ಕೈಗಾರಿಕಾ ವಿಕೇಂದ್ರೀಕರಣ ಪ್ರತಿಪಾದನೆ

ತಲಾದಾಯ ಟಾಪ್‌ ಟೆನ್‌ನಲ್ಲಿ ಉತ್ತರದ ಒಂದೂ ಜಿಲ್ಲೆ ಇಲ್ಲದಿರುವುದು ನೋವಿನ ಸಂಗತಿ: ಜಗದೀಶ ಶೆಟ್ಟರ

Team Udayavani, Mar 27, 2022, 10:04 AM IST

1

ಹುಬ್ಬಳ್ಳಿ: ರಾಜ್ಯದ ತಲಾವಾರು ಆದಾಯ ಹೆಚ್ಚಿರುವ ಮೊದಲ 10 ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕದ ಒಂದೂ ಜಿಲ್ಲೆ ಸ್ಥಾನ ಪಡೆಯದಿರುವುದು ನೋವು ತರಿಸುತ್ತಿದೆ. ಸಮಾಧಾನದ ಸಂಗತಿ ಎಂದರೆ 11ನೇ ಸ್ಥಾನದಲ್ಲಿ ಧಾರವಾಡ ಜಿಲ್ಲೆ ಇದೆ. ಬೆಂಗಳೂರು ಹೊರತಾದ ಪ್ರದೇಶದಲ್ಲಿ ಉದ್ಯಮ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಟೈಕಾನ್‌ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕ ಜಿಲ್ಲೆಗಳಿಗೆ ಹೋಲಿಸಿದರೆ ತಲಾದಾಯದಲ್ಲಿ ಉತ್ತರದ ಜಿಲ್ಲೆಗಳು ಹಿಂದಿವೆ. ಬೆಂಗಳೂರು ಸೇರಿ ಆ ಭಾಗದ ಕೆಲ ಜಿಲ್ಲೆಗಳ ಸರಾಸರಿ ತಲಾದಾಯ 5 ಲಕ್ಷ ರೂ. ಇದ್ದರೆ, 11ನೇ ಸ್ಥಾನ ಪಡೆದಿರುವ ಧಾರವಾಡದ ಸರಾಸರಿ ತಲಾ ಆದಾಯ 1.77 ಲಕ್ಷ ರೂ. ಆಗಿದೆ ಎಂದರು.

ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇರುವಂತೆ ನಮ್ಮ ರಾಜ್ಯದಲ್ಲಿಯೂ ಕೈಗಾರಿಕಾ ವಿಕೇಂದ್ರೀಕರಣ ಆಗಬೇಕಾಗಿದೆ. ಆದರೆ, ಪ್ರಸ್ತುತ ಬೆಂಗಳೂರು ಕೇಂದ್ರೀಕೃತ ಉದ್ಯಮ ಬೆಳವಣಿಗೆ ಆಗಿದೆ. ಅದು ಬದಲಾಗಬೇಕಾಗಿದೆ. ನಾನು ಕೈಗಾರಿಕಾ ಸಚಿವನಾಗಿದ್ದಾಗ ಕೈಗೊಂಡ ಕೈಗಾರಿಕಾ ನೀತಿ ಹಾಗೂ ಉತ್ತೇಜನ ಕ್ರಮದಿಂದ ಅನೇಕ ಉದ್ಯಮಗಳು ಉತ್ತರಮುಖೀಯಾಗಿವೆ. ದೇಶಪಾಂಡೆ ಫೌಂಡೇಶನ್‌, ಟೈನಿಂದಾಗಿ ನವೋದ್ಯಮ ಬೆಳವಣಿಗೆ ಆಗಿದೆ. ಏಕಸ್‌, ಯುಫ್ಲೆಕ್ಸ್‌, ರಾಜೇಶ ಎಕ್ಸ್‌ಪೋರ್ಟ್‌ ಸೇರಿದಂತೆ ಅನೇಕ ದೊಡ್ಡ ಉದ್ಯಮಗಳು ಹುಬ್ಬಳ್ಳಿ-ಧಾರವಾಡ, ಕೊಪ್ಪಳಗಳಿಗೆ ಬರುತ್ತಿವೆ. ಎಫ್‌ಎಂಸಿಜಿ ಗೇಮ್‌ ಚೇಂಜರ್‌ ಆಗಲಿದೆ ಎಂದರು.

