![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 28, 2022, 11:14 AM IST
ಚಿಂಚೋಳಿ: ಶಿವಶರಣೆ ಜಗನ್ಮಾತೆ ಅಕ್ಕಮಹಾದೇವಿ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮನಸ್ಸು ಪರಿಶುದ್ಧವಾಗುತ್ತದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ, ಪೂಜ್ಯ ಡಾ| ಬಸವಲಿಂಗ ಪಟ್ಟದೇವರು ನುಡಿದರು.
ದೇಗಲಮಡಿ ಗ್ರಾಮದಲ್ಲಿ ಪರಮ ಪೂಜ್ಯ ಡಾ| ಬಸವಲಿಂಗ ಅವಧೂತರ 10ನೇ ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಭಕ್ತರಿಗೆ ಆಶೀರ್ವಚನ ನೀಡಿದರು.
ಶರಣೆ ಅಕ್ಕಮಹಾದೇವಿ ವಚನಗಳನ್ನು ನಮ್ಮ ಬದುಕಿನಲ್ಲಿ ಹಾಸು ಹೊಕ್ಕಾಗಬೇಕು. ಮನಸ್ಸು ಪವಿತ್ರವಾಗಿದ್ದರೆ ದೇವರನ್ನು ಕಾಣಬಹುದು ಎಂದರು.
ಪೂಜ್ಯ ಡಾ| ಬಸವಲಿಂಗ ಅವದೂತರ ಆರ್ಶೀವಚನ ನೀಡಿ, ಭಕ್ತರು ಹಣೆಯ ಮೇಲೆ ವಿಭೂತಿ ಹಚ್ಚಿಕೊಂಡರೆ ನಾವು ಮಾಡಿದ ಪಾಪಗಳು ಪರಿಹಾರ ಆಗುತ್ತವೆ ಎಂದು ಹೇಳಿದರು.
ತಡೋಳ ಕಟ್ಟಿಮಠ ಸಂಸ್ಥಾನ ಹಿರೇಮಠದ ಶ್ರೀ ರಾಜೇಶ್ವರ ಶಿವಾಚಾರ್ಯರು ಮಾತನಾಡಿ, ಯಾರ ಮನೆಯಲ್ಲಿ ಭಜನೆ ಮತ್ತು ಭೋಜನ ಇರುತ್ತದೋ ಅಲ್ಲಿ ಸ್ವರ್ಗ ಮತ್ತು ಆನಂದ ಇರುತ್ತದೆ ಎಂದರು.
ಶಾಸಕ ಡಾ| ಅವಿನಾಶ ಜಾಧವ ಮಾತನಾಡಿ, ಅವಧೂತರ ಪುಣ್ಯಾಶ್ರಮಕ್ಕೆ ನಾನು ಶಾಸಕನಾಗಿ ಬಂದಿಲ್ಲ. ಮಠದ ಭಕ್ತನಾಗಿ ಬಂದಿದ್ದೇನೆ. ಅಧಿಕಾರ ಇರಲಿ, ಬಿಡಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಪೂಜ್ಯರ ಆಶೀರ್ವಾದ ನನ್ನ ಮೇಲಿರಲಿ ಎಂದರು.
ಕೇಂದ್ರ ಸಚಿವ ಭಗವಂತ ಖೂಬಾ, ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಡಿವೈಎಸ್ಪಿ ಬಸವೇಶ್ವರ ಹೀರಾ, ದೇಗಲಮಡಿ ಗ್ರಾಪಂ ಅಧ್ಯಕ್ಷೆ ಶೋಭಾ ಮುದ್ದಾ, ಉಮಾ ಪಾಟೀಲ, ಲಕ್ಷ್ಮಣ ಆವಂಟಿ, ಶ್ರೀಮಂತ ಕಟ್ಟಿಮನಿ, ಸಿಪಿಐ ಮಹಾಂತೇಶ ಪಾಟೀಲ, ಪಿಎಸ್ಐ ಮಂಜುನಾಥರೆಡ್ಡಿ, ಚಿತ್ರಶೇಖರ ಪಾಟೀಲ, ಶರಣಗೌಡ ಮುದ್ದಾ, ವಿವೇಕ ಪಾಟೀಲ, ಹಿರಿಯ ಪತ್ರಕರ್ತ ಶಾಮರಾವ ಚಿಂಚೋಳಿ, ಜಗನ್ನಾಥ ಶೇರಿಕಾರ, ಅವಿನಾಶ ಗೋಸುಲ, ಸಿದ್ಧಪ್ಪಗೌಡ ಮುದ್ದ ಇನ್ನಿತರರು ಭಾಗವಹಿಸಿದ್ದರು. ಕು. ಅನ್ವಿತಾ ಪಾಟೀಲ ಪ್ರಾರ್ಥಿಸಿದರು, ಬೀದರ ದೇವೇಂದ್ರ ಕರಂಜಿ ಸ್ವಾಗತಿಸಿದರು, ನವಲಿಂಗ ಪಾಟೀಲ ವಂದಿಸಿದರು. ಬೀದರ, ಜಹೀರಾಬಾದ, ಚಿಂಚೋಳಿ, ಹುಮನಾಬಾದ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.