ಆಧುನಿಕ ಭಗೀರಥನಿಗೆ ಪದ್ಮಶ್ರೀ: ಊರಿನಲ್ಲಿ ಸಂಭ್ರಮ


Team Udayavani, Mar 29, 2022, 7:05 AM IST

ಆಧುನಿಕ ಭಗೀರಥನಿಗೆ ಪದ್ಮಶ್ರೀ: ಊರಿನಲ್ಲಿ ಸಂಭ್ರಮ

ವಿಟ್ಲ: ಬರಡು ಭೂಮಿಯಲ್ಲಿ ಸುರಂಗ ಕೊರೆಯುವ ಮೂಲಕ ಗಂಗೆ ಯನ್ನು ಒಲಿಸಿಕೊಂಡ ಆಧುನಿಕ ಭಗೀರಥ ಅಮೈ ಮಹಾಲಿಂಗ ನಾಯ್ಕ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಇತ್ತ ಅವರ ಹುಟ್ಟೂರಿನಲ್ಲಿ ಸಂಭ್ರಮ ಮನೆಮಾಡಿತ್ತು.

ಈ ಸಂದರ್ಭ ಮಹಾಲಿಂಗ ಅವರು ತುಳುನಾಡಿನ ಕಾರ್ಮಿಕರು ಧರಿಸುವ ಮುಟ್ಟಾಳೆಯನ್ನು ಧರಿಸಿ ಗಮನ ಸೆಳೆದರು. ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿಗೆ ನಮನ ಸಲ್ಲಿಸಿ ಪುರಸ್ಕಾರವನ್ನು ಸ್ವೀಕರಿಸಿದರು.

ರವಿವಾರ ಪಯಣ
ಮಹಾಲಿಂಗ ಅವರು ಮೊಮ್ಮಗ ಉದಯ ಅವರೊಂದಿಗೆ ರವಿವಾರ ದಿಲ್ಲಿಗೆ ಪಯಣ ಬೆಳೆಸಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ವಿಮಾನ ಪ್ರಯಾಣಕ್ಕೂ ಮುನ್ನ ಮಹಾಲಿಂಗ ನಾಯ್ಕ ಅವರ ಯೋಗ ಕ್ಷೇಮ ವಿಚಾರಿಸಲಾಗಿತ್ತು. ಕ್ಯಾಬ್‌, ವಿಮಾನ ಪ್ರಯಾಣ ವೆಚ್ಚಗಳನ್ನು ಸರಕಾರವೇ ಭರಿಸಿತ್ತು. ಬೆಳಗ್ಗೆ ಕ್ಯಾಬ್‌ನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿದ ಅವರು 11.55ರ ವಿಮಾನವನ್ನು ಏರಿದರು. ಅದು ಬೆಂಗಳೂರಿನ ಮೂಲಕ ದಿಲ್ಲಿಗೆ ಹಾರಿತು. ಸಂಜೆ 6ಕ್ಕೆ ದಿಲ್ಲಿಗೆ ತಲುಪಿ ಅಶೋಕ ಹೊಟೇಲಲ್ಲಿ ವಿಶ್ರಾಂತಿ ಪಡೆದರು.ಪ್ರಧಾನಿ, ರಾಷ್ಟ್ರಪತಿಯವರಲ್ಲಿ ಮರಾಟಿಯಲ್ಲಿ ಮಾತಾಡಿದೆ

ಮಹಾಲಿಂಗ ನಾಯ್ಕ ಅವರು ಉದಯವಾಣಿ ಪ್ರತಿನಿಧಿ ಜತೆ ಮಾತನಾಡಿ, “ನನಗೆ ಇಂದು ಅತೀವ ಸಂತಸವಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಜತೆ ಮಾತನಾಡಿದೆ. ಹಿಂದಿ ಭಾಷೆ ಗೊತ್ತಿಲ್ಲದೇ ಇದ್ದರೂ ಮರಾಟಿ ಭಾಷೆಯಲ್ಲಿ ಮಾತನಾಡಿದೆ ಮತ್ತು ಅವರ ಭಾವದಲ್ಲಿ ಮಾತುಗಳನ್ನು ಅರ್ಥೈಸಿಕೊಂಡಿದ್ದೇನೆ. ನಾಳೆ ದಿಲ್ಲಿಯಲ್ಲಿ ಮಿಲಿಟರಿ ಭವನ ಇತ್ಯಾದಿ ಪ್ರವಾಸಿ ಕೇಂದ್ರಗಳನ್ನು ವೀಕ್ಷಿಸಿ ಬಳಿಕ ಊರಿಗೆ ಹಿಂದಿರುಗಲು ವಿಮಾನದ ವ್ಯವಸ್ಥೆಯನ್ನು ಸರಕಾರ ಮಾಡಿದೆ. ಮಾ. 30ಕ್ಕೆ ಊರಿಗೆ ತಲುಪುತ್ತೇನೆ ಎಂದರು.

ಹಳ್ಳಿಯಲ್ಲಿ ಸಂಭ್ರಮ
ಅಮೈ ಮಹಾಲಿಂಗ ನಾಯ್ಕ ಅವರಿಗೆ ದಿಲ್ಲಿಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಂತೆ ಹುಟ್ಟೂರಾದ ಅಮೈಯಲ್ಲಿ ಟಿವಿ ವೀಕ್ಷಿಸುತ್ತ ಮಹಾಲಿಂಗ ನಾಯ್ಕ ಅವರ ಅಭಿಮಾನಿಗಳು, ಹಿತೈಷಿಗಳು ಸಂಭ್ರಮ ಪಟ್ಟರು.ಅವರ ಪತ್ನಿ ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಸಂಭ್ರಮಪಟ್ಟರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.