ಚರಕ ಉತ್ಸವಕ್ಕೆ ಚಾಲನೆ; ಕಾಯಕ ಪ್ರಶಸ್ತಿ ಪ್ರದಾನ


Team Udayavani, Mar 26, 2022, 2:29 PM IST

Untitled-1

ಸಾಗರ: ಭಾರತೀಯ ಶ್ರಮ ಸಂಸ್ಕೃತಿಯನ್ನು ಉಳಿಸುವ, ಆ ಮೂಲಕ ಕರಕುಶಲಕರ್ಮಿಗಳಿಗೆ ಆತ್ಮಗೌರವ ಒದಗಿಸುವ ಕಾರ‍್ಯವನ್ನು ಚರಕ ಮಾಡುತ್ತಿದೆ ಎಂದು ಬಿಜಾಪುರದ ಬಂಜಾರ ಕಸೂತಿ ಒಕ್ಕೂಟದ ನಿರ್ದೇಶಕಿ ಆಶಾ ಪಾಟೀಲ್ ಹೇಳಿದರು.

ತಾಲೂಕಿನ ಹೊನ್ನೆಸರದ ಶ್ರಮಜೀವಿ ಆಶ್ರಯದಲ್ಲಿ ಭೀಮನಕೋಣೆ ಕವಿಕಾವ್ಯ ಟ್ರಸ್ಟ್ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಎರಡು ದಿನಗಳ ಚರಕ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಸ್ಕೃತಿ, ಖಾದಿ ವಸ್ತುಗಳ ಬಳಕೆ ಇತ್ಯಾದಿ ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಚರಕ ಶ್ರಮ ಸಂಸ್ಕೃತಿಗೆ ಮನ್ನಣೆ ದೊರಕಿಸಿದೆ. ಕಾಯಕವೇ ಕೈಲಾಸ, ಕೈ ಕೆಸರಾದರೆ ಬಾಯಿ ಮೊಸರು ಎಂಬ ಮಾತುಗಳು ಚರಕದಲ್ಲಿ ಕಾರ‍್ಯ ರೂಪಕ್ಕೆ ಬಂದಿವೆ. ಯುವ ಪೀಳಿಗೆಗೆ ಆದರ್ಶ ತೋರಿಸುವ ಕಾರ‍್ಯವನ್ನು ಚರಕದಲ್ಲಿ ಮಹಿಳೆಯರು ಮಾಡುತ್ತಿದ್ದಾರೆ ಎಂದರು.

ದೇಸೀ ಸಂಸ್ಥೆಯ ಶಾರದಾ ಗಣೇಶ್‌ಮಾತನಾಡಿ,  ಚರಕ ಸಂಸ್ಥೆಯ ಉದ್ದೇಶ ಮತ್ತು ಸಫಲತೆಯನ್ನು ಸಮರ್ಪಕವಾಗಿ ಅರ್ಥಮಾಡಿಕೊಳ್ಳಬೇಕು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯವಾಗಿರುವುದು ಚರಕದ ಒಂದು ಸಾಧ್ಯತೆ ಮಾತ್ರವಾಗಿದೆ. ಶೋಷಣೆ, ಪರಿಸರ ನಾಶ ಇತ್ಯಾದಿಗಳಿರುವ ಸಮಾಜವನ್ನು ಸರಿ ಮಾಡುವ ನಿಟ್ಟಿನಲ್ಲಿ ಪ್ರಸ್ತುತ ಅಗತ್ಯವಾದ ಜೀವನಶೈಲಿಯನ್ನು ಚರಕ ಪ್ರತಿಪಾದಿಸುತ್ತದೆ. ಚರಕದ ಮೂಲಕ ಅಂತಹ ವ್ಯಕ್ತಿತ್ವದ ನಿರ್ಮಾಣವಾದಾಗ ಪ್ರಸನ್ನ ಅವರ ಕನಸು ನನಸಾಗುತ್ತದೆ;  ಗುರಿ ಈಡೇರಿದಂತಾಗುತ್ತದೆ ಎಂದರು.

ಹೆಗ್ಗೋಡು ಗ್ರಾಪಂ ಅಧ್ಯಕ್ಷೆ ಸುಮ ಅಧ್ಯಕ್ಷತೆ ವಹಿಸಿದ್ದರು. ೧೮ನೇ ವರ್ಷದ ಕಾಯಕ ಪ್ರಶಸ್ತಿ ವಿಭಾಗದಲ್ಲಿ ತಲಾ ೫ ಸಾವಿರ ರೂ. ನಗದು, ಫಲಕಗಳನ್ನೊಳಗೊಂಡ ೧೦  ವೈಯಕ್ತಿಕ ಪ್ರಶಸ್ತಿ ಹಾಗೂ ಅತ್ಯುತ್ತಮ ಕೆಲಸ ನಿರ್ವಹಿಸಿದ ವಿಭಾಗಗಳಿಗೆ 10 ಸಾವಿರ ರೂ. ನಗದು ಹಾಗೂ ಫಲಕಗಳನ್ನೊಳಗೊಂದು ಗುಂಪು ಕಾಯಕ ಪ್ರಶಸ್ತಿಯನ್ನು ನೀಡಲಾಯಿತು. ಪ್ರಶಸ್ತಿ ಪುರಸ್ಕೃತರಾದ ಜಿ.ಕೆ.ಶ್ರೀಧರ ಮತ್ತು ಲಕ್ಷ್ಮೀನಾರಾಯಣ ಮಾತನಾಡಿದರು.

ಚರಕ ಸಂಸ್ಥೆಯ ಪ್ರಸನ್ನ, ಅಧ್ಯಕ್ಷೆ ಗೌರಮ್ಮ, ಮಹಾಲಕ್ಷ್ಮೀ, ರಮೇಶ್, ಇಂದುಕುಮಾರ್, ಶೈಲಜಾ ಪೀಟರ್, ರುದ್ರಯ್ಯ ಮುಂತಾದವರು ಹಾಜರಿದ್ದರು. ಮಧುರಾ ಪ್ರಾರ್ಥಿಸಿದರು. ಪದ್ಮಶ್ರೀ ಸ್ವಾಗತಿಸಿದರು. ಪವಿತ್ರ ವಂದಿಸಿದರು. ಕೌಸ್ತುಭ ನಿರೂಪಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.