ಜಿಲ್ಲಾ ಖನಿಜ ನಿಧಿಯಿಂದ ಸಮಗ್ರ ಅಭಿವೃದ್ದಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿ ಸಚಿವ ಶ್ರೀರಾಮುಲು ನುಡಿ

Team Udayavani, Mar 27, 2022, 5:03 PM IST

ramulu

ಬಳ್ಳಾರಿ: ಗಣಿಪ್ರದೇಶಗಳ ಮತ್ತು ಗಣಿಬಾಧಿತ ಪ್ರದೇಶಗಳ ಜನರ ಸಮಗ್ರ ಅಭಿವೃದ್ಧಿಯೇ ಜಿಲ್ಲಾ ಖನಿಜ ನಿಧಿಯ ಆಶಯವಾಗಿದೆ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ನಗರದ ವಿಎಸ್‌ಕೆ ವಿವಿ ಸಭಾಂಗಣದಲ್ಲಿ ವಿವಿ, ಜಿಲ್ಲಾ ಖನಿಜ ನಿಧಿ ಪ್ರತಿಷ್ಠಾನದಿಂದ ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರದ ಸಮಾರೋಪದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿ ಅವರು ಮಾತನಾಡಿದರು.

ಕೆರೆ ನೀರನ್ನು ಕೆರೆಗೆ ಚೆಲ್ಲಿ, ಸಂಪಾದಿಸಿದ್ದನ್ನ ಸಮಾಜಕ್ಕೆ ಅರ್ಪಿಸಿ ಎಂಬ ಉದ್ದೇಶದೊಂದಿಗೆ ಗಣಿಪ್ರದೇಶಗಳ ಜನರ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2015ರಲ್ಲಿ ಐತಿಹಾಸಿಕ ನಿರ್ಣಯ ಕೈಗೊಂಡು ಈ ಡಿಎಂಎಫ್‌ ಯೋಜನೆ ಜಾರಿಗೆ ತಂದಿದ್ದಾರೆ. ಗಣಿಪ್ರದೇಶಗಳ ಜನರ ಸಮಗ್ರ ಅಭಿವೃದ್ಧಿ ಆಗಬೇಕು. ಆ ಭಾಗದ ಸಂಪನ್ಮೂಲ/ಆದಾಯ, ಆ ಭಾಗಕ್ಕೆ ಉಪಯೋಗ ಆಗಬೇಕೆಂದು ಮೊದಲ ಬಾರಿಗೆ ನಮ್ಮ ಸರ್ಕಾರ ಈ ಯೋಜನೆ ರೂಪಿಸಿದೆ ಎಂದರು.

ಕುಡಿಯುವ ನೀರು, ಆರೋಗ್ಯ, ಮಹಿಳಾ ಮಕ್ಕಳ ಕಲ್ಯಾಣ, ಕೌಶಲ್ಯ ಅಭಿವೃದ್ಧಿ, ಶಿಕ್ಷಣ ಹೀಗೆ ಮಹತ್ವದ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚೆ ನಡೆದಿದೆ. ಅ ಧಿಕಾರಿಗಳು, ತಜ್ಞರು, ಸ್ವಯಂ ಸೇವಾ ಸಂಸ್ಥೆಗಳು, ಪಾಲುದಾರರೆಲ್ಲರೂ ಸೇರಿ ಜಿಲ್ಲಾ ಖನಿಜ ನಿಧಿ ಅಡಿಯ ಉತ್ತಮ ಪ್ರಯೋಗಗಳ ಮೇಲೆ ಬೆಳಕು ಚೆಲ್ಲುತ್ತಾ ಉತ್ತಮ ಕಾರ್ಯಕ್ರಮಗಳ ಕುರಿತು ಈ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಚರ್ಚೆ ನಡೆಸಿರುವುದು ಶ್ಲಾಘನೀಯ ಎಂದರು.

ಡಿಎಂಎಫ್‌ ಅನುದಾನ ಬಳಕೆಗೆ ದೇಶದಲ್ಲೇ ಅತ್ಯುತ್ತಮ ಹಾಗೂ ನೂತನ ವಿಧಾನಗಳ ಕುರಿತು ಈ ಕಾರ್ಯಾಗಾರ ಬೆಳಕು ಚೆಲ್ಲುತ್ತಿದೆ. ಈ ರೀತಿಯ ಕಾರ್ಯಕ್ರಮಗಳಿಂದ ನಮ್ಮ ಡಿಎಂಎಫ್‌ ಅನುದಾನದ ಪ್ರತಿಯೊಂದು ರೂಪಾಯಿಯನ್ನೂ ಅರ್ಥಪೂರ್ಣವಾಗಿ ಬಳಸಬಹುದು ಎಂದ ಸಚಿವರು, ವೈಯಕ್ತಿಕ ಕಲ್ಯಾಣ ಮತ್ತು ಸಾಮಾಜಿಕ ಕಲ್ಯಾಣದ ಮೂಲಕ ಸಮಗ್ರ ಅಭಿವೃದ್ಧಿಯಾಗಬೇಕು. ಅಂದಾಗ ಮಾತ್ರ ಡಿಎಂಎಫ್‌ ಉದ್ದೇಶ ಈಡೇರುತ್ತದೆ ಎಂದರು.