ಹು-ಧಾದಲ್ಲಿ ಉದ್ಯಮಗಳಿಗೆ ನಿವೇಶನಗಳನ್ನು ನೀಡಲು ಜಾಗ ಇಲ್ಲವಾಗಿದ್ದು, ಭೂ ಸ್ವಾಧೀನಕ್ಕೆ ಒತ್ತು ನೀಡಬೇಕು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ, ಬೇಲೇಕೇರಿ ಬಂದರು ಅಭಿವೃದ್ಧಿ ಇನ್ನಿತರ ಕಾರ್ಯಗಳು ಆಗಬೇಕಾಗಿದೆ ಎಂದರು.

ಉದ್ಯಮಕ್ಕೆ ಮುಂದಾಗಿ: ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಯುವಕರು ಉದ್ಯಮಕ್ಕೆ ಮುಂದಾಗುವ ಮೂಲಕ ಇತರರಿಗೆ ಉದ್ಯೋಗ ನೀಡುವ ಕಾರ್ಯಕ್ಕೆ ಮುಂದಾಗಬೇಕು. ಸುಮಾರು 30-40 ವರ್ಷಗಳ ಹಿಂದೆ ಯುವಕರು ತಮ್ಮ ವೆಚ್ಚದ ಹಣಕ್ಕಾಗಿ ತಂದೆ-ತಾಯಿಗಳನ್ನು ಅವಲಂಬಿಸಿದ್ದರು. ಆದರೆ, ಇದೀಗ ಸ್ವಯಂ ಆದಾಯ ಸೃಷ್ಟಿಗೆ ಮುಂದಾಗಿರುವುದು ಸಂತಸದ ವಿಚಾರವಾಗಿದೆ. ಆದರೂ ನಿರುದ್ಯೋಗ ಹೆಚ್ಚುತ್ತಿದೆ. ಬಿಎಡ್‌ ಪದವಿ ಮುಗಿಸಿದ ಸುಮಾರು 38 ಸಾವಿರ ಪದವೀಧರರು, ಡಿಎಡ್‌ ಮುಗಿಸಿದ 98 ಸಾವಿರ ಜನರಿಗೆ ಉದ್ಯೋಗ ಇಲ್ಲವಾಗಿದೆ. ಇದೀಗ ಸರಕಾರ 15 ಸಾವಿರ ಶಿಕ್ಷಕರ ನೇಮಕ್ಕೆ ಮುಂದಾಗಿದೆ ಎಂದು ಹೇಳಿದರು.

ಗ್ಲೋಬಲ್‌ ಟೈ ಅಧ್ಯಕ್ಷ ಬಿ.ಜೆ. ಅರುಣ ಮಾತನಾಡಿ, ಗ್ಲೋಬಲ್‌ ಟೈ 30ನೇ ವಾರ್ಷಿಕೋತ್ಸವ ಸಂಭ್ರಮದಲ್ಲಿದೆ. ಉದ್ಯೋಗ ಮತ್ತು ಸಂಪತ್ತು ಸೃಷ್ಟಿ ಮುಖ್ಯ ಧ್ಯೇಯವಾಗಿದೆ. ಉದ್ಯಮ ಮೌಲ್ಯವರ್ಧನೆ ಬಿಟ್ಟರೆ ಬೇರಾವ ಅಜೆಂಡಾಕ್ಕೆ ಒತ್ತು ನೀಡುತ್ತಿಲ್ಲ ಎಂದರು.

ಉದ್ಯಮಿ ವಿಎಸ್‌ವಿ ಪ್ರಸಾದ ಮಾತನಾಡಿ, ಉದ್ಯಮ ಬೆಳವಣಿಗೆಗೆ ಟೈ ಅತ್ಯುತ್ತಮ ವೇದಿಕೆಯಾಗಿದ್ದು, ನವೋದ್ಯಮಿಗಳು ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಟೈ ಹುಬ್ಬಳ್ಳಿ ಅಧ್ಯಕ್ಷ ವಿಜೇಶ ಸೈಗಲ್‌ ಪ್ರಾಸ್ತಾವಿಕ ಮಾತನಾಡಿ, ನವೋದ್ಯಮ ಉದ್ಯಮ ಚಿಂತನೆ ಸ್ಪರ್ಧೆಯಲ್ಲಿ ಸುಮಾರು 60 ನವೋದ್ಯಮಿಗಳು ಭಾಗಿಯಾಗಿದ್ದರು. ಅದರಲ್ಲಿ 18 ಜನರು ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದು, ಇದರಲ್ಲಿ ಐವರಿಗೆ ತಲಾ 50 ಸಾವಿರ ರೂ. ನೀಡಲಾಗುವುದು ಎಂದರು. ತರುಣ ಮಹಾಜನ, ಪಲ್ಲವಿ ಮಲಾನಿ ಮಾತನಾಡಿದರು. ಸಂಜನಾ ನಿರೂಪಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.