ಸಿದ್ದರಾಮಯ್ಯ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಮಠಾಧೀಶರು

ರಾಜಕೀಯ ಸ್ವಾರ್ಥಕ್ಕಾಗಿ ಧರ್ಮ ಗುರುಗಳ ನಿಂದನೆ ತರವಲ್ಲ

Team Udayavani, Mar 26, 2022, 3:35 PM IST

1-ffssdfds

ಡಾ.ಮಹದೇವ ಶ್ರೀಗಳು, ಕನ್ನೂರು ಸೋಮನಾಥ ಶ್ರೀಗಳು

ವಿಜಯಪುರ: ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಅನಗತ್ಯವಾಗಿ ಧರ್ಮ ಗುರುಗಳನ್ನು ನಿಂದಿಸಿರುವ ಹಿರಿಯ ರಾಜಕೀಯ ನಾಯಕ ಸಿದ್ಧರಾಮಯ್ಯ ಅವರಿಗೆ ಇದು ಶೋಭೆ ತರುವುದಿಲ್ಲ ಎಂದು ಆಲಗೂರ ಬಬಲೇಶ್ವರದ ಪಂಚಮಸಾಲಿ ಪೀಠದ ಜಗದ್ಗುರು ಡಾ.ಮಹಾದೇವ ಶ್ರೀಗಳು ಕಿಡಿ ಕಾರಿದ್ದಾರೆ.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾಜಿ ಮುಖಮಂತ್ರಿಯಾಗಿ, ರಾಜ್ಯದ ಹಿರಿಯ ರಾಜಕೀಯ ನಾಯಕರಾದ ಸಿದ್ಧರಾಮಯ್ಯ ಅವರಿಂದ ಇಂಥ ಹೇಳಿಕೆ ಬಂದಿವುದು ಸರಿಯಲ್ಲ ಎಂದರು.

ತಮ್ಮ ರಾಜಕೀಯ ಲಾಭಕ್ಕಾಗಿ, ಓಲೈಕೆ ರಾಜಕಾರಣಕ್ಕಾಗಿ ಮಠಾಧೀಶರನ್ನು ಅವಹೇಳನ ಮಾಡುವ, ನಿಂದಿಸುವ, ಅಪಹಾಸ್ಯ ಮಾಡುವುದರಿಂದ ಸಿದ್ಧರಾಮಯ್ಯ ಅವರಿಗೆ ರಾಜಕೀಯವಾಗಿ ಲಾಭವಾಗುವುದಿಲ್ಲ. ಇಂಥ ವರ್ತನೆ ಯಾರಿಂದಲೂ ಆಗಬಾರದು ಎಂದು ಸದನದಲ್ಲಿ ಸಿದ್ಧರಾಮಯ್ಯ ಹೇಳಿಕೆಗೆ ಆಕ್ಷೇಕಿಸಿದರು.

ಮಠಾಧೀಶರು ಎಂದರೆ ಕೇವಲ ವ್ಯಕ್ತಿಯಾಗಿರದೇ ಸಮಾಜದ ಗುರು ಸ್ಥಾನದಲ್ಲಿ ಗೌರಯುತ ಸ್ಥಾನದಲ್ಲಿ ಇರುತ್ತಾರೆ. ಗುರು ಸ್ಥಾನದಲ್ಲಿರುವ ಮಠಾಧೀಶರ ಬಗ್ಗೆ ಲಘುವಾಗಿ ಹಾಗೂ ಮಠಾಧೀಶರು ಧರಿಸುವ ವಸ್ತ್ರಗಳ ಬಗ್ಗೆ ರಾಜಕೀಯ ಉದ್ದೇಶದ ಓಲೈಕೆಗಾಗಿ ಅವಹೇಳನ ರೀತಿಯಲ್ಲಿ ಮಾತನಾಡುವುದು ಖಂಡನಾರ್ಹ ಎಂದರು.

ಹೋರಾಟದ ಎಚ್ಚರಿಕೆ

ಸಿದ್ದರಾಮಯ್ಯ ಅನಗತ್ಯವಾಗಿ ಮಠಾಧೀಶರನ್ನು ಬೀದಿಗೆ ಎಳೆಯುವ ಕೆಲಸ ಮಾಡಿದ್ದಾರೆ. ಇವರ ವರ್ತನೆ ಹೀಗೇ ಮುಂದುವರೆದರೆ ಬೀದಿಗಿಳಿದು ಹೋರಾಡಬೇಕಾಗುತ್ತದೆ ಎಂದು ಕನ್ನೂರು ಮಠದ ಸೋಮನಾಥ ಶ್ರೀಗಳು ಆಕ್ರೋಶ ಹೊರ ಹಾಕಿದ್ದಾರೆ.

ಈ ಹಿಂದೆ ವೀರಶೈವ ಲಿಂಗಾಯತ ಧರ್ಮ ಒಡೆಯುವ ಹುನ್ನಾರ ನಡೆಸಿದ್ದ ಸಿದ್ದರಾಮಯ್ಯ ಅವರಿಂದ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ವಯಕ್ತಿಕವಾಗಿ ಅವರೇ ಹಿನ್ನಡೆ ಅನುಭವಿಸಿರುವ ಕಹಿ ಅನುಭವ ಇದೆ. ಹೀಗಿದ್ದರೂ ಮಠಾಧೀಶರಿಗೆ ನೋವುಂಟು ಮಾಡುವಂತೆ ಹೇಳಿಕೆ ನೀಡಿರುವುದು ಸರಿಯಲ್ಲ ಎಂದರು.

ಜಾತಿ-ಮತ ಎಣಿಸದೇ ವೀರಶೈವ-ಲಿಂಗಾಯತ ಮಠಗಳು ಅಕ್ಷರ-ಅನ್ನ ದಾಸೋಹ ಮಾಡಿದ್ದರಿಂದ ಇಂದು ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಗೆ ಕಾರಣವಾಗಿದೆ. ವೀರಶೈವ ಮಠಗಳು ಇರಿದ್ದರೆ ರಾಜ್ಯದ ಜನರು ಶೇ.90 ರಷ್ಟು ಇನ್ನೂ ಅನಕ್ಷರಸ್ತರಾಗಿ ಇರುತ್ತಿದ್ದರು. ಇದನ್ನು ಅವರ ಜೊತೆಗಾರರೇ ಆಗಿದ್ದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರೇ ಹೇಳಿದ್ದಾರೆ ಎಂದು ನೆನಪಿಸಿದರು.

ಸಮಾಜಮುಖಿ ಕೆಲಸ ಮಾಡುವ ಮಠಾಧೀಶರು, ಮಠಗಳ ಬಗ್ಗೆ ಸಿದ್ಧರಾಮಯ್ಯ ಅವರು ಅನಗತ್ಯವಾಗಿ ಹಗುರ ಮಾತುಗಳನ್ನಾಡುವುದನ್ನು ಇನ್ನಾದರೂ ಬಿಡಬೇಕು. ಇಲ್ಲವಾದಲ್ಲಿ ಭಕ್ತರ ನೇತೃತ್ವದಲ್ಲೇ ಸಿದ್ಧರಾಮಯ್ಯ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Exam 2

SSLC; ಮಧ್ಯ ವಾರ್ಷಿಕ ಪರೀಕ್ಷಾ ಫ‌ಲಿತಾಂಶ ಅ. 25 ಕ್ಕೆ

aane

Wild Elephant  ಕಾಟ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಬಿಡಾರ

1-aranya

Forest Act ತಿದ್ದುಪಡಿ ಸೇರಿ ಬೇಡಿಕೆ ಈಡೇರಿಕೆಗೆ ಇಂದು ಸಭೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.