ಮೂಲಕ ಸ್ಮಶಾನ ಕಾಣದಂತೆ ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಇದನ್ನೂ ಓದಿ : ಬಗರ್ಹುಕುಂ ಹಕ್ಕುಪತ್ರ ನೀಡಲು ಆಗ್ರಹ
ಹಿರೀಕಾಟಿ ಗೋಮಾಳದಲ್ಲಿ ಹತ್ತು ಎಕರೆ ಲೀಸ್ ಪಡೆದು 80 ಎಕರೆಗಿಂತಲೂ ಅಧಿಕ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗಿದೆ. ಹಲವು ಕಡೆ ಕಾನೂನು ಬಾಹೀರವಾಗಿ
ಕಲ್ಲು ದೋಚಿದ್ದರೂ ಕೂಡ ಅಧಿಕಾರಿ ಗಳು ಚಕಾರ ಎತ್ತುತ್ತಿಲ್ಲ. ಆದ್ದರಿಂದ ಸಾರ್ವಜನಿಕರಿಗೆ ಅಕ್ರಮ ವಿಷಯ ತಿಳಿಯುವಂತೆ ಜಿಲ್ಲಾಧಿಕಾರಿಗಳು ಬಹಿರಂಗ ಆದೇಶ ಹೊರಡಿಸಲಿ.
– ಕಂದೇಗಾಲ ಶಿವಣ್ಣ, ಅಧ್ಯಕ್ಷರು, ರೈತ ಕೂಲಿ ಸಂಗ್ರಾಮ ಸಮಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.