ಎಸ್ಸಿಪಿ-ಟಿಎಸ್ಪಿ ಅನುದಾನ ಡಿ.ಸಿ. ಮೂಲಕ ಬಿಡುಗಡೆ
Team Udayavani, Mar 29, 2022, 6:55 AM IST
ಬೆಂಗಳೂರು: ಎಸ್ಸಿಪಿ-ಟಿಎಸ್ಪಿ ಕಾಯ್ದೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದ ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆಯಾಗುವ ಅನುದಾನವನ್ನು ಮುಂದಿನ ಆರ್ಥಿಕ ವರ್ಷ ದಿಂದ ಜಿಲ್ಲಾಧಿಕಾರಿ ಗಳಿಗೆ ಹಣ ಬಿಡುಗಡೆ ಮಾಡಿ ಶಾಸಕರ ಮೂಲಕ ವಿನಿಯೋಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇಲಾಖಾವಾರು ಬೇಡಿಕೆಗಳ ಮೇಲಿನ ಚರ್ಚೆಗೆ ಅವರು ಉತ್ತರಿಸಿದರು.ಎಸ್ಸಿಪಿ-ಟಿಎಸ್ಪಿ ಕಾಯಿದೆ ಯಡಿ ಬಿಡುಗಡೆಯಾಗುವ ಅನುದಾನ ವನ್ನು ಇತರ ಕೆಲಸಗಳಿಗೆ ಬಳಸದಂತೆ ಕಾಯಿದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ವಿನಯ ಸಾಮರಸ್ಯ
ರಾಜ್ಯದಲ್ಲಿ ಅಸ್ಪೃಶ್ಯತೆ ವಿರುದ್ಧ ಜನಾಂದೋಲನ ರೂಪಿಸಲು “ವಿನಯ ಸಾಮರಸ್ಯ’ ಯೋಜನೆ ರೂಪಿಸ ಲಾಗುವುದು. ಇತ್ತೀಚೆಗೆ ಕೊಪ್ಪಳದಲ್ಲಿ ದಲಿತ ಸಮು ದಾಯದ 2 ವರ್ಷದ ವಿನಯ್ ಎಂಬ ಮಗು ಪೋಷಕರ ಕೈತಪ್ಪಿಸಿ ದೇವಸ್ಥಾನ ಪ್ರವೇಶಿಸಿತು ಎಂಬ ಕಾರಣಕ್ಕೆ ಪೋಷಕರಿಗೆ ದಂಡ ವಿಧಿಸಿದಂತಹ ಅಮಾನವೀಯ ಘಟನೆ ನಡೆದಿದೆ. ಮುಂದೆ ಇಂತಹ ಘಟನೆ ಗಳು ಮರುಕಳಿಸ ಬಾರದೆಂಬ ಉದ್ದೇಶದಿಂದ ಆ ಮಗುವಿನ ಹೆಸರಿನಲ್ಲಿ ವಿನಯ ಸಾಮರಸ್ಯ ಯೋಜನೆ ಜಾರಿಗೊಳಿಸಿ, 6020 ಗ್ರಾಮ ಪಂಚಾಯತ್ಗಳಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ದೇವಸ್ಥಾನದ ಬೀಗ ಮುರಿದು ಕಳ್ಳತನಕ್ಕೆ ಯತ್ನ : ಇಬ್ಬರು ಬಾಲಕರು ವಶಕ್ಕೆ
ಕಾಮಗಾರಿ ಗುತ್ತಿಗೆ ಮಿತಿ ಹೆಚ್ಚಳ
ಸರಕಾರದ ಇಲಾಖೆಗಳಲ್ಲಿ 50 ಲಕ್ಷ ರೂ.ಮೊತ್ತದ ಕಾಮಗಾರಿ ಗುತ್ತಿಗೆಯಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸುವ ನೀತಿ ಇದ್ದು, ಇದನ್ನು ಒಂದು ಕೋಟಿ ರೂ.ಗೆ ಹೆಚ್ಚಿಸಬೇಕೆಂಬ ಆಗ್ರಹವಿದೆ. ಈ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅಂತರ್ಜಾತಿ ವಿವಾಹಕ್ಕೆ ನೆರವು
ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಆರ್ಥಿಕ ನೆರವು ಒದಗಿಸಲಾಗುತ್ತಿದ್ದು, ಸುಮಾರು 2.5 ಲಕ್ಷ ಮಂದಿಗೆ ಬಾಕಿ ಇರುವ ಹಣ ನೀಡಲು 151 ಕೋ. ರೂ. ಬಿಡುಗಡೆ ಮಾಡಲಾಗಿದೆ. 2022-23ನೇ ಸಾಲಿನಲ್ಲಿ 50 ಸಾವಿರ ಮಂದಿಗೆ ಐಎಎಸ್, ಐಪಿಎಸ್ ಸಹಿತ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.