56,369 ಕೋಟಿ ರೂ. ಡಿಎಂಎಫ್‌ ಅನುದಾನ ಸಂಗ್ರಹ

ಒಂದು ಮಾಹಿತಿ ಪ್ರಕಾರ ದೇಶಾದ್ಯಂತ ಕಳೆದ ಡಿಸೆಂಬರ್‌ವರೆಗೂ 5 ಕ್ಕೂ ಹೆಚ್ಚು ವರ್ಷಗಳಲ್ಲಿ ಸುಮಾರು 56,369 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಜೂನ್‌ವರೆಗೂ ಸುಮಾರು 24499 ಕೋಟಿ ರೂಪಾಯಿಗಳನ್ನ ವಿವಿಧ ಯೋಜನೆಗಳಿಗೆ ಬಳಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ವಿವರಿಸಿದರು. ಜಿಲ್ಲಾ ಖನಿಜ ನಿಧಿ ಅನುದಾನ ಸದ್ಬಳಕೆಗೆ ಕೇಂದ್ರ ಸರ್ಕಾರವು ಕಳೆದ ಜೂನ್‌ನಲ್ಲಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಇದನ್ನ ಬೇರೆ ಯಾವುದೇ ಕೆಲಸ ಡೈವರ್ಟ್‌ ಮಾಡಬಾರದು ಎನ್ನುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ನೀಡಲಾಗಿದೆ. ಅನುದಾನ ಬಳಕೆಯನ್ನು ಕೇಂದ್ರ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಅವರು ವಿವರಿಸಿದರು.

ಪರಿಶಿಷ್ಟರ ಅಭಿವೃದ್ಧಿಗೆ ಸರ್ಕಾರ ಬದ್ಧ

ರಾಜ್ಯ ಸರ್ಕಾರ ಕಳೆದ ಬಜೆಟ್‌ನಲ್ಲಿ 26,005 ಕೋಟಿ ರೂ.ಗಳಿದ್ದ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಇದೀಗ 28,234 ಕೋಟಿಗೆ ಹೆಚ್ಚಿಸಲಾಗಿದೆ. ಈ ವರ್ಷ 2,229 ಕೋಟಿ ರೂ. ಹೆಚ್ಚಳವಾಗಿದೆ. ಈ ಮೂಲಕ ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ಬದ್ಧ ಎಂಬುದನ್ನು ಈ ಮೂಲಕ ಸಾಬೀತುಪಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ವಿವರಿಸಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ರೂಪಿಸಿರೋ ಈ ಯೋಜನೆ ಫಲ ಇಂದು ನಮ್ಮ ಮಕ್ಕಳಿಗೆ ಲ್ಯಾಪ್‌ಟಾಪ್‌ ಮೂಲಕ ಸಿಗುತ್ತಿದೆ. ಇದರ ಸದುಪಯೋಗವನ್ನು ಪಿಎಚ್‌ಡಿ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಬಳಿಕ ಎಸ್‌ಸಿ, ಎಸ್‌ಟಿ ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು.

ವಿವಿ ಕುಲಪತಿ ಪ್ರೊ| ಸಿದ್ದು ಪಿ. ಅಲಗೂರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಸಕರಾದ ಈ. ತುಕಾರಾಂ, ಜಿ. ಸೋಮಶೇಖರರೆಡ್ಡಿ, ವೈ. ಎಂ. ಸತೀಶ್‌, ಮಾಜಿ ಸಂಸದೆ ಜೆ. ಶಾಂತಾ, ಜಿಲ್ಲಾ ಖನಿಜ ನಿಧಿ ಪ್ರತಿಷ್ಠಾನದ ವಿಶೇಷಾಧಿಕಾರಿ ರಮೇಶ್‌, ವಿ.ವಿ. ಕುಲಸಚಿವ ಪ್ರೊ| ರಮೇಶ್‌ ಓಲೇಕಾರ್‌, ಪ್ರೊ| ಎಸ್‌.ಸಿ. ಪಾಟೀಲ್‌, ಹಣಕಾಸು ಅಧಿಕಾರಿ ಡಾ| ಕೆ.ಸಿ. ಪ್ರಶಾಂತ್‌, ವಿವಿ ಸಿಂಡಿಕೇಟ್‌ ಸದಸ್ಯರು, ವಿದ್ಯಾ ವಿಷಯಕ ಪರಿಷತ್‌ ಸದಸ್ಯರು ಇದ್ದರು.

ಟಾಪ್ ನ್ಯೂಸ್

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Bellary; Darshan IT interrogation in jail

Bellary; ಜೈಲಿನಲ್ಲಿಂದು ದರ್ಶನ್‌ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Bajpe -ಕಟೀಲು ರಾಜ್ಯ ಹೆದ್ದಾರಿಯಲ್ಲಿ ಹೊಂಡ-ಗುಂಡಿ

2(1)

Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.