ಗುತ್ತಿಗೆ ನೌಕರರಿಗಿಲ್ಲ 4 ತಿಂಗಳ ವೇತನ


Team Udayavani, Mar 28, 2022, 6:16 PM IST

19salary

ಹುಮನಾಬಾದ: ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ನಾಲ್ಕು ಜನ ಗುತ್ತಿಗೆ ನೌಕರರಿಗೆ ಕಳೆದ ನಾಲ್ಕು ತಿಂಗಳಿಂದ ಸಂಬಳ ಇಲ್ಲ. ಅಲ್ಲದೆ, ಏಪ್ರಿಲ್‌ 2020ರಿಂದ ಈವರೆಗೆ ಇಪಿಎಫ್‌, ಇಎಸ್‌ಐ ಪಾವತಿಯಾಗಿಲ್ಲ.

ಪಟ್ಟಣದ ಕೃಷಿ ಉತ್ಪನ ಮಾರುಕಟ್ಟೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ, ಡಾಟಾ ಎಂಟ್ರಿ, ಕಂಪ್ಯೂಟರ್‌ ಆಪರೇಟರ್‌ ಹುದ್ದೆಗಳ ನೇಮಕಕ್ಕೆ ಎಪಿಎಂಸಿ ಕಚೇರಿ ಟೆಂಡರ್‌ ಕರೆದು ರಾಯಚೂರ ಮೂಲದ ಸಿದ್ದೇಶ್ವರ ಸೆಕ್ಯೂರಿಟಿ ಸರ್ವಿಸ್‌ನೊಂದಿಗೆ ಒಪ್ಪಂದ ಕರಾರು ಮಾಡಿಕೊಂಡಿತ್ತು. ಆದರೆ, ಗುತ್ತಿಗೆ ಪಡೆದ ಸಂಸ್ಥೆಯವರು ಇಲ್ಲಿನ ಸಿಬ್ಬಂದಿಗಳಿಗೆ ಸೂಕ್ತ ಸಮಯಕ್ಕೆ ಸಂಬಳ ಹಾಗೂ ಇಪಿಎಫ್‌, ಇಎಸ್‌ಐ ಮಾತ್ರ ಪಾವತಿ ಮಾಡುತ್ತಿಲ್ಲ. ಸಂಬಳ ದೊರೆಯದ ಕಾರಣ ಅನೇಕ ಸಂಕಷ್ಟಗಳು ಎದುರಿಸುತ್ತಿರುವುದಾಗಿ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

ಪೂರ್ಣ ಸಂಬಳ ಇಲ್ಲ

ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಗುತ್ತಿಗೆ ಪಡೆದ ಸಂಸ್ಥೆಯವರು ಸಿಬ್ಬಂದಿಗೆ ಪೂರ್ಣ ಪ್ರಮಾಣದ ಸಂಬಳ ಪಾವತಿ ಮಾಡುತ್ತಿಲ್ಲ ಎಂದು ಸಿಬ್ಬಂದಿ ದೂರುತ್ತಿದ್ದಾರೆ. ಸರಾಸರಿ ಶೇ.60ರಿಂದ ಶೇ.65ರಷ್ಟು ಮಾತ್ರ ಸಂಬಳ ಪಾವತಿ ಮಾಡಲಾಗುತ್ತಿದೆ ಎಂದು ಸಿಬ್ಬಂದಿ ಆರೋಪಿಸುತ್ತಿದ್ದಾರೆ. ಹೊಟ್ಟೆಪಾಡಿಗಾಗಿ ದುಡಿಯುವರ ಸಂಬಳದಲ್ಲೂ ಕಡಿತಗೊಳಿಸುವುದು ಎಷ್ಟು ಸೂಕ್ತ ಎಂದು ಹೆಸರು ಹೇಳಲಿಚ್ಚಿಸದ ಸಿಬ್ಬಂದಿ ನೋವು ತೋಡಿಕೊಂಡಿದ್ದಾರೆ.

ನೋಟಿಸ್‌ ಜಾರಿ

ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಸೂಕ್ತ ಸಂಬಳ, ಇಪಿಎಫ್‌, ಇಎಸ್‌ಐ ಪಾವತಿ ಕುರಿತು ಕಚೇರಿ ಕಾರ್ಯದರ್ಶಿಗಳು ಅನೇಕ ನೋಟಿಸ್‌ ಜಾರಿ ಮಾಡಿದರು ಕೂಡ ಗುತ್ತಿಗೆ ಪಡೆದ ಸಂಸ್ಥೆ ಮಾತ್ರ ಅಧಿಕಾರಿಗಳ ಪತ್ರಕ್ಕೆ ಸೂಕ್ತ ಉತ್ತರ ನೀಡುತ್ತಿಲ್ಲ ಎಂಬುವುದು ತಿಳಿದುಬಂದಿದೆ.

ಕಳೆದ ವರ್ಷ 14-07-2021ರಂದು ಎಪಿಎಂಸಿ ಕಾರ್ಯದರ್ಶಿ ಅವರು ಕಾನೂನು ಕ್ರಮ ಕೈಗೊಳ್ಳುವ ಹಾಗೂ ಸಿಬ್ಬಂದಿಗಳ ಇಪಿಎಫ್‌, ಇಎಸ್‌ಐ ಹಾಗೂ ಜಿಎಸ್‌ಟಿ ಹಣ ಪಾವತಿ ಮಾಡುವಂತೆ ಎಚ್ಚರಿಕೆ ನೋಟಿಸ್‌ ಜಾರಿ ಮಾಡಿದರು. ಏಪ್ರಿಲ್‌ 2020 ರಿಂದ ಜೂನ್‌ 2021ರ ವರೆಗಿನ ಒಟ್ಟಾರೆ, ಇಪಿಎಫ್‌ ಸುಮಾರು, 1.35 ಲಕ್ಷ ಹಾಗೂ ಇಎಸ್‌ಐ ಸುಮಾರು 35 ಸಾವಿರ ಸಿಬ್ಬಂದಿ ಖಾತೆಗೆ ಜಮಾ ಆಗಿಲ್ಲ. ಅಲ್ಲದೆ, ಜೂನ್‌ 2021 ರಿಂದ ಮಾ.2022ರ ವರೆಗೂ ಇಪಿಎಫ್‌, ಇಎಸ್‌ಐ ಪಾವತಿಯಾಗಿಲ್ಲ.

ಎಪಿಎಂಸಿ ಗುತ್ತಿಗೆ ಸಿಬ್ಬಂದಿಗಳ ಸಂಬಳ ಪಾವತಿಗೆ ಗುತ್ತಿಗೆ ಪಡೆದ ಸಂಸ್ಥೆಗೆ ಚೆಕ್‌ ಮೂಲಕ ಹಣ ಪಾವತಿ ಮಾಡಲಾಗುತ್ತದೆ. ಗುತ್ತಿಗೆ ಪಡೆದ ಸಂಸ್ಥೆಯು ಆಯಾ ಸಿಬ್ಬಂದಿ ಖಾತೆಗೆ ಸಂಬಳ ಹಾಗೂ ಇಪಿಎಫ್‌, ಇಎಸ್‌ಐ ಹಾಗೂ ಜಿಎಸ್‌ಟಿ ಹಣ ಪಾವತಿ ಮಾಡಬೇಕಾಗುತ್ತದೆ. ಈ ಹಿಂದಿನ ಕಾರ್ಯದರ್ಶಿಗಳು ನೋಟಿಸ್‌ ನೀಡಿ ಎಚ್ಚರಿಸುವ ಕೆಲಸ ಮಾಡಿದ್ದು, ಇದೀಗ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಈ ಕುರಿತು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಕ್ತ ವರದಿ ಸಲ್ಲಿಸಲಾಗುವುದು. ಹೊಸ ಟೆಂಡರ್‌ ಕರೆದು ಬೇರೆ ಸಂಸ್ಥೆಗೆ ಗುತ್ತಿಗೆ ನೀಡಲಾಗುವುದು. -ಅನಿಲಕುಮಾರ ಹಾದಿಮನಿ, ಎಪಿಎಂಸಿ ಪ್ರಭಾರ ಕಾರ್ಯದರ್ಶಿ

-ದುರ್ಯೋಧನ ಹೂಗಾರ

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.