ಗಡಿನಾಡಲ್ಲಿ ರಾಜಮೌಳಿ ಆರ್‌ಆರ್‌ಆರ್‌ ಆರ್ಭಟ!


Team Udayavani, Mar 26, 2022, 1:28 PM IST

12RRR

ರಾಯಚೂರು: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಆರ್‌ಆರ್‌ಆರ್‌ ಸಿನಿಮಾ ಶುಕ್ರವಾರ ಬಿಡುಗಡೆಯಾಗಿದ್ದು, ಬಹುತಾರಾಗಣದ ಸಿನಿಮಾ ನೋಡಲು ಅಭಿಮಾನಿಗಳಿಂದ ನೂಕುನುಗ್ಗಲು ನಡೆದಿದೆ.

ಬೆಳ್ಳಬೆಳಗ್ಗೆಯೇ ಸಿನಿಮಾ ಪ್ರದರ್ಶನ ಆರಂಭಿಸಲಾಯಿತು. ನಗರದ ಪೂರ್ಣಿಮಾ ಚಿತ್ರಮಂದಿರದಲ್ಲಿ ಗೇಟ್‌ ಮುರಿದು ಪ್ರೇಕ್ಷಕರು ನುಗ್ಗಿದ ಪ್ರಸಂಗಗಳು ನಡೆದವು. ಬಾಗಿಲು, ಕಿಟಕಿಗಳನ್ನು ಮುರಿಯುವ ಮೂಲಕ ಪ್ರೇಕ್ಷಕರು ಅತಿರೇಕದ ವರ್ತನೆ ತೋರಿದ್ದಾರೆ. ಅಭಿಮಾನಿಗಳ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ಟಿಕೆಟ್‌ ಪಡೆದವರು ಬಿಟ್ಟು ಬೇರೆಯವರೇ ಸಿನಿಮಾ ನೋಡಿದ್ದು, ಹಣ ಕೊಟ್ಟವರಿಗೆ ಸಿನಿಮಾ ನೋಡಲಾಗಿಲ್ಲ ಎಂದು ಚಿತ್ರಮಂದಿರ ಮಾಲೀಕರು ತಿಳಿಸಿದ್ದಾರೆ.

ಮಿರಾಜ್‌ ಸಿನಿಮಾದಲ್ಲಿ ಹೆಚ್ಚು ಪ್ರದರ್ಶನಗಳನ್ನು ಆಯೋಜಿಸಿದ್ದು, ಮೂರು ನಾಲ್ಕು ಪರದೆಗಳಲ್ಲಿ ಸಿನಿಮಾವನ್ನು ನಿರಂತರವಾಗಿ ಓಡಿಸಲಾಗಿದೆ. ಬಹುತೇಕ ಎಲ್ಲ ಪ್ರದರ್ಶನಗಳು ಹೌಸ್‌ಫುಲ್‌ ಪ್ರದರ್ಶನ ಕಂಡಿವೆ. ಗಡಿ ಜಿಲ್ಲೆಯಾದ ಕಾರಣ ತೆಲುಗು ಪ್ರಭಾವ ಹೆಚ್ಚಾಗಿದ್ದು, ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ, ಲಾಕ್‌ಡೌನ್‌ನಿಂದ ದೊಡ್ಡ ಸಿನಿಮಾಗಳು ಈಗಷ್ಟೇ ಬಿಡುಗಡೆಯಾಗುತ್ತಿರುವುದು ಮತ್ತೊಂದು ಕಾರಣ.

ಖ್ಯಾತ ನಟರಾದ ಜ್ಯೂ.ಎನ್‌ಟಿಆರ್‌ ಹಾಗೂ ರಾಮ್‌ ಚರಣ್‌ ಹಾಗೂ ರಾಜಮೌಳಿ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೂ ಭಾರೀ ಪ್ರತಿಕ್ರಿಯೆ ಬಂದಿದೆ. ಈ ಅವಕಾಶ ಬಳಸಿಕೊಂಡ ಚಿತ್ರಮಂದಿರದ ಮಾಲೀಕರು ಟಿಕೆಟ್‌ ದರವನ್ನು ಹೆಚ್ಚಿಸಿದ್ದರು. 150 ರೂ. ಇದ್ದ ಟಿಕೆಟ್‌ ದರ 300 ರೂ. ಹೆಚ್ಚಿಸಲಾಗಿತ್ತು. ಟಿಕೆಟ್‌ ಸಿಗದ ಅಭಿಮಾನಿಗಳು ಬೇರೆಯವರ ಟಿಕೆಟ್‌ಗಳನ್ನು ಕಲರ್‌ ಝೆರಾಕ್ಸ್‌ ಮಾಡಿಸಿ ಸಿನಿಮಾ ನೋಡಲು ಯತ್ನಿಸಿದ ಪ್ರಸಂಗಗಳು ನಡೆದಿವೆ.

ಕನ್ನಡ ಡಬ್ಬಿಂಗ್‌; ಸಿಗದ ಸ್ಪಂದನೆ

ಆರ್‌ಆರ್‌ ಆರ್‌ ಸಿನಿಮಾ ತೆಲುಗು, ಕನ್ನಡ ಸೇರಿದಂತೆ ಬಹುಭಾಷೆಯಲ್ಲಿ ಬಿಡುಗಡೆಯಾಗಿದೆ. ಆದರೆ, ಜಿಲ್ಲೆಯಲ್ಲಿ ಕನ್ನಡ ಡಬ್ಬಿಂಗ್‌ ಸಿನಿಮಾ ಜತೆಗೆ ತೆಲುಗು ಸಿನಿಮಾ ಪ್ರದರ್ಶನವೇ ಹೆಚ್ಚಾಗಿದ್ದು, ಕನ್ನಡ ಡಬ್ಬಿಂಗ್‌ ಸಿನಿಮಾಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಿರಾಜ್‌ ಸಿನಿಮಾಸ್‌ನಲ್ಲಿ ಎರಡ್ಮೂರು ಪರದೆ ಮೇಲೆ ತೆಲುಗು ಸಿನಿಮಾ ಪ್ರದರ್ಶಿಸಿದರೆ, ಒಂದು ಪರದೆಯಲ್ಲಿ ಮಾತ್ರ ಕನ್ನಡ ಡಬ್ಬಿಂಗ್‌ ಸಿನಿಮಾ ಪ್ರದರ್ಶಿಸುತ್ತಿದ್ದು, ಅದಕ್ಕೂ ಪ್ರೇಕ್ಷಕರ ಕೊರತೆ ಕಂಡು ಬರುತ್ತಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.