ದೇಶದ ಒಕ್ಕೂಟ ವ್ಯವಸ್ಥೆ ಆಶಯಕ್ಕೆ ಬಿಜೆಪಿಯಿಂದ ಧಕ್ಕೆ; ಡಿ.ಕೆ. ಶಿವಕುಮಾರ

ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಬಣಗಳಿಲ್ಲ. ಎಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ.

Team Udayavani, Mar 25, 2022, 6:16 PM IST

ದೇಶದ ಒಕ್ಕೂಟ ವ್ಯವಸ್ಥೆ ಆಶಯಕ್ಕೆ ಬಿಜೆಪಿಯಿಂದ ಧಕ್ಕೆ; ಡಿ.ಕೆ. ಶಿವಕುಮಾರ

ಹೊಸಪೇಟೆ: ಬಿಜೆಪಿ ಸ್ವಾರ್ಥ ಸಾಧನೆಗಾಗಿ ದೇಶ ಇಬ್ಭಾಗ ಮಾಡುವ ಕೆಲಸ ಮಾಡುತ್ತಿದ್ದು, ಇದರಿಂದ ಒಕ್ಕೂಟ ವ್ಯವಸ್ಥೆ ಆಶಯಕ್ಕೆ ಧಕ್ಕೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.

ನಗರದ ಮಲ್ಲಿಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಹಿಂದೂ ಮತಗಳ ಧ್ರುವೀಕರಣಕ್ಕೆ ಹುನ್ನಾರ ನಡೆದಿದೆ. ಇದರಿಂದ ದೀರ್ಘ‌ಕಾಲದಲ್ಲಿ ದೇಶದ ಜಾತ್ಯತೀತ ನಿಲುವಿಗೆ ಅಪಾಯ ಆಗಲಿದೆ. ಕಾಂಗ್ರೆಸ್‌ ಯಾವತ್ತೂ ರಾಮಾಯಣ, ಬೈಬಲ್‌, ಕುರಾನ್‌ ಮತ್ತು ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ನಂಬುತ್ತದೆ. ಇವುಗಳ ತತ್ವ ಸಿದ್ಧಾಂತದ ಮೇಲೆ ಪಕ್ಷ ಮುನ್ನಡೆಯುತ್ತಿದೆ ಎಂದರು.

ಜಾತ್ರೆ, ದೇವಸ್ಥಾನಗಳಲ್ಲಿ ಇತರೆ ಧರ್ಮಿಯರಿಗೆ ವ್ಯಾಪಾರ, ವಹಿವಾಟಿಗೆ ನಿರ್ಬಂಧ ವಿಧಿ ಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ನಾಯಕರನ್ನು ಮೆಚ್ಚಿಸಲು ನೈತಿಕ ಪೊಲೀಸ್‌ಗಿರಿಯನ್ನು ತಡೆಯುತ್ತಿಲ್ಲ. ಇದರಿಂದ ಮುಂದೆ ರಾಜ್ಯಕ್ಕೆ ಅಪಾಯ ಉಂಟಾಗಲಿದೆ ಎಂದರು.ದೇಶದಲ್ಲಿ ಅಸಹಿಷ್ಣುತೆ ವಾತಾವರಣ ನಿರ್ಮಾಣವಾದ ಹಿನ್ನೆಲೆ ದೊಡ್ಡ ದೊಡ್ಡ ಬಂಡವಾಳಶಾಹಿಗಳು ಹೂಡಿಕೆಗೆ ಬರುತ್ತಿಲ್ಲ.ಇನ್ನೂ ಬಂಡವಾಳಶಾಹಿಗಳು ದೇಶದಿಂದ
ಕಾಲ್ಕಿಳುತ್ತಿದ್ದಾರೆ. ಈಗಾಗಲೇ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಲೆದೋರಿದೆ.

ಅಗತ್ಯವಸ್ತುಗಳ ಬೆಲೆ ಏರಿಕೆ, ತೈಲ ಬೆಲೆ, ಅಡುಗೆ ಸಿಲಿಂಡರ್‌ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು ಎಂದರು. ಕಲ್ಯಾಣ ಕರ್ನಾಟಕದಲ್ಲಿ ಡಿಜಿಟಲ್‌ ಸದಸ್ಯತ್ವ ಅಭಿಯಾನ ನೋಂದಣಿ ಕಾರ್ಯ ಭರದಿಂದ ನಡೆದಿದೆ. ತೆಲಂಗಾಣದಲ್ಲಿ 40 ಲಕ್ಷ ಸದಸ್ಯತ್ವ ನೋಂದಣಿಯಾಗಿದೆ. ಕರ್ನಾಟಕದಲ್ಲಿ ಈಗಾಗಲೇ 28 ಲಕ್ಷ ಸದಸ್ಯತ್ವ ನೋಂದಣಿ ಮಾಡಲಾಗಿದೆ. ಇನ್ನಷ್ಟು ಗುರಿ ನೀಡಲಾಗಿದ್ದು, ಎಲ್ಲರೂ ಕೂಡಿ ನೋಂದಣಿ ಕಾರ್ಯ ಮಾಡುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಬಣಗಳಿಲ್ಲ. ಎಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ. ವಿಧಾನಸಭೆ ಚುನಾವಣೆಗೂ ಸಾಮೂಹಿಕ ನಾಯಕತ್ವದಲ್ಲೇ ಎದುರಿಸುತ್ತೇವೆ ಎಂದರು. ಈ ಬಾರಿ ವಿಧಾನಸಭೆ ಚುನಾವಣೆಗೆ ಹೊಸಬರಿಗೆ ಟಿಕೆಟ್‌ ನೀಡಲಾಗುವುದು. ಜತೆಗೆ ಸ್ಥಳೀಯವಾಗಿ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು. ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದ್ದು, ಎಲ್ಲ ಮುಂಚೂಣಿ ಘಟಕಗಳ ಬಲವರ್ಧನೆಗೆ
ಕ್ರಮವಹಿಸಲಾಗುತ್ತಿದೆ. ಕೇಡರ್‌ ಪಾರ್ಟಿ ಮಾಡಲೂ ಒತ್ತು ನೀಡಲಾಗಿದೆ ಎಂದರು.

ಶಾಸಕರಾದ ಬಿ. ನಾಗೇಂದ್ರ, ಭೀಮಾನಾಯ್ಕ, ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಮಾಜಿ ಶಾಸಕ ಸಿರಾಜ್‌ ಶೇಕ್‌, ಮುಖಂಡರಾದ ಬಿ.ವಿ. ಶಿವಯೋಗಿ, ರಫೀಕ್‌, ವೆಂಕಟರಾವ್‌ ಘೋರ್ಪಡೆ, ಗುಜ್ಜಲ ರಘು, ದೀಪಕ್‌ ಸಿಂಗ್‌, ಜಲಜಾ ನಾಯ್ಕ, ರಾಜಶೇಖರ್‌ ಹಿಟ್ನಾಳ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Bellary; Darshan IT interrogation in jail

Bellary; ಜೈಲಿನಲ್ಲಿಂದು ದರ್ಶನ್‌ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.