ಬಿಸಿಲಿನ ದಾಳಿ; ಬೇಸಗೆಗೆ ಮುನ್ನವೇ ಭಾರೀ ಸೆಖೆ; ರಾಯಚೂರು, ಕಲಬುರಗಿ ಕೆಂಡ


Team Udayavani, Mar 29, 2022, 7:00 AM IST

ಬಿಸಿಲಿನ ದಾಳಿ; ಬೇಸಗೆಗೆ ಮುನ್ನವೇ ಭಾರೀ ಸೆಖೆ; ರಾಯಚೂರು, ಕಲಬುರಗಿ ಕೆಂಡ

ಬೆಂಗಳೂರು/ಹೊಸದಿಲ್ಲಿ: ಎರಡು ವರ್ಷಗಳ ಹಿಂದೆ ಕೊರೊನಾ ಲಾಕ್‌ಡೌನ್‌ನಿಂದಾಗಿ ಜನರೆಲ್ಲರೂ ಮನೆಯಲ್ಲಿಯೇ ಇದ್ದರು. ಪ್ರಸಕ್ತ ವರ್ಷ ಬಿಸಿಲಿನ ಪ್ರಖರತೆಯಿಂದ ಮನೆ ಯೊಳಗೇ ಕುಳಿತುಕೊಳ್ಳುವಂತೆ ಆಗಲಿದೆಯೇ?

ಈ ವರ್ಷ ಬೇಸಗೆ ಪ್ರವೇಶದ ಸಂದರ್ಭ ದಲ್ಲಿಯೇ ರಾಜ್ಯದ ವಿವಿಧ ಭಾಗಗಳಲ್ಲಿ ಜನರು ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದಾರೆ. ಸೋಮವಾರ ರಾಯಚೂರಿನಲ್ಲಿ 41.4 ಡಿಗ್ರಿ ಸೆ., ಕಲಬುರಗಿಯಲ್ಲಿ 39.8 ಡಿಗ್ರಿ ಸೆ. ತಾಪ ಮಾನ ದಾಖಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಸಕ್ತ ವರ್ಷ ಕನಿಷ್ಠ 2ರಿಂದ 3 ಡಿಗ್ರಿ ಸೆ. ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಸಾಮಾನ್ಯವಾಗಿ ಬೇಸಗೆ ಆರಂಭ ಎಪ್ರಿಲ್‌ನಿಂದ. ಆದರೆ ಈ ವರ್ಷ ಅದಕ್ಕೆ ಮುನ್ನವೇ ಪ್ರಖರ ಬಿಸಿಲು ಕಾಡ ಲಾರಂಭಿಸಿದೆ. ಪ್ರತೀ ಬಾರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಎಪ್ರಿಲ್‌ ಬಳಿಕ ತಾಪಮಾನ ಏರಿಕೆಯಾಗುತ್ತಿತ್ತು. ಆದರೆ ಈ ಬಾರಿ ಕನಿಷ್ಠ 15 ದಿನ ಮೊದಲೇ ಬಿಸಿಲಿನ ಪ್ರಖರತೆ ಕಾಡುತ್ತಿದ್ದು, ಜನರು ತತ್ತರಿಸುತ್ತಿದ್ದಾರೆ. ಕಲಬುರಗಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ ಜಿಲ್ಲೆಗಳಲ್ಲಿ ರಣ ಬಿಸಿಲು ರಾಚುತ್ತಿದೆ.

41.5 ಡಿಗ್ರಿ ಸೆ. ದಾಖಲು
ರಾಯಚೂರು ಜಿಲ್ಲೆಯಲ್ಲಿ ಸೋಮವಾರ 41.5 ಡಿಗ್ರಿ ಸೆ., ಕಲಬುರಗಿಯಲ್ಲಿ 39.8 ಡಿಗ್ರಿ ಸೆ. ದಾಖಲಾಗಿದೆ. ಇದು 44 -45 ಡಿಗ್ರಿ ಸೆ.ವರೆಗೂ ಹೆಚ್ಚಳವಾಗಬಹುದು. ಸದ್ಯಕ್ಕಂತೂ ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನ ಕಡಿಮೆಯಾಗುವ ಲಕ್ಷಣಗಳಿಲ್ಲ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಕೂಡ 40 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಬಿಸಿಲಿನ ಪ್ರಖರತೆ ಮತ್ತಷ್ಟು ಹೆಚ್ಚಾಗುವ ಸಂಭವ ಇದೆ.

ಸದ್ಯ ಕರಾವಳಿಗಿಲ್ಲ ಆತಂಕ
ಕರಾವಳಿ, ದ. ಒಳನಾಡಿನ ಅಲ್ಲಲ್ಲಿ ಮಳೆ ಯಾಗು ತ್ತಿರುವುದರಿಂದ ತಾಪಮಾನ ಸದ್ಯ ಹೆಚ್ಚುವ ಲಕ್ಷಣಗಳಿಲ್ಲ. ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ಗರಿಷ್ಠ ತಾಪ ಮಾನ 36.5 ಡಿಗ್ರಿ ಸೆ. ದಾಖಲಾಗಿತ್ತು. ಮಂಗಳೂರು ವಿಮಾನ ನಿಲ್ದಾಣ ದಲ್ಲಿ 33.7 ಡಿಗ್ರಿ ಸೆ. ಮತ್ತು ಪಣಂಬೂರಿನಲ್ಲಿ 35.8 ಡಿಗ್ರಿ ಸೆ. ಇತ್ತು.

ಇದನ್ನೂ ಓದಿ:ನಾಲ್ಕು ಲಕ್ಷ ಬಿಪಿಎಲ್‌ ಅರ್ಜಿಗಳಿಗೆ ತಿಂಗಳಲ್ಲಿ ಮುಕ್ತಿ: ಉಮೇಶ್‌ ಕತ್ತಿ

2 ದಿನ ಗುಡುಗು ಸಹಿತ ಮಳೆ
ಮುಂದಿನ 3-4 ದಿನಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳು ಮತ್ತು ಕರಾ ವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ  ಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

ಉತ್ತರಕ್ಕೆ ಬಿಸಿಗಾಳಿ ಭೀತಿ
ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜಸ್ಥಾನದ ಪಶ್ಚಿಮ ಮತ್ತು ಪೂರ್ವ ಭಾಗ, ಮಧ್ಯಪ್ರದೇಶದ ಪಶ್ಚಿಮ ಮತ್ತು ಉತ್ತರ ಭಾಗ, ಉತ್ತರ ಪ್ರದೇಶದ ದಕ್ಷಿಣ ಭಾಗ, ಒಡಿಶಾದ ಕೆಲವು ಪ್ರದೇಶಗಳು, ಮಹಾರಾಷ್ಟ್ರ, ಸೌರಾಷ್ಟ್ರ, ಪ್ರದೇಶಗಳಲ್ಲಿ ಮಾ.18-ಎ.1ರ ಅವಧಿಯಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

 

 

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.