ಕಾರ್ಮಿಕ ಸಂಘಟನೆಗಳ ಮುಷ್ಕರ

ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳಲಿವೆ ಕಾರ್ಮಿಕ ಸಂಹಿತೆಗಳು: ಪತ್ತಾರ

Team Udayavani, Mar 29, 2022, 12:02 PM IST

6

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಾರ್ಮಿಕ ಸಂಘಟನೆಗಳ ಒಕ್ಕೂಟ ರಾಷ್ಟ್ರವ್ಯಾಪಿ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮುಷ್ಕರ ನಡೆಸಲಾಯಿತು.

ಜೆಸಿಟಿಯು ಸಂಚಾಲಕ ಮಹೇಶ ಪತ್ತಾರ ಮಾತನಾಡಿ, ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳಲಿವೆ. ದೇಶದ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸರಕಾರಗಳು ಮುಂದಾಗಬೇಕು. ರೈತರ ಐತಿಹಾಸಿಕ ಹೋರಾಟಕ್ಕೆ ಮಣಿದ ಮೋದಿ ಸರಕಾರ ಕೃಷಿ ಕಾನೂನುಗಳನ್ನು ವಾಪಸ್‌ ಪಡೆದಿದೆ. ಆದರೆ ಅವರದ್ದೇ ಸರಕಾರ ರಾಜ್ಯದಲ್ಲಿ ರೈತ ವಿರೋಧಿ ಎಪಿಎಂಸಿ, ಭೂ ಸುಧಾರಣಾ, ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆಗಳನ್ನು ಜಾರಿ ಮಾಡುತ್ತಿದೆ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕೂಡಲೇ ಈ ಕಾನೂನುಗಳನ್ನು ವಾಪಸ್‌ ಪಡೆಯಲಿ. ರಾಜ್ಯ ಸರಕಾರ ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡಕೂಡದೆಂದು ಒತ್ತಾಯಿಸಿದರು.

ಬೆಲೆ ಏರಿಕೆ ನಿಯಂತ್ರಣ, 26 ಸಾವಿರ ಕನಿಷ್ಟ ವೇತನ ಜಾರಿ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ, ಸಾರ್ವಜನಿಕ ವಲಯದ ಖಾಸಗೀಕರಣ ತಡೆಯುವುದು ಸೇರಿದಂತೆ 12 ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಪ್ರತಿಭಟನೆ ನಡೆಸಿತು.

ಸರಕಾರ ನಮ್ಮ ಬೇಡಿಕೆಗಳಿಗೆ ಕೂಡಲೇ ಸ್ಪಂದಿಸದಿದ್ದರೆ ರೈತ ಕಾರ್ಮಿಕರ ಐಕ್ಯತೆಯ ಬೃಹತ್‌ ಹೋರಾಟಗಳು ದೇಶದಲ್ಲಿ ರೂಪಗೊಳ್ಳಲಿವೆ ಎಂದು ಎಚ್ಚರಿಸಿದರು. ಕಾರ್ಮಿಕ ಮುಖಂಡರಾದ ಸ್ಟಿಫನ್‌ ಜಯಚಂದ್ರ, ದೇವಾನಂದ ಜಗಾಪುರ, ಅಶೋಕ ಬಾರ್ಕಿ, ವಿ.ಕೆ. ಬನ್ನಿಗೋಳ, ಗುರುಸಿದ್ದಪ್ಪ ಅಂಬಿಗೇರ, ಎ.ಎಸ್‌.ಪೀರಜಾದೆ, ರೈತ ಮುಖಂಡ ಬಿ.ಎಸ್‌.ಸೊಪ್ಪಿನ ಮಾತನಾಡಿದರು. ಇಲ್ಲಿನ ಬಸವವನದಿಂದ ಮೆರವಣಿಗೆ ಆರಂಭವಾಯಿತು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಲಾಯಿತು.

ನಂತರ ತಹಶೀಲ್ದಾರ್‌ ಮೂಲಕ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅಮೃತ ಇಜಾರಿ, ಬಾಬಾಜಾನ ಮುಧೋಳ, ಶಿವಗಂಗಾ ಹೆಬ್ಬಳ್ಳಿ, ರವೀಂದ್ರ ಪತ್ತಾರ, ಆನಂದ ಬಡಿಗೇರ, ಎಂ.ಎಚ್‌. ಮುಲ್ಲಾ, ಬಸೀರ ಮುಧೋಳ, ಹುಲಿಗೆಮ್ಮ ಚಲವಾದಿ, ಅನ್ನಪೂರ್ಣ ಕುಂಕುರಮಠ, ಬಸಣ್ಣ ನೀರಲಗಿ, ಚಿದಾನಂದ ಸವದತ್ತಿ, ದುರ್ಗಪ್ಪ ಪೂಜಾರಿ, ರಮೇಶ ಭೂಸ್ಲೆ, ಪುಂಡಲೀಕ ಬಡಿಗೇರ, ಪ್ರವೀಣ ಶಿಂಪೇರ, ದಾನಮ್ಮ ಕುಸ್ತಿ ಸೇರಿದಂತೆ ಹಮಾಲಿ, ಕಟ್ಟಡ, ಸ್ಕೀಂ ನೌಕರರು, ಬೀದಿಬದಿ ವ್ಯಾಪಾರಸ್ಥರು, ಅಟೋರಿಕ್ಷಾ ಚಾಲಕರು, ವಿವಿಧ ಫ್ಯಾಕ್ಟರಿ ಕಾರ್ಮಿಕರು, ಬ್ಯಾಂಕ್‌, ವಿಮಾ ನೌಕರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